Advertisement
ವಿಶೇಷ ವರದಿಗಳು

ಮೊಗಪ್ಪೆ ಕೆರೆಯಲ್ಲಿ ನೀರಿಲ್ಲವೆಂಬ “ಕರೆ” ಬಂದಿದೆ….!

Share

ಬೆಳ್ಳಾರೆ: ಒಂದು ಕಾಲದಲ್ಲಿ ಕೆರೆಯಿಂದ ನೀರು ತೆಗೆದಷ್ಟು ಮುಗಿಯದ ಇತಿಹಾಸ ಇರುವ ಕೆರೆ ಮೊಗಪ್ಪೆ.  ಈ ವರ್ಷ ಪರಿಸ್ಥಿತಿ ಹಾಗಿಲ್ಲ. ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿದೆ.

ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಟ್ಟಾರಿನಲ್ಲಿರುವ ಮೊಗಪ್ಪೆ ಕೆರೆಗೆ ಶತಮಾನದ ಇತಿಹಾಸ ಇದೆ. ದಾಖಲೆಗಳ ಪ್ರಕಾರ 10 ಎಕ್ರೆಗೂ ಹೆಚ್ಚು ಪ್ರದೇಶದಲ್ಲಿ ಕೆರೆ ಇದೆ. ಇದರ ಕಾರಣದಿಂದ  ನೆಟ್ಟಾರು, ಬೆಳ್ಳಾರೆ, ಪೆರುವಾಜೆ ಗ್ರಾಮದ ಜಲದಲ್ಲಿ ನೀರಿನ ಮಟ್ಟ ಏರಿಕೆಗೂ ಕಾರಣವಾಗಿದೆ. ಈಗ ಮಾತ್ರಾ ಉಪಯೋಗಕ್ಕಿಲ್ಲವಾಗುವ ಆತಂಕ ಇದೆ. ಕಾರಣ ಇಷ್ಟೇ, ಅನುದಾನದ ಕೊರತೆಯಿಂದಾಗಿ ಕಳೆದ ಎರಡು ವರ್ಷಗಳಿಂದ ಹೂಳೆತ್ತುವ ಕಾರ್ಯ ನಡೆದಿಲ್ಲ.

ಎರಡು ವರ್ಷಗಳ ಹಿಂದೆ ಸಂಘ-ಸಂಸ್ಥೆಗಳು, ದಾನಿಗಳು ಈ ಕೆರೆಯ ಹೂಳೆತ್ತುವ ಕಾರ್ಯದ ನಿರ್ಧಾರವನ್ನು ಸ್ವತಃ ತಾವೇ ತೆಗೆದುಕೊಂಡರು. ಮೊಗಪ್ಪೆ ಕೆರೆ ಅಭಿವೃದ್ದಿ ಸಮಿತಿಯನ್ನು ರಚಿಸಿಕೊಂಡು ಸ್ವಯಂಪ್ರೇರಿತವಾಗಿ ಕೆರೆ ಅಭಿವೃದ್ಧಿಗಾಗಿ  ಶ್ರಮಿಸಿದರು. ಇದರ ಫಲವಾಗಿ ಹತ್ತಾರು ಅಡಿಗಳಷ್ಟು ಮಣ್ಣನ್ನು ಅಗೆಯಲಾಗಿತ್ತು. ಹೂಳೆತ್ತಿಸಿದ ನಂತರ ಕೆರೆಯಲ್ಲಿ ನೀರು ಮತ್ತೆ ತುಂಬಿತು.

ಮೊಗಪ್ಪೆ ಕೆರೆಯಲ್ಲಿ ಜಲ ಇಂಗಿಸುವ, ಸುಂದರ ಪ್ರವಾಸಿ ತಾಣವನ್ನಾಗಿಸುವ ಹತ್ತೂರಿಗೆ ನೀರು ಹರಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಊರವರೇ ಮುಂದಾಗಿದ್ದರು. ಹೂಳೆತ್ತಲು ಜನರು ಕೂಡ ಆರ್ಥಿಕ ಸಹಕಾರ ನೀಡಿದ್ದರು. 6 ಎಕ್ರೆಯಷ್ಟು ಪ್ರದೇಶದಲ್ಲಿ ಇದೇ ಮಟ್ಟದ ಆಳದಲ್ಲಿ ಕೆರೆಯ ಹೂಳೆತ್ತಿದರೆ ಸುಡು ಬೇಸಿಗೆಯಲ್ಲಿಯೂ ನೀರು ಬತ್ತದು. ಕೆರೆಯ ಉಳಿದ ಪ್ರದೇಶದಲ್ಲಿ ಇನ್ನಾದರೂ ಹೂಳೆತ್ತಿದರೆ ಹತ್ತೂರಿಗೆ ಸಾಕೆನಿಸುವಷ್ಟು ನೀರು ಹರಿಸಬಹುದು.

ಇಂದು ಜಲಕ್ಷಾಮದ ಭೀಕರತೆ ನಗರದಿಂದ ಸ್ವಚ್ಛಂದವಾದ ಹಳ್ಳಿ ಪ್ರದೇಶಕ್ಕೂ ಮುಟ್ಟಿರುವ ಈ ದಿನಗಳಲ್ಲಿ ಸಮೃದ್ಧ ಜಲಸಂಪತ್ತನೇ ಒಡಲಲ್ಲಿ ತುಂಬಿಕೊಂಡಿರುವ ಮೊಗಪ್ಪೆ ಕರೆಯ ಹೂಳೆತ್ತಲು ಇದು ಸಕಾಲವಾಗಿದೆ. ಜನರ ಉತ್ಸಾಹಕ್ಕೆ ಆಡಳಿತದವರ ಸಹಕಾರ ದೊರೆತರೆ ಮೊಗಪ್ಪೆ ಕೆರೆಯಲ್ಲಿ ಮೊಗೆದಷ್ಟೂ ನೀರು ದೊರೆಯುವುದು ನಿಶ್ಚಿತ ಎನ್ನುತ್ತಾರೆ ಮೊಗಪ್ಪೆಯ ಜನರು.

ಈ ಬಗ್ಗೆ ಬೆಳ್ಳಾರೆ ಗ್ರಾಪಂ ಅಧ್ಯಕ್ಷೆ ಶಕುಂತಳಾ ನಾಗರಾಜ್ ಹೇಳುತ್ತಾರೆ, ”  ಉದ್ಯೋಗ ಖಾತರಿ ಯೋಜನೆಯಡಿ ಹೂಳೆತ್ತುವ ಯೋಜನೆ ರೂಪಿಸಿದ್ದೇವೆ. ಕೆರೆ ಅಭಿವೃದ್ದಿಗೊಳಿಸಲು ಸರಕಾರಕ್ಕೆ ಪಂಚಾಯತ್ ವತಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಸದ್ಯ ಮೊಗಪ್ಪೆ ಕೆರೆ ಹೂಳೆತ್ತಿಸಿ ನೆಟ್ಟಾರು ಭಾಗದ ಜನತೆಗೆ ಕುಡಿಯುವ ನೀರಿನ ಲಭ್ಯತೆಗೆ ಯೋಚಿಸಲಾಗಿದೆ ” ಎಂದು ಹೇಳುತ್ತಾರೆ.

ಕೆರೆ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಬಿ.ಸುಬ್ರಹ್ಮಣ್ಯ ಜೋಶಿ ಮಾತನಾಡುತ್ತಾ, ”  ಕೆರೆ ಅಭಿವೃದ್ಧಿ ಸಮಿತಿಯ ರೂಪುರೇಷೆಯಂತೆ ಮೊಗಪ್ಪೆ ಕೆರೆಯ ಅಭಿವೃದ್ಧಿ ಕಾಮಗಾರಿಗಳು ನಡೆದರೆ ಉತ್ತಮ.  ಮಕ್ಕಳಿಗೂ ನೀರಿನ ಸದ್ಬಳಕೆಯ ಹಾಗು ನೀರಿಂಗಿಸುವ ಮಾಹಿತಿ ಕಾರ್ಯವನ್ನು ಮಾಡಲಾಗುವುದು “ಎನ್ನುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 minutes ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 hour ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

3 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

4 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

17 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago