ಸುಬ್ರಹ್ಮಣ್ಯ: ದ.ಕ ಜಿಲ್ಲಾ ಮಲೆಕುಡಿಯರ ಸಂಘದ ಜಿಲ್ಲಾ ಮಟ್ಟದ ಸಮಾವೇಶವು ಮೇ.25 ರಂದು ಶನಿವಾರ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಿ.ಮಲೆಕುಡಿಯರ ಸಂಘದ ತಾಲೂಕು ಅಧ್ಯಕ್ಷ ಪುರುಷೋತ್ತಮ ಗುಂಡ್ಯ ತಿಳಿಸಿದರು.
ಸಮಾವೇಶದಲ್ಲಿ ಮಲೆಕುಡಿಯ ಸಮುದಾಯದವರಿಗೆ ಕಿರಿಯ ಮತ್ತು ಹಿರಿಯ ವಿಭಾಗಕ್ಕೆ ಪ್ರತ್ಯೇಕವಾಗಿ ಆಟೋಟ ಸ್ಪರ್ಧೆಗಳು ನಡೆಯಲಿವೆ. ರಾತ್ರಿ ಸಭಾ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದ್ದಾರೆ. ರಾತ್ರಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಜಿ ಉಜಿರೆ ವಹಿಸಲಿರುವರು. ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಎಸ್ ಅಂಗಾರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ. ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಚ್. ಎಂ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಮನ್ವಯಾಧಿಕಾರಿ ಹೇಮಲಾ, ಜಿ.ಪಂ ಸದಸ್ಯೆ ಆಶಾತಿಮ್ಮಪ್ಪ, ತಾ.ಪಂ ಸದಸ್ಯ ಅಶೋಕ ನೆಕ್ರಾಜೆ, ಗ್ರಾ.ಪಂ ಅಧ್ಯಕ್ಷೆ ಸುಶೀಲಾ ಪಿ, ಮಲೆಕುಡಿಯರ ಸಂಘದ ತಾಲೂಕು ಅಧ್ಯಕ್ಷ ಪುರುಷೋತ್ತಮ ಗುಂಡ್ಯ, ಮಲೆಕುಡಿಯ ಸಂಘದ ಸುಬ್ರಹ್ಮಣ್ಯ ಗುರಿಕಾರ ಐತಪ್ಪ ಅರ್ಗುಡಿ ಉಪ್ಥಿತರಿರುವರು ಎಂದವರು ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…