ಸುಳ್ಯ: ಅಜ್ಜಾವರ ಗ್ರಾಮದ ಮೇನಾಲ ಶ್ರೀ ಕೃಷ್ಣ ಭಜನಾ ಮಂದಿರದ ನೇತೃತ್ವದಲ್ಲಿ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆ ಮೇ.26 ರಂದು ನಡೆಯಲಿದ ಎಂದು ಭಜನಾ ಮಂದಿರದ ಅಧ್ಯಕ್ಷ ರಾಜೇಶ್ ಶೆಟ್ಟಿ ಮೇನಾಲ ಮತ್ತು ಕಾರ್ಯದರ್ಶಿ ಬಾಲಕೃಷ್ಣ ಪಿ.ಎಸ್. ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಜನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು 25 ಭಜನಾ ತಂಡಗಳಿಗೆ ಭಾಗವಹಿಸಲು ಅವಕಾಶ ನೀಡಲಾಗುವುದು. ಎರಡು ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದ್ದು ಪ್ರತಿ ತಂಡಕ್ಕೆ 35 ನಿಮಿಷ ಅವಕಾಶ ನೀಡಲಾಗುವುದು. ಶ್ರೀಕೃಷ್ಣನ ಮತ್ತು ಶ್ರೀರಾಮನ ಒಂದೊಂದು ಭಜನೆ ಸೇರಿ ಕನಿಷ್ಠ ಐದು ಹಾಡುಗಳನ್ನು ಕಡ್ಡಾಯವಾಗಿ ಹಾಡಬೇಕು.
ಪ್ರಥಮ ಬಹುಮಾನ ರೂ.50005, ದ್ವಿತೀಯ ಬಹುಮಾನ ರೂ.3003, ತೃತೀಯ ಬಹುಮಾನ ರೂ.2002 ನೀಡಲಾಗುತ್ತದೆ. ಮೇನಾಲ ಕಾಳಿಕಾ ದುರ್ಗಾ ಪರಮೇಶ್ವರಿ ಕ್ಷೇತ್ರದ ಧರ್ಮದರ್ಶಿ ಶ್ರೀ ಪದ್ಮನಾಭ ಸ್ವಾಮಿ ಉದ್ಘಾಟಿಸುವರು ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಕಿಟ್ಟಣ್ಣ ರೈ ಮೇನಾಲ, ಸಂಪತ್ ಶೆಟ್ಟಿ, ನಾಗೇಶ್ ಶೆಟ್ಟಿ ಮೇನಾಲ ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…