Advertisement
ಜಿಲ್ಲೆ

ಮೈಸೂರಿನಲ್ಲಿ “ಕೊಡಗಿನ ತಲ್ಲಣ’’ ಕೃತಿ ಬಿಡುಗಡೆ

Share

ಮಡಿಕೇರಿ: ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಬರೆದ “ಕೊಡಗಿನ ತಲ್ಲಣ, ದುರಂತದ ಹಿಂದಿನ ಸತ್ಯಗಳು’’ ಕೃತಿ ಮೈಸೂರಿನಲ್ಲಿ ಭಾನುವಾರ ಬಿಡುಗಡೆಯಾಯಿತು.

ಮೈಸೂರು ಪತ್ರಕರ್ತರ ಸಂಘ ಹಾಗೂ ಯುಕ್ತ ಪ್ರಕಾಶನದ ಸಂಯುಕ್ತ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ವನ್ಯಜೀವಿ ತಜ್ಞ ಕೃಪಾಕರ, ಜಲಪ್ರಳಯ ಕೇವಲ ಕೊಡಗಿನ ತಲ್ಲಣವಲ್ಲ. ಇದು ಜಾಗತಿಕ ತಲ್ಲಣ. ಜಗತ್ತಿನಾದ್ಯಂತ ಇದು ನಡೆಯುತ್ತಿದೆ ಎಂದು ಅಭಿಪ್ರಾಯಪಟ್ಟರು.  ಈ ಪುಸ್ತಕದಲ್ಲಿ ಕೊಡಗಿನ ಚಾರಿತ್ರ್ಯ, ಇತಿಹಾಸ, ಬದುಕು ಅನಾವರಣಗೊಂಡಿದೆ. ಇದೊಂದು ಸಂಗ್ರಹ ಯೋಗ್ಯ ಪುಸ್ತಕ. ಅಲ್ಲದೆ, ಪ್ರಸ್ತುತ ಸನ್ನಿವೇಶದಲ್ಲಿ ಪ್ರಾಕೃತಿಕ ಸಂಪನ್ಮೂಲಗಳನ್ನು ಹೇಗೆ ಉಳಿಸಿಕೊಳ್ಳಬೇಕಿದೆ ಎಂಬುದು ಸವಾಲಿನ ವಿಷಯವನ್ನು ಚರ್ಚಿಸಬೇಕಿದೆ, ಎಂದರು.
ಪುಸ್ತಕದ ಬಗ್ಗೆ ಪ್ರಾಧ್ಯಾಪಕರಾದ ಡಾ.ಬೆಸೂರು ಮೋಹನ ಪಾಳೇಗಾರ ಮಾತನಾಡಿ, ಪುಸ್ತಕದಲ್ಲಿ 11 ಅಧ್ಯಾಯಗಳಿವೆ. ಕೊಡಗಿನ ಇತಿಹಾಸದ ಜತೆಗೆ ಕೊಡಗಿನ ತಲ್ಲಣಗಳನ್ನು ರಮೇಶ ಉತ್ತಪ್ಪ ದಾಖಲಿಸಿದ್ದಾರೆ. ಇಡೀ ಜಿಲ್ಲೆಯನ್ನು ಪ್ರವಾಸ ಮಾಡಿ ಸತ್ಯ ಮತ್ತು ನಿಖರವಾದ ಮಾಹಿತಿಯನ್ನು ಅವರು ನೀಡಿದ್ದಾರೆ. ಕೊಡಗಿನ ತಲ್ಲಣಕ್ಕೆ ಕಾರಣವಾದ ರೆಸಾರ್ಟ್, ಮರಗಳ ಹನನ, ಪ್ರವಾಸೋದ್ಯಮ, ನೆರೆ ರಾಜ್ಯದವರು ಹಾವಳಿ ಎಲ್ಲವನ್ನೂ ಲೇಖಕರು ಅರ್ಥಗರ್ಭಿತವಾಗಿ ಕಟ್ಟಿಕೊಟ್ಟಿದ್ದಾರೆ. ಇದು ವಿಶ್ವವಿದ್ಯಾಲಯದಲ್ಲಿ ಅಧ್ಯಯನಶೀಲ ಕೃತಿಯಾಗಬೇಕು’’ ಎಂದು ಆಶಿಸಿದರು.
ವಿಜಯ ಕರ್ನಾಟಕ ಪತ್ರಿಕೆ ಸಂಪಾದಕರಾದ ಹರಿಪ್ರಕಾಶ ಕೋಣೆಮನೆ ಮಾತನಾಡಿ, ಕೊಡಗಿನ ದುರಂತಕ್ಕೆ ಯಾರನ್ನು ದೂರಬೇಕು ಎಂಬ ಪ್ರಶ್ನೆ ಮೂಡುತ್ತದೆ. ಪ್ರವಾಸೋದ್ಯಮದ ಹೆಸರಲ್ಲಿ ಶೋಷಣೆ ಮಾಡುತ್ತಿರುವ ಉದ್ಯಮವನ್ನೋ, ಅದಕ್ಕೆ ಅವಕಾಶ ಮಾಡಿಕೊಟ್ಟ ನಮ್ಮ ಸರಕಾರದ ವ್ಯವಸ್ಥೆಯನ್ನೋ, ಇಲ್ಲ ಗೊತ್ತೋಗೊತ್ತಿಲ್ಲದೆ ಈ ಅಪಾಯಕ್ಕೆ ತೆರೆದುಕೊಂಡಿರುವ ಜನರನ್ನೊ ಎಂಬುದನ್ನು ಪತ್ರಕರ್ತರಾಗಿ ಆಲೋಚಿಸಬೇಕಿದೆ ಎಂದರು.

ಪುಸ್ತಕದ ಲೇಖಕ ಹಾಗೂ ಪತ್ರಕರ್ತ ಐತಿಚಂಡ ರಮೇಶ ಉತ್ತಪ್ಪ ಮಾತನಾಡಿ, “”ಪತ್ರಕರ್ತನಾಗಿ ಕೊಡಗಿನಲ್ಲಿ ಕಳೆದ ವರ್ಷ ನಡೆದ ಜಲಪ್ರಳಯವನ್ನು ಕಣ್ಣಾರೆ ಕಂಡು ಪುಸ್ತಕ ರೂಪದಲ್ಲಿ ಅನುಭವವನ್ನು ದಾಖಲಿಸಿದ್ದೇನೆ. ಕೊಡಗಿನಲ್ಲಿ ಜಲಪ್ರಳಯವಾದಾಗ ಒಂದೊಂದು ಮಾಧ್ಯಮಗಳು ಒಂದೊಂದು ರೀತಿಯಲ್ಲಿ ಸುದ್ದಿ ಬಿತ್ತರಿಸಿದವು. ಹಲವರು ಮತ್ತದೇ ರೀತಿಯಲ್ಲಿ ವಾದ ಮಂಡಿಸಿದರು. ಇದೆಲ್ಲವನ್ನೂ ಅಂಶಗಳು “ಕೊಡಗಿನ ತಲ್ಲಣ’ ಪುಸ್ತಕ ಬರೆಯಲು ನನಗೆ ಪ್ರೇರೇಪಿಸಿತು,” ಎಂದರು.

ವನ್ಯಜೀವಿ ತಜ್ಞ ಸೇನಾನಿ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ .ಕೆ.ಮಹೇಂದ್ರ, ಯುಕ್ತಾ ಪ್ರಕಾಶನದ ಪ್ರಕಾಶಕರಾದ ಓಂಕಾರಪ್ಪ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

13 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

13 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

14 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

14 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

3 days ago