ಸುಳ್ಯ: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರ ಕಾರು ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು, ಕಾರು ಚಾಲಕ ಹಾಗೂ ಶಾಸಕರು ಅಪಾಯದಿಂದ ಪಾರಾದ ಘಟನೆ ಆ.23ರಂದು ಮುಂಜಾನೆ ಸಂಭವಿಸಿದೆ.
ಶಾಸಕ ರಾಮದಾಸ್ ಅವರು ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಗೆ ತಲುಪಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಶಾಸಕ ರಾಮದಾಸ್ ಅವರಿಗೆ ಅಲ್ಪ ಸ್ವಲ್ಪ ಗಾಯಗೊಂಡರು. ಈ ಸಂದರ್ಭದಲ್ಲಿ ಅಲ್ಲಿಯೇ ಸಮೀಪದ ಪೆಟ್ರೊಲ್ ಪಂಪ್ ನಲ್ಲಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಸದಾನಂದ ಗೌಡರ ಸಹೋದರ ದಿ. ಭಾಸ್ಕರ ಗೌಡರ ಪುತ್ರ ಆಶಿಕ್ ಅವರು ಶಾಸಕ ರಾಮ್ ದಾಸ್ ಅವರನ್ನು ತಮ್ಮ ಕಾರಿನಲ್ಲಿ ಸುಳ್ಯದ ಆಸ್ಪತ್ರೆ ಕರೆತಂದರು ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…