Advertisement
ರಾಜ್ಯ

ಮೇ 27  ರಿಂದ ಗೋವಾದಲ್ಲಿ  ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

Share

ಮಂಗಳೂರು: ಹಿಂದುತ್ವನಿಷ್ಠ ಸಂಘಟನೆಗಳ ರಾಷ್ಟ್ರವ್ಯಾಪಿ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಮೇ 27 ರಿಂದ ಜೂನ್ 8 ರವರೆಗೆ  ಗೋವಾದಲ್ಲಿ ‘ಅಷ್ಟಮ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ಆಯೋಜಿಸಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಪ್ರಕಟಣೆ ತಿಳಿಸಿದೆ.

ಈ ಅಧಿವೇಶನಕ್ಕೆ ಭಾರತದ 26 ರಾಜ್ಯಗಳ ಸಹಿತ ಬಾಂಗ್ಲಾದೇಶದಿಂದ ಒಟ್ಟು 200 ಕ್ಕಿಂತ ಅಧಿಕ ಹಿಂದೂ ಸಂಘಟನೆಗಳ 800 ಕ್ಕಿಂತ ಹೆಚ್ಚು ಹಿಂದುತ್ವನಿಷ್ಠರು ಭಾಗವಹಿಸಲಿದ್ದಾರೆ. ಅಧಿವೇಶನಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಇಂದ 12 ಹಿಂದುತ್ವವಾದಿ, ನ್ಯಾಯವಾದಿ, ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ಈ ಎಲ್ಲ  ಸಂಘಟನೆಗಳ ಪದಾಧಿಕಾರಿಗಳು ಒಟ್ಟಾಗಿ ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಸಮಾನಕೃತಿಯ ನೀಲನಕ್ಷೆಗನುಸಾರ ವರ್ಷವಿಡೀ ಉಪಕ್ರಮ ಮತ್ತು ಆಂದೋಲನದ ದಿಕ್ಕನ್ನು ನಿರ್ಧರಿಸಲಾಗುವುದು ಎಂಬ ಮಾಹಿತಿಯನ್ನು ಹಿಂದೂ ಜನಜಾಗೃತಿ ಸಮಿತಿಯು  ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದೆ.

 ಕೇಂದ್ರದಲ್ಲಿ  ಹೊಸ ಸರಕಾರದ ಸ್ಥಾಪನೆಯ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿ, ಸಮಾನ ನಾಗರಿಕ ಕಾನೂನು, ಕಲಂ 320 ರದ್ದು ಮಾಡುವುದು, ಗೋ ಹತ್ಯೆ ನಿಷೇಧ ಕಾನೂನು, ಮತಾಂತರ ನಿಷೇಧ ಕಾನೂನು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪುನರ್ ನಿರ್ಮಾಣ ಇತ್ಯಾದಿ ಹಿಂದೂಗಳ ಕಳೆದ ಅನೇಕ ವರ್ಷಗಳಿಂದ ನೆನೆಗುದಿಯಲ್ಲಿದ್ದ  ಸಮಸ್ಯೆಗಳ ಮೇಲೆ ವಿಚಾರ ವಿನಿಮಯ ಮಾಡಿ ಸರಕಾರಕ್ಕೆ ನಿರ್ದಿಷ್ಟ ಕ್ರಮಕೈಗೊಳ್ಳುವ ದೃಷ್ಟಿಯಿಂದ ಸಂಘಟನಾತ್ಮಕ ಪ್ರಯತ್ನಗಳ ದೃಢನಿರ್ಧಾರವನ್ನು ಈ ಅಧಿವೇಶನದ ಮೂಲಕ ಮಾಡಲಾಗುವುದು. ಇದರೊಂದಿಗೆ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ಮತ್ತು ಶ್ರೀಲಂಕಾದ ಹಿಂದೂಗಳ ರಕ್ಷಣೆಯ ಸಂದರ್ಭದಲ್ಲಿಯೂ ಚರ್ಚಿಸಲಾಗುವುದು ಎಂದು ಪ್ರಕಟಣೆಯಲ್ಲಿ  ಜಿಲ್ಲಾ ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕಾರ  ಚಂದ್ರ ಮೊಗೇರ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

23 seconds ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

5 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago