ಸುಳ್ಯ: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರ ಕಾರು ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು, ಕಾರು ಚಾಲಕ ಹಾಗೂ ಶಾಸಕರು ಅಪಾಯದಿಂದ ಪಾರಾದ ಘಟನೆ ಆ.23ರಂದು ಮುಂಜಾನೆ ಸಂಭವಿಸಿದೆ.
ಶಾಸಕ ರಾಮದಾಸ್ ಅವರು ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಗೆ ತಲುಪಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಶಾಸಕ ರಾಮದಾಸ್ ಅವರಿಗೆ ಅಲ್ಪ ಸ್ವಲ್ಪ ಗಾಯಗೊಂಡರು. ಈ ಸಂದರ್ಭದಲ್ಲಿ ಅಲ್ಲಿಯೇ ಸಮೀಪದ ಪೆಟ್ರೊಲ್ ಪಂಪ್ ನಲ್ಲಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಸದಾನಂದ ಗೌಡರ ಸಹೋದರ ದಿ. ಭಾಸ್ಕರ ಗೌಡರ ಪುತ್ರ ಆಶಿಕ್ ಅವರು ಶಾಸಕ ರಾಮ್ ದಾಸ್ ಅವರನ್ನು ತಮ್ಮ ಕಾರಿನಲ್ಲಿ ಸುಳ್ಯದ ಆಸ್ಪತ್ರೆ ಕರೆತಂದರು ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…