ಸುಳ್ಯ: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರ ಕಾರು ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು, ಕಾರು ಚಾಲಕ ಹಾಗೂ ಶಾಸಕರು ಅಪಾಯದಿಂದ ಪಾರಾದ ಘಟನೆ ಆ.23ರಂದು ಮುಂಜಾನೆ ಸಂಭವಿಸಿದೆ.
ಶಾಸಕ ರಾಮದಾಸ್ ಅವರು ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಗೆ ತಲುಪಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಶಾಸಕ ರಾಮದಾಸ್ ಅವರಿಗೆ ಅಲ್ಪ ಸ್ವಲ್ಪ ಗಾಯಗೊಂಡರು. ಈ ಸಂದರ್ಭದಲ್ಲಿ ಅಲ್ಲಿಯೇ ಸಮೀಪದ ಪೆಟ್ರೊಲ್ ಪಂಪ್ ನಲ್ಲಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಸದಾನಂದ ಗೌಡರ ಸಹೋದರ ದಿ. ಭಾಸ್ಕರ ಗೌಡರ ಪುತ್ರ ಆಶಿಕ್ ಅವರು ಶಾಸಕ ರಾಮ್ ದಾಸ್ ಅವರನ್ನು ತಮ್ಮ ಕಾರಿನಲ್ಲಿ ಸುಳ್ಯದ ಆಸ್ಪತ್ರೆ ಕರೆತಂದರು ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…