ಮೇ 26 : ಮೇನಾಲದಲ್ಲಿ ತಾಲೂಕುಮಟ್ಟದ ಭಜನಾ ಸ್ಪರ್ಧೆ

May 11, 2019
1:06 PM

ಸುಳ್ಯ: ಅಜ್ಜಾವರ ಗ್ರಾಮದ ಮೇನಾಲ ಶ್ರೀ ಕೃಷ್ಣ ಭಜನಾ ಮಂದಿರದ ನೇತೃತ್ವದಲ್ಲಿ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆ ಮೇ.26 ರಂದು ನಡೆಯಲಿದ ಎಂದು ಭಜನಾ ಮಂದಿರದ ಅಧ್ಯಕ್ಷ ರಾಜೇಶ್ ಶೆಟ್ಟಿ ಮೇನಾಲ ಮತ್ತು ಕಾರ್ಯದರ್ಶಿ ಬಾಲಕೃಷ್ಣ ಪಿ.ಎಸ್. ತಿಳಿಸಿದ್ದಾರೆ.

Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಜನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು 25 ಭಜನಾ ತಂಡಗಳಿಗೆ ಭಾಗವಹಿಸಲು ಅವಕಾಶ ನೀಡಲಾಗುವುದು. ಎರಡು ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದ್ದು ಪ್ರತಿ ತಂಡಕ್ಕೆ 35 ನಿಮಿಷ ಅವಕಾಶ ನೀಡಲಾಗುವುದು. ಶ್ರೀಕೃಷ್ಣನ ಮತ್ತು ಶ್ರೀರಾಮನ ಒಂದೊಂದು ಭಜನೆ ಸೇರಿ ಕನಿಷ್ಠ ಐದು ಹಾಡುಗಳನ್ನು ಕಡ್ಡಾಯವಾಗಿ ಹಾಡಬೇಕು.

ಪ್ರಥಮ ಬಹುಮಾನ ರೂ.50005, ದ್ವಿತೀಯ ಬಹುಮಾನ ರೂ.3003, ತೃತೀಯ ಬಹುಮಾನ ರೂ.2002 ನೀಡಲಾಗುತ್ತದೆ. ಮೇನಾಲ ಕಾಳಿಕಾ ದುರ್ಗಾ ಪರಮೇಶ್ವರಿ ಕ್ಷೇತ್ರದ ಧರ್ಮದರ್ಶಿ ಶ್ರೀ ಪದ್ಮನಾಭ ಸ್ವಾಮಿ ಉದ್ಘಾಟಿಸುವರು ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಕಿಟ್ಟಣ್ಣ ರೈ ಮೇನಾಲ, ಸಂಪತ್ ಶೆಟ್ಟಿ, ನಾಗೇಶ್ ಶೆಟ್ಟಿ ಮೇನಾಲ ಉಪಸ್ಥಿತರಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group