Advertisement

ಮೇ.21 : ಬಾಳಿಲದಲ್ಲಿ ವಿದ್ಯುತ್ ಗ್ರಾಹಕರ ಸಮಾವೇಶ

Share

ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಬೆಳ್ಳಾರೆ ವಿದ್ಯುತ್ ಸಬ್ ಸ್ಟೇಶನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶ ಮೇ.21 ರಂದು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ಗಂಟೆಯ ನಡೆಯಲಿದೆ ಎಂದು ಭಾಕಿಸಂ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ಡಿಸೆಂಬರ್ ನಂತರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ತೋಟಕ್ಕೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಒಂದು ಕಡೆ ಲೋವೋಲ್ಟೇಜ್ ಸಮಸ್ಯೆ  ಇನ್ನೊಂದು ಕಡೆ ಗುಣಮಟ್ಟ ವಿದ್ಯುತ್ ಇಲ್ಲದ ಸಮಸ್ಯೆ.  ಇದೆರಡೂ ಕೃಷಿಕರಿಗೆ , ಉದ್ಯಮಿಗಳಿಗೆ ತೀರಾ ಸಮಸ್ಯೆಯಾಗಿದೆ. ಇತರ ಜಿಲ್ಲೆ, ತಾಲೂಕುಗಳಿಗೆ ಹೋಲಿಸಿದರೆ ಇಂತಹ ಸಮಸ್ಯೆ ಅಲ್ಲಿ ಇಲ್ಲವಾಗಿದೆ. ಇಲ್ಲಿನ ಸಮಸ್ಯೆಗೆ  ಮುಖ್ಯ ಕಾರಣ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಕೆಲಸ ಆಗದೇ ಇರುವುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಸಬ್ ಸ್ಟೇಶನ್  ಕೆಲಸ ಶೇ.90 ಮುಗಿದರೂ ನಂತರದ ಕೆಲಸ ಸ್ಥಗಿತವಾಗಿದೆ. ಕುಂಬ್ರ ಸಬ್ ಸ್ಟೇಶನ್ ಕೆಲಸವೂ ಪೂರ್ತಿಯಾಗಿಲ್ಲ. ಹೀಗಾಗಿ ಎರಡೂ ಕೆಲಸಗಳು  ತಕ್ಷಣವೇ  ಆರಂಭವಾಗಬೇಕು , ಮುಂದಿನ ಅವಧಿಗೆ ಈ ಸಮಸ್ಯೆ ನಿವಾರಣೆಯಾಗಬೇಕು ಎಂದು ಬಳಕೆದಾರರು ಎಲ್ಲರೂ ಒಂದಾಗಿ ಒತ್ತಾಯಿಸಬೇಕಿದೆ ಎಂದು ಪ್ರಕಟಣೆಯಲ್ಲಿ  ಭಾರತೀಯ ಕಿಸಾನ್ ಸಂಘ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

7 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

19 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 day ago