ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಬೆಳ್ಳಾರೆ ವಿದ್ಯುತ್ ಸಬ್ ಸ್ಟೇಶನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶ ಮೇ.21 ರಂದು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ಗಂಟೆಯ ನಡೆಯಲಿದೆ ಎಂದು ಭಾಕಿಸಂ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಡಿಸೆಂಬರ್ ನಂತರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ತೋಟಕ್ಕೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಒಂದು ಕಡೆ ಲೋವೋಲ್ಟೇಜ್ ಸಮಸ್ಯೆ ಇನ್ನೊಂದು ಕಡೆ ಗುಣಮಟ್ಟ ವಿದ್ಯುತ್ ಇಲ್ಲದ ಸಮಸ್ಯೆ. ಇದೆರಡೂ ಕೃಷಿಕರಿಗೆ , ಉದ್ಯಮಿಗಳಿಗೆ ತೀರಾ ಸಮಸ್ಯೆಯಾಗಿದೆ. ಇತರ ಜಿಲ್ಲೆ, ತಾಲೂಕುಗಳಿಗೆ ಹೋಲಿಸಿದರೆ ಇಂತಹ ಸಮಸ್ಯೆ ಅಲ್ಲಿ ಇಲ್ಲವಾಗಿದೆ. ಇಲ್ಲಿನ ಸಮಸ್ಯೆಗೆ ಮುಖ್ಯ ಕಾರಣ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಕೆಲಸ ಆಗದೇ ಇರುವುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಸಬ್ ಸ್ಟೇಶನ್ ಕೆಲಸ ಶೇ.90 ಮುಗಿದರೂ ನಂತರದ ಕೆಲಸ ಸ್ಥಗಿತವಾಗಿದೆ. ಕುಂಬ್ರ ಸಬ್ ಸ್ಟೇಶನ್ ಕೆಲಸವೂ ಪೂರ್ತಿಯಾಗಿಲ್ಲ. ಹೀಗಾಗಿ ಎರಡೂ ಕೆಲಸಗಳು ತಕ್ಷಣವೇ ಆರಂಭವಾಗಬೇಕು , ಮುಂದಿನ ಅವಧಿಗೆ ಈ ಸಮಸ್ಯೆ ನಿವಾರಣೆಯಾಗಬೇಕು ಎಂದು ಬಳಕೆದಾರರು ಎಲ್ಲರೂ ಒಂದಾಗಿ ಒತ್ತಾಯಿಸಬೇಕಿದೆ ಎಂದು ಪ್ರಕಟಣೆಯಲ್ಲಿ ಭಾರತೀಯ ಕಿಸಾನ್ ಸಂಘ ತಿಳಿಸಿದೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…