Advertisement
ರಾಜ್ಯ

ಮೈಸೂರು ವಾರಿಯರ್ಸ್‍ನಿಂದ ಕ್ರಿಕೆಟ್ ಪ್ರತಿಭಾನ್ವೇಷಣೆ

Share

ಮಡಿಕೇರಿ: ಕರ್ನಾಟಕದ ಗ್ರಾಮೀಣ ಪ್ರದೇಶಗಳ ಹಾಗೂ ಒಳಭಾಗಗಳ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಬೆಳಕಿಗೆ ತರುವತನ್ನ ಬದ್ಧತೆಯ ಭಾಗವಾಗಿ, ಮೈಸೂರು ವಾರಿಯರ್ಸ್‍ನ ಮಾಲೀಕರಾಗಿರುವ ಎನ್‍ಆರ್ ಸಮೂಹ, ಕ್ರಿಕೆಟ್ ಪ್ರತಿಭಾನ್ವೇಷಣೆಯ ಆರನೇ ಆವೃತ್ತಿಯನ್ನು ಆಯೋಜಿಸಿದೆ. ಜುಲೈ 17 ರಂದು ಬೆಂಗಳೂರಿನ ಜಸ್ಟ್ ಕ್ರಿಕೆಟ್‍ ಅಕಾಡೆಮಿಯಲ್ಲಿ ಮತ್ತು ಜುಲೈ20 ರಂದು ಮೈಸೂರಿನ ಎಸ್‍ಡಿಎನ್‍ಆರ್ ಮೈದಾನದಲ್ಲಿ ಪ್ರತಿಭಾನ್ವೇಷಣೆ ನಡೆಯಲಿದೆ. ಕರ್ನಾಟಕದ ಯಾವುದೇ ಭಾಗದ ಯುವ, ಪ್ರತಿಭಾವಂತ ಕ್ರಿಕೆಟ್‍ ಆಟಗಾರರು ಭಾಗವಹಿಸಬಹುದು. ಇಲ್ಲಿ ತಮ್ಮಅತ್ಯುತ್ತಮ ಪ್ರದರ್ಶನ ನೀಡಿ ಆಯ್ಕೆಯಾಗುವ ಆಟಗಾರರು 2019ರ ಕೆಪಿಎಲ್ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್‍ತಂಡವನ್ನು ಪ್ರತಿನಿಧಿಸಲಿದ್ದಾರೆ.

ಈ ಪ್ರತಿಭಾ ಅನ್ವೇಷಣೆ ಮುಖ್ಯವಾಗಿ ಕರ್ನಾಟಕದ ಕೆಎಸ್‍ಸಿಎ ನೋಂದಾಯಿತ ಕ್ಲಬ್‍ಗಳ ಕೆಎಸ್‍ಸಿಎ ನೋಂದಾಯಿತ ಸದಸ್ಯರಿಗಾಗಿ ಆಯೋಜಿಸಲಾಗುತ್ತದೆ. ಏಕೆಂದರೆ ಕರ್ನಾಟಕದಲ್ಲಿ ಕ್ರಿಕೆಟ್ ಸೇರಿದಂತೆ ಪ್ರಮುಖ ಕ್ರೀಡೆಗಳಲ್ಲಿ ವಿಶೇಷ ಕೌಶಲ್ಯ ಹೊಂದಿರುವ ಅನೇಕ ಪ್ರತಿಭಾವಂತ ಆಟಗಾರರು ಇದ್ದಾರೆ. ಯುವ ಪ್ರತಿಭಾವಂತ ಕ್ರಿಕೆಟ್ ಪ್ರತಿಭೆಗಳನ್ನು ಬೆಳೆಸುವ ಜೊತೆಗೆಅವರಿಗೆ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ನೀಡಿ ಪೋಷಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ.

ಸ್ಥಳ: ಮೈಸೂರನ್ನು ಹೊರತುಪಡಿಸಿ ಬೇರೆ ಪ್ರದೇಶಗಳಿಂದ ಬರುವ ಆಟಗಾರರಿಗೆ

ಸ್ಥಳ:  ಬೆಂಗಳೂರು
ದಿನಾಂಕ: ಜುಲೈ 17, 2019
ವಿಳಾಸ ಜಸ್ಟ್ ಕ್ರಿಕೆಟ್‍ಅಕಾಡೆಮಿ
ನಂ. 1/1ಬಿ, ಸಿಂಗನಾಯಕನಹಳ್ಳಿ
ದೊಡ್ಡಬಳ್ಳಾಪುರ ರಸ್ತೆ,
ನಿತ್ಯೋತ್ಸವಕಲ್ಯಾಣ ಮಂಟಪದ ಹಿಂದೆ,
ಯಲಹಂಕ ಬೆಂಗಳೂರು– 560064
ಸಮಯ ಬೆಳಿಗ್ಗೆ 8.00 ಗಂಟೆಯ ನಂತರ
ಸಂಪರ್ಕ ಮಧುಸೂದನ: +91 9986024717
ಸೋಮಶೇಖರ: +91 9900545191

ಸ್ಥಳ: ಮೈಸೂರು ಭಾಗದ ಆಟಗಾರರಿಗೆ
ಸ್ಥಳ : ಮೈಸೂರು
ದಿನಾಂಕ : ಜುಲೈ 20, 2019
ವಿಳಾಸ ಎಸ್‍ಡಿಎನ್‍ಆರ್ ಮೈದಾನ
ಗಂಗೋತ್ರಿಗ್ಲೇಡ್ಸ್, ಅಕಾಡೆಮಿ ನೆಟ್ಸ್
ಮೈಸೂರು ವಿಶ್ವವಿದ್ಯಾಲಯ ಮೈಸೂರು
ಸಮಯ ಬೆಳಿಗ್ಗೆ 8.00 ನಂತರ
ಸಂಪರ್ಕ ಮಧುಸೂಧನ: +91 9986024717
ಸೋಮಶೇಖರ: +91 9900545191

ಹೆಚ್ಚಿನ ಮಾಹಿತಿಗೆ ಮೇಲಿನ ಸಂಖ್ಯೆಯನ್ನು ಸಂಪರ್ಕ ಮಾಡಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

10 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

15 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

16 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

18 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

18 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago