ಮಂಗಳೂರು: ರಮ್ಜಾನ್ ತಿಂಗಳ ಚಂದ್ರ ದರ್ಶನ ಭಾನುವಾರ ಆಗಿರುವುದರಿಂದ ಮೇ 6 ರಿಂದ ಮುಸ್ಲಿಮರು ಒಂದು ತಿಂಗಳ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯರ್ ಘೋಷಿಸಿದ್ದಾರೆ.
ಸಾಮಾಜಿಕ ಸಾಮರಸ್ಯ ಗಟ್ಟಿಗೊಳಿಸಲು ಉಪವಾಸದಿಂದ ಸಾಧ್ಯವಾಗಲಿ. ರಮ್ಜಾನ್ ಎಂಬುದು ಹಸಿವು, ದಾಹ, ಭಾವನೆಗಳನ್ನು ಅರಿತುಕೊಳ್ಳುವ ತಿಂಗಳಾಗಿದ್ದು, ಮಾನವ ಸೌಹಾರ್ದತೆ ಮತ್ತು ಧರ್ಮಸಹಿಷ್ಣುತೆಗೆ ಈ ತಿಂಗಳು ಒತ್ತು ನೀಡುತ್ತದೆ. ಈ ತಿಂಗಳಲ್ಲಿ ಉಪವಾಸಿಯಾಗುವ ಮೂಲಕ ಮುಸ್ಲಿಮರು ಸ್ವಧರ್ಮವನ್ನು ಅರಿತುಕೊಳ್ಳಲು ಮತ್ತು ಇತರ ಧರ್ಮೀಯರೊಂದಿಗೆ ಸೌಹಾರ್ದ ಸಂಬಂಧ ಗಟ್ಟಿಗೊಳಿಸಲು ಪ್ರಯತ್ನಿಸಬೇಕು. ರಂಜಾನ್ ಸ್ವಶುದ್ಧೀಕರಣದ ತಿಂಗಳು. ನೈತಿಕವಾಗಿ ಮತ್ತು ಮಾನಸಿಕವಾಗಿ ಶುದ್ಧೀಕರಣಗೊಳ್ಳುವ ತಿಂಗಳಾಗಿ ಮುಸ್ಲಿಮರು ಈ ತಿಂಗಳನ್ನು ಸ್ವೀಕರಿಸಲಿ. ನಾಡಿನ ಸಮಸ್ತರಿಗೆ ರಂಜಾನ್ ಶುಭಾಶಯಗಳು ಎಂದು ಖಾಝಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…