ಮಂಗಳೂರು: ರಮ್ಜಾನ್ ತಿಂಗಳ ಚಂದ್ರ ದರ್ಶನ ಭಾನುವಾರ ಆಗಿರುವುದರಿಂದ ಮೇ 6 ರಿಂದ ಮುಸ್ಲಿಮರು ಒಂದು ತಿಂಗಳ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯರ್ ಘೋಷಿಸಿದ್ದಾರೆ.
ಸಾಮಾಜಿಕ ಸಾಮರಸ್ಯ ಗಟ್ಟಿಗೊಳಿಸಲು ಉಪವಾಸದಿಂದ ಸಾಧ್ಯವಾಗಲಿ. ರಮ್ಜಾನ್ ಎಂಬುದು ಹಸಿವು, ದಾಹ, ಭಾವನೆಗಳನ್ನು ಅರಿತುಕೊಳ್ಳುವ ತಿಂಗಳಾಗಿದ್ದು, ಮಾನವ ಸೌಹಾರ್ದತೆ ಮತ್ತು ಧರ್ಮಸಹಿಷ್ಣುತೆಗೆ ಈ ತಿಂಗಳು ಒತ್ತು ನೀಡುತ್ತದೆ. ಈ ತಿಂಗಳಲ್ಲಿ ಉಪವಾಸಿಯಾಗುವ ಮೂಲಕ ಮುಸ್ಲಿಮರು ಸ್ವಧರ್ಮವನ್ನು ಅರಿತುಕೊಳ್ಳಲು ಮತ್ತು ಇತರ ಧರ್ಮೀಯರೊಂದಿಗೆ ಸೌಹಾರ್ದ ಸಂಬಂಧ ಗಟ್ಟಿಗೊಳಿಸಲು ಪ್ರಯತ್ನಿಸಬೇಕು. ರಂಜಾನ್ ಸ್ವಶುದ್ಧೀಕರಣದ ತಿಂಗಳು. ನೈತಿಕವಾಗಿ ಮತ್ತು ಮಾನಸಿಕವಾಗಿ ಶುದ್ಧೀಕರಣಗೊಳ್ಳುವ ತಿಂಗಳಾಗಿ ಮುಸ್ಲಿಮರು ಈ ತಿಂಗಳನ್ನು ಸ್ವೀಕರಿಸಲಿ. ನಾಡಿನ ಸಮಸ್ತರಿಗೆ ರಂಜಾನ್ ಶುಭಾಶಯಗಳು ಎಂದು ಖಾಝಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…