ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಬೆಳ್ಳಾರೆ ವಿದ್ಯುತ್ ಸಬ್ ಸ್ಟೇಶನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶ ಮೇ.21 ರಂದು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ಗಂಟೆಯ ನಡೆಯಲಿದೆ ಎಂದು ಭಾಕಿಸಂ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಡಿಸೆಂಬರ್ ನಂತರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ತೋಟಕ್ಕೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಒಂದು ಕಡೆ ಲೋವೋಲ್ಟೇಜ್ ಸಮಸ್ಯೆ ಇನ್ನೊಂದು ಕಡೆ ಗುಣಮಟ್ಟ ವಿದ್ಯುತ್ ಇಲ್ಲದ ಸಮಸ್ಯೆ. ಇದೆರಡೂ ಕೃಷಿಕರಿಗೆ , ಉದ್ಯಮಿಗಳಿಗೆ ತೀರಾ ಸಮಸ್ಯೆಯಾಗಿದೆ. ಇತರ ಜಿಲ್ಲೆ, ತಾಲೂಕುಗಳಿಗೆ ಹೋಲಿಸಿದರೆ ಇಂತಹ ಸಮಸ್ಯೆ ಅಲ್ಲಿ ಇಲ್ಲವಾಗಿದೆ. ಇಲ್ಲಿನ ಸಮಸ್ಯೆಗೆ ಮುಖ್ಯ ಕಾರಣ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಕೆಲಸ ಆಗದೇ ಇರುವುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಸಬ್ ಸ್ಟೇಶನ್ ಕೆಲಸ ಶೇ.90 ಮುಗಿದರೂ ನಂತರದ ಕೆಲಸ ಸ್ಥಗಿತವಾಗಿದೆ. ಕುಂಬ್ರ ಸಬ್ ಸ್ಟೇಶನ್ ಕೆಲಸವೂ ಪೂರ್ತಿಯಾಗಿಲ್ಲ. ಹೀಗಾಗಿ ಎರಡೂ ಕೆಲಸಗಳು ತಕ್ಷಣವೇ ಆರಂಭವಾಗಬೇಕು , ಮುಂದಿನ ಅವಧಿಗೆ ಈ ಸಮಸ್ಯೆ ನಿವಾರಣೆಯಾಗಬೇಕು ಎಂದು ಬಳಕೆದಾರರು ಎಲ್ಲರೂ ಒಂದಾಗಿ ಒತ್ತಾಯಿಸಬೇಕಿದೆ ಎಂದು ಪ್ರಕಟಣೆಯಲ್ಲಿ ಭಾರತೀಯ ಕಿಸಾನ್ ಸಂಘ ತಿಳಿಸಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…