ಮಂಗಳೂರು: ರಮ್ಜಾನ್ ತಿಂಗಳ ಚಂದ್ರ ದರ್ಶನ ಭಾನುವಾರ ಆಗಿರುವುದರಿಂದ ಮೇ 6 ರಿಂದ ಮುಸ್ಲಿಮರು ಒಂದು ತಿಂಗಳ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯರ್ ಘೋಷಿಸಿದ್ದಾರೆ.
ಸಾಮಾಜಿಕ ಸಾಮರಸ್ಯ ಗಟ್ಟಿಗೊಳಿಸಲು ಉಪವಾಸದಿಂದ ಸಾಧ್ಯವಾಗಲಿ. ರಮ್ಜಾನ್ ಎಂಬುದು ಹಸಿವು, ದಾಹ, ಭಾವನೆಗಳನ್ನು ಅರಿತುಕೊಳ್ಳುವ ತಿಂಗಳಾಗಿದ್ದು, ಮಾನವ ಸೌಹಾರ್ದತೆ ಮತ್ತು ಧರ್ಮಸಹಿಷ್ಣುತೆಗೆ ಈ ತಿಂಗಳು ಒತ್ತು ನೀಡುತ್ತದೆ. ಈ ತಿಂಗಳಲ್ಲಿ ಉಪವಾಸಿಯಾಗುವ ಮೂಲಕ ಮುಸ್ಲಿಮರು ಸ್ವಧರ್ಮವನ್ನು ಅರಿತುಕೊಳ್ಳಲು ಮತ್ತು ಇತರ ಧರ್ಮೀಯರೊಂದಿಗೆ ಸೌಹಾರ್ದ ಸಂಬಂಧ ಗಟ್ಟಿಗೊಳಿಸಲು ಪ್ರಯತ್ನಿಸಬೇಕು. ರಂಜಾನ್ ಸ್ವಶುದ್ಧೀಕರಣದ ತಿಂಗಳು. ನೈತಿಕವಾಗಿ ಮತ್ತು ಮಾನಸಿಕವಾಗಿ ಶುದ್ಧೀಕರಣಗೊಳ್ಳುವ ತಿಂಗಳಾಗಿ ಮುಸ್ಲಿಮರು ಈ ತಿಂಗಳನ್ನು ಸ್ವೀಕರಿಸಲಿ. ನಾಡಿನ ಸಮಸ್ತರಿಗೆ ರಂಜಾನ್ ಶುಭಾಶಯಗಳು ಎಂದು ಖಾಝಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…