ರಾಜ್ಯ

ಮೈಸೂರು ವಾರಿಯರ್ಸ್‍ನಿಂದ ಕ್ರಿಕೆಟ್ ಪ್ರತಿಭಾನ್ವೇಷಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ: ಕರ್ನಾಟಕದ ಗ್ರಾಮೀಣ ಪ್ರದೇಶಗಳ ಹಾಗೂ ಒಳಭಾಗಗಳ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಬೆಳಕಿಗೆ ತರುವತನ್ನ ಬದ್ಧತೆಯ ಭಾಗವಾಗಿ, ಮೈಸೂರು ವಾರಿಯರ್ಸ್‍ನ ಮಾಲೀಕರಾಗಿರುವ ಎನ್‍ಆರ್ ಸಮೂಹ, ಕ್ರಿಕೆಟ್ ಪ್ರತಿಭಾನ್ವೇಷಣೆಯ ಆರನೇ ಆವೃತ್ತಿಯನ್ನು ಆಯೋಜಿಸಿದೆ. ಜುಲೈ 17 ರಂದು ಬೆಂಗಳೂರಿನ ಜಸ್ಟ್ ಕ್ರಿಕೆಟ್‍ ಅಕಾಡೆಮಿಯಲ್ಲಿ ಮತ್ತು ಜುಲೈ20 ರಂದು ಮೈಸೂರಿನ ಎಸ್‍ಡಿಎನ್‍ಆರ್ ಮೈದಾನದಲ್ಲಿ ಪ್ರತಿಭಾನ್ವೇಷಣೆ ನಡೆಯಲಿದೆ. ಕರ್ನಾಟಕದ ಯಾವುದೇ ಭಾಗದ ಯುವ, ಪ್ರತಿಭಾವಂತ ಕ್ರಿಕೆಟ್‍ ಆಟಗಾರರು ಭಾಗವಹಿಸಬಹುದು. ಇಲ್ಲಿ ತಮ್ಮಅತ್ಯುತ್ತಮ ಪ್ರದರ್ಶನ ನೀಡಿ ಆಯ್ಕೆಯಾಗುವ ಆಟಗಾರರು 2019ರ ಕೆಪಿಎಲ್ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್‍ತಂಡವನ್ನು ಪ್ರತಿನಿಧಿಸಲಿದ್ದಾರೆ.

Advertisement
Advertisement

ಈ ಪ್ರತಿಭಾ ಅನ್ವೇಷಣೆ ಮುಖ್ಯವಾಗಿ ಕರ್ನಾಟಕದ ಕೆಎಸ್‍ಸಿಎ ನೋಂದಾಯಿತ ಕ್ಲಬ್‍ಗಳ ಕೆಎಸ್‍ಸಿಎ ನೋಂದಾಯಿತ ಸದಸ್ಯರಿಗಾಗಿ ಆಯೋಜಿಸಲಾಗುತ್ತದೆ. ಏಕೆಂದರೆ ಕರ್ನಾಟಕದಲ್ಲಿ ಕ್ರಿಕೆಟ್ ಸೇರಿದಂತೆ ಪ್ರಮುಖ ಕ್ರೀಡೆಗಳಲ್ಲಿ ವಿಶೇಷ ಕೌಶಲ್ಯ ಹೊಂದಿರುವ ಅನೇಕ ಪ್ರತಿಭಾವಂತ ಆಟಗಾರರು ಇದ್ದಾರೆ. ಯುವ ಪ್ರತಿಭಾವಂತ ಕ್ರಿಕೆಟ್ ಪ್ರತಿಭೆಗಳನ್ನು ಬೆಳೆಸುವ ಜೊತೆಗೆಅವರಿಗೆ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ನೀಡಿ ಪೋಷಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ.

ಸ್ಥಳ: ಮೈಸೂರನ್ನು ಹೊರತುಪಡಿಸಿ ಬೇರೆ ಪ್ರದೇಶಗಳಿಂದ ಬರುವ ಆಟಗಾರರಿಗೆ

ಸ್ಥಳ:  ಬೆಂಗಳೂರು
ದಿನಾಂಕ: ಜುಲೈ 17, 2019
ವಿಳಾಸ ಜಸ್ಟ್ ಕ್ರಿಕೆಟ್‍ಅಕಾಡೆಮಿ
ನಂ. 1/1ಬಿ, ಸಿಂಗನಾಯಕನಹಳ್ಳಿ
ದೊಡ್ಡಬಳ್ಳಾಪುರ ರಸ್ತೆ,
ನಿತ್ಯೋತ್ಸವಕಲ್ಯಾಣ ಮಂಟಪದ ಹಿಂದೆ,
ಯಲಹಂಕ ಬೆಂಗಳೂರು– 560064
ಸಮಯ ಬೆಳಿಗ್ಗೆ 8.00 ಗಂಟೆಯ ನಂತರ
ಸಂಪರ್ಕ ಮಧುಸೂದನ: +91 9986024717
ಸೋಮಶೇಖರ: +91 9900545191

ಸ್ಥಳ: ಮೈಸೂರು ಭಾಗದ ಆಟಗಾರರಿಗೆ
ಸ್ಥಳ : ಮೈಸೂರು
ದಿನಾಂಕ : ಜುಲೈ 20, 2019
ವಿಳಾಸ ಎಸ್‍ಡಿಎನ್‍ಆರ್ ಮೈದಾನ
ಗಂಗೋತ್ರಿಗ್ಲೇಡ್ಸ್, ಅಕಾಡೆಮಿ ನೆಟ್ಸ್
ಮೈಸೂರು ವಿಶ್ವವಿದ್ಯಾಲಯ ಮೈಸೂರು
ಸಮಯ ಬೆಳಿಗ್ಗೆ 8.00 ನಂತರ
ಸಂಪರ್ಕ ಮಧುಸೂಧನ: +91 9986024717
ಸೋಮಶೇಖರ: +91 9900545191

Advertisement

ಹೆಚ್ಚಿನ ಮಾಹಿತಿಗೆ ಮೇಲಿನ ಸಂಖ್ಯೆಯನ್ನು ಸಂಪರ್ಕ ಮಾಡಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

2 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

3 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

3 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

3 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

13 hours ago