ಮಂಗಳೂರು: ಹಿಂದುತ್ವನಿಷ್ಠ ಸಂಘಟನೆಗಳ ರಾಷ್ಟ್ರವ್ಯಾಪಿ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಮೇ 27 ರಿಂದ ಜೂನ್ 8 ರವರೆಗೆ ಗೋವಾದಲ್ಲಿ ‘ಅಷ್ಟಮ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ಆಯೋಜಿಸಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಪ್ರಕಟಣೆ ತಿಳಿಸಿದೆ.
ಈ ಅಧಿವೇಶನಕ್ಕೆ ಭಾರತದ 26 ರಾಜ್ಯಗಳ ಸಹಿತ ಬಾಂಗ್ಲಾದೇಶದಿಂದ ಒಟ್ಟು 200 ಕ್ಕಿಂತ ಅಧಿಕ ಹಿಂದೂ ಸಂಘಟನೆಗಳ 800 ಕ್ಕಿಂತ ಹೆಚ್ಚು ಹಿಂದುತ್ವನಿಷ್ಠರು ಭಾಗವಹಿಸಲಿದ್ದಾರೆ. ಅಧಿವೇಶನಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಇಂದ 12 ಹಿಂದುತ್ವವಾದಿ, ನ್ಯಾಯವಾದಿ, ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ಈ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಒಟ್ಟಾಗಿ ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಸಮಾನಕೃತಿಯ ನೀಲನಕ್ಷೆಗನುಸಾರ ವರ್ಷವಿಡೀ ಉಪಕ್ರಮ ಮತ್ತು ಆಂದೋಲನದ ದಿಕ್ಕನ್ನು ನಿರ್ಧರಿಸಲಾಗುವುದು ಎಂಬ ಮಾಹಿತಿಯನ್ನು ಹಿಂದೂ ಜನಜಾಗೃತಿ ಸಮಿತಿಯು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದೆ.
ಕೇಂದ್ರದಲ್ಲಿ ಹೊಸ ಸರಕಾರದ ಸ್ಥಾಪನೆಯ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿ, ಸಮಾನ ನಾಗರಿಕ ಕಾನೂನು, ಕಲಂ 320 ರದ್ದು ಮಾಡುವುದು, ಗೋ ಹತ್ಯೆ ನಿಷೇಧ ಕಾನೂನು, ಮತಾಂತರ ನಿಷೇಧ ಕಾನೂನು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪುನರ್ ನಿರ್ಮಾಣ ಇತ್ಯಾದಿ ಹಿಂದೂಗಳ ಕಳೆದ ಅನೇಕ ವರ್ಷಗಳಿಂದ ನೆನೆಗುದಿಯಲ್ಲಿದ್ದ ಸಮಸ್ಯೆಗಳ ಮೇಲೆ ವಿಚಾರ ವಿನಿಮಯ ಮಾಡಿ ಸರಕಾರಕ್ಕೆ ನಿರ್ದಿಷ್ಟ ಕ್ರಮಕೈಗೊಳ್ಳುವ ದೃಷ್ಟಿಯಿಂದ ಸಂಘಟನಾತ್ಮಕ ಪ್ರಯತ್ನಗಳ ದೃಢನಿರ್ಧಾರವನ್ನು ಈ ಅಧಿವೇಶನದ ಮೂಲಕ ಮಾಡಲಾಗುವುದು. ಇದರೊಂದಿಗೆ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ಮತ್ತು ಶ್ರೀಲಂಕಾದ ಹಿಂದೂಗಳ ರಕ್ಷಣೆಯ ಸಂದರ್ಭದಲ್ಲಿಯೂ ಚರ್ಚಿಸಲಾಗುವುದು ಎಂದು ಪ್ರಕಟಣೆಯಲ್ಲಿ ಜಿಲ್ಲಾ ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕಾರ ಚಂದ್ರ ಮೊಗೇರ ತಿಳಿಸಿದ್ದಾರೆ.
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…