ಮಂಗಳೂರು: ರಮ್ಜಾನ್ ತಿಂಗಳ ಚಂದ್ರ ದರ್ಶನ ಭಾನುವಾರ ಆಗಿರುವುದರಿಂದ ಮೇ 6 ರಿಂದ ಮುಸ್ಲಿಮರು ಒಂದು ತಿಂಗಳ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯರ್ ಘೋಷಿಸಿದ್ದಾರೆ.
ಸಾಮಾಜಿಕ ಸಾಮರಸ್ಯ ಗಟ್ಟಿಗೊಳಿಸಲು ಉಪವಾಸದಿಂದ ಸಾಧ್ಯವಾಗಲಿ. ರಮ್ಜಾನ್ ಎಂಬುದು ಹಸಿವು, ದಾಹ, ಭಾವನೆಗಳನ್ನು ಅರಿತುಕೊಳ್ಳುವ ತಿಂಗಳಾಗಿದ್ದು, ಮಾನವ ಸೌಹಾರ್ದತೆ ಮತ್ತು ಧರ್ಮಸಹಿಷ್ಣುತೆಗೆ ಈ ತಿಂಗಳು ಒತ್ತು ನೀಡುತ್ತದೆ. ಈ ತಿಂಗಳಲ್ಲಿ ಉಪವಾಸಿಯಾಗುವ ಮೂಲಕ ಮುಸ್ಲಿಮರು ಸ್ವಧರ್ಮವನ್ನು ಅರಿತುಕೊಳ್ಳಲು ಮತ್ತು ಇತರ ಧರ್ಮೀಯರೊಂದಿಗೆ ಸೌಹಾರ್ದ ಸಂಬಂಧ ಗಟ್ಟಿಗೊಳಿಸಲು ಪ್ರಯತ್ನಿಸಬೇಕು. ರಂಜಾನ್ ಸ್ವಶುದ್ಧೀಕರಣದ ತಿಂಗಳು. ನೈತಿಕವಾಗಿ ಮತ್ತು ಮಾನಸಿಕವಾಗಿ ಶುದ್ಧೀಕರಣಗೊಳ್ಳುವ ತಿಂಗಳಾಗಿ ಮುಸ್ಲಿಮರು ಈ ತಿಂಗಳನ್ನು ಸ್ವೀಕರಿಸಲಿ. ನಾಡಿನ ಸಮಸ್ತರಿಗೆ ರಂಜಾನ್ ಶುಭಾಶಯಗಳು ಎಂದು ಖಾಝಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…