ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಮೇ.26 ಬೆಳಗ್ಗೆ ಗಂಟೆ 9ರ ಕರ್ಕಾಟಕ ಲಗ್ನ ಸುಮೂಹೂರ್ತದಲ್ಲಿ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ನಡೆಯಲಿದೆ.
ಬಳಿಕ ಮಹಾಪೂಜೆ, ನಿತ್ಯ ನೈಮಿತ್ಯಾದಿಗಳ ನಿರ್ಣಯ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.ಸಂಜೆ ಹರಿಕಥೆ ಮತ್ತು ಭಜನಾ ಕಾರ್ಯಕ್ರಮ ನೆರವೇರಲಿದೆ. ರಾತ್ರಿ 7 ರಿಂದ ನಡೆಯುವ ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಕಾರ್ಯವಾಹ ನ.ಸೀತಾರಾಮ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಎಣ್ಮೂರು ಕೋಟಿ ಚೆನ್ನಯ ಆದಿ ಬೈದರ್ಕಳ ಗರಡಿಯ ಅನುವಂಶಿಕ ಮೊಕ್ತೇಸರ ರಾಮಕೃಷ್ಣ ಶೆಟ್ಟಿ ಕಟ್ಟಬೀಡು, ಯಶೋಧಾ ರಾಮಚಂದ್ರ, ಕೆ.ಎಸ್.ಗೌಡ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಕೆ.ಎಸ್, ಬೆಳ್ಳಾರೆ ರೋಟರಿ ಅಧ್ಯಕ್ಷ ಎ.ಕೆ.ಮಣಿಯಾಣಿ, ಜನಜಾಗೃತಿ ವೇದಿಕೆ ಪಂಜ ವಲಯದ ಅಧ್ಯಕ್ಷ ಕೆ.ಎನ್.ರಘುನಾಥ ರೈ, ಕೇರ್ಪಡ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಕ್ಷಯ ಆಳ್ವ, ಕಾಂಚೋಡು ಮಂಜುನಾಥ ದೇವಸ್ಥಾನದ ಅಧ್ಯಕ್ಷ ಪರಮೇಶ್ವರ ಹೆಗ್ಡೆ ಕಾಂಚೋಡು, ನಿಡ್ವಾಳ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ರಾಮಕೃಷ್ಣ ಗೌಡ ಪುರಿಯ, ಮುರುಳ್ಯ-ಎಣ್ಮೂರು ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ನೆಲ್ಯಾಜೆ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬಳಿಕ ಎಡಮಂಗಲ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಮಂಡಳಿಯವರಿಂದ ಉಳ್ಳಾಳ್ತಿ ಕಾರ್ಣಿಕ ಯಕ್ಷಗಾನ ಬಯಲಾಟ ಪ್ರದರ್ಶಿತವಾಗಲಿದೆ
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…