ಪಂಜ: ಪಂಜ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಹಾಗೂ ಗುತ್ತಿಗಾರು ಮತ್ತು ಕಡಬ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಆಶ್ರಯದಲ್ಲಿ ಪಂಜದಲ್ಲಿ ಮೇ.6 ರಿಂದ 10 ರವರೆಗೆ ಅಡಿಕೆ ಮರ ಏರುವ ಕೌಶಲ ತರಬೇತಿ ಶಿಬಿರ ನಡೆಯಲಿದೆ.
ಈ ಶಿಬಿರಕ್ಕೆ ಹೆಸರು ನೋಂದಾಯಿಸಿಸಲು ಕೊನೆಯ 3 ದಿನಗಳ ಕಾಲ ಅವಕಾಶ ಇದೆ. 18ರಿಂದ 40 ವರುಷದ ಒಳಗಿನ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಅಡಿಕೆ ಮರ ಏರುವ ಕೌಶಲ್ಯ ತರಬೇತಿ ಶಿಬಿರ ವಿವಿಧ ಪ್ರೋತ್ಸಾಹ ಸೌಲಭ್ಯ ಗಳೊಂದಿಗೆ ಮೇ 6 ರಿಂದ10 ರ ವರೆಗೆ ಸಿ ಎ ಬ್ಯಾಂಕ್ ಪಂಜದಲ್ಲಿ ನಡೆಯುತ್ತದೆ.
ಈ ಹಿಂದೆ ಕ್ಯಾಂಪ್ಕೋ ವತಿಯಿಂದ ವಿಟ್ಲ ಸಿ ಪಿ ಸಿ ಆರ್ ಐ ವಠಾರದಲ್ಲಿ ಎರಡು ಬಾರಿ ಯಶಸ್ವಿಯಾಗಿ ನಡೆದಿದೆ. ಆ ಬಳಿಕ ಪೆರ್ಲ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ಪೆರ್ಲದಲ್ಲಿ ತರಬೇತಿ ಶಿಬಿರ ಯಶಸ್ವಿಯಾಗಿ ನಡೆದಿದೆ. ಇದೀಗ ಪಂಜದಲ್ಲಿ ಶಿಬಿರ ನಡೆಯಲಿದ್ದು ಆಸಕ್ತರನ್ನು ಭಾಗವಹಿಸಲು ಪ್ರೇರೇಪಿಸಿ ಕಳುಹಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ 94489 31106
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…