ಸುಳ್ಯ: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರ ಕಾರು ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು, ಕಾರು ಚಾಲಕ ಹಾಗೂ ಶಾಸಕರು ಅಪಾಯದಿಂದ ಪಾರಾದ ಘಟನೆ ಆ.23ರಂದು ಮುಂಜಾನೆ ಸಂಭವಿಸಿದೆ.
ಶಾಸಕ ರಾಮದಾಸ್ ಅವರು ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಗೆ ತಲುಪಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಶಾಸಕ ರಾಮದಾಸ್ ಅವರಿಗೆ ಅಲ್ಪ ಸ್ವಲ್ಪ ಗಾಯಗೊಂಡರು. ಈ ಸಂದರ್ಭದಲ್ಲಿ ಅಲ್ಲಿಯೇ ಸಮೀಪದ ಪೆಟ್ರೊಲ್ ಪಂಪ್ ನಲ್ಲಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಸದಾನಂದ ಗೌಡರ ಸಹೋದರ ದಿ. ಭಾಸ್ಕರ ಗೌಡರ ಪುತ್ರ ಆಶಿಕ್ ಅವರು ಶಾಸಕ ರಾಮ್ ದಾಸ್ ಅವರನ್ನು ತಮ್ಮ ಕಾರಿನಲ್ಲಿ ಸುಳ್ಯದ ಆಸ್ಪತ್ರೆ ಕರೆತಂದರು ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…