Advertisement
ರಾಜ್ಯ

ಮೇ 27  ರಿಂದ ಗೋವಾದಲ್ಲಿ  ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

Share

ಮಂಗಳೂರು: ಹಿಂದುತ್ವನಿಷ್ಠ ಸಂಘಟನೆಗಳ ರಾಷ್ಟ್ರವ್ಯಾಪಿ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಮೇ 27 ರಿಂದ ಜೂನ್ 8 ರವರೆಗೆ  ಗೋವಾದಲ್ಲಿ ‘ಅಷ್ಟಮ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ಆಯೋಜಿಸಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಪ್ರಕಟಣೆ ತಿಳಿಸಿದೆ.

ಈ ಅಧಿವೇಶನಕ್ಕೆ ಭಾರತದ 26 ರಾಜ್ಯಗಳ ಸಹಿತ ಬಾಂಗ್ಲಾದೇಶದಿಂದ ಒಟ್ಟು 200 ಕ್ಕಿಂತ ಅಧಿಕ ಹಿಂದೂ ಸಂಘಟನೆಗಳ 800 ಕ್ಕಿಂತ ಹೆಚ್ಚು ಹಿಂದುತ್ವನಿಷ್ಠರು ಭಾಗವಹಿಸಲಿದ್ದಾರೆ. ಅಧಿವೇಶನಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಇಂದ 12 ಹಿಂದುತ್ವವಾದಿ, ನ್ಯಾಯವಾದಿ, ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ಈ ಎಲ್ಲ  ಸಂಘಟನೆಗಳ ಪದಾಧಿಕಾರಿಗಳು ಒಟ್ಟಾಗಿ ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಸಮಾನಕೃತಿಯ ನೀಲನಕ್ಷೆಗನುಸಾರ ವರ್ಷವಿಡೀ ಉಪಕ್ರಮ ಮತ್ತು ಆಂದೋಲನದ ದಿಕ್ಕನ್ನು ನಿರ್ಧರಿಸಲಾಗುವುದು ಎಂಬ ಮಾಹಿತಿಯನ್ನು ಹಿಂದೂ ಜನಜಾಗೃತಿ ಸಮಿತಿಯು  ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದೆ.

 ಕೇಂದ್ರದಲ್ಲಿ  ಹೊಸ ಸರಕಾರದ ಸ್ಥಾಪನೆಯ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿ, ಸಮಾನ ನಾಗರಿಕ ಕಾನೂನು, ಕಲಂ 320 ರದ್ದು ಮಾಡುವುದು, ಗೋ ಹತ್ಯೆ ನಿಷೇಧ ಕಾನೂನು, ಮತಾಂತರ ನಿಷೇಧ ಕಾನೂನು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪುನರ್ ನಿರ್ಮಾಣ ಇತ್ಯಾದಿ ಹಿಂದೂಗಳ ಕಳೆದ ಅನೇಕ ವರ್ಷಗಳಿಂದ ನೆನೆಗುದಿಯಲ್ಲಿದ್ದ  ಸಮಸ್ಯೆಗಳ ಮೇಲೆ ವಿಚಾರ ವಿನಿಮಯ ಮಾಡಿ ಸರಕಾರಕ್ಕೆ ನಿರ್ದಿಷ್ಟ ಕ್ರಮಕೈಗೊಳ್ಳುವ ದೃಷ್ಟಿಯಿಂದ ಸಂಘಟನಾತ್ಮಕ ಪ್ರಯತ್ನಗಳ ದೃಢನಿರ್ಧಾರವನ್ನು ಈ ಅಧಿವೇಶನದ ಮೂಲಕ ಮಾಡಲಾಗುವುದು. ಇದರೊಂದಿಗೆ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ಮತ್ತು ಶ್ರೀಲಂಕಾದ ಹಿಂದೂಗಳ ರಕ್ಷಣೆಯ ಸಂದರ್ಭದಲ್ಲಿಯೂ ಚರ್ಚಿಸಲಾಗುವುದು ಎಂದು ಪ್ರಕಟಣೆಯಲ್ಲಿ  ಜಿಲ್ಲಾ ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕಾರ  ಚಂದ್ರ ಮೊಗೇರ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

3 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

9 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

9 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

9 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

9 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

9 hours ago