ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಸರಕಾರಿ ಶಾಲೆಯ ಮಕ್ಕಳಿಗೆ ಹೊಳೆ ದಾಟಲು ಸೇತುವೆ ಮಾಡಿಕೊಡಿ ಎಂಬ ಬೇಡಿಕೆ ಇನ್ನೂ ಈಡೇರಿಲ್ಲ. ದೊಡ್ಡ ಬಜೆಟ್ ಸೇತುವೆ ಮುಂದೆ ಯಾವಾಗಲಾದರೂ ಮಾಡಿ ಸದ್ಯಕ್ಕೆ ಮಳೆಗಾಲದಲ್ಲಿ ದಾಟಲು ಕಾಲು ಸಂಕ ಅಥವಾ ತೂಗುಸೇತುವೆ ಮಾಡಿಕೊಡಿ ಎಂಬ ಬೇಡಿಕೆಯನ್ನೂ ಜನನಾಯಕರು ಪರಿಗಣಿಸಲೇ ಇಲ್ಲ. ಇದೀಗ ಇನ್ನೊಂದು ಭರವಸೆ ಮೂಡಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೆ ಈ ಶಾಲೆಯ ಸ್ಥಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗಮನಹರಿಸುವುದಾಗಿ ಹೇಳಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದ ಶಾಲೆಯೊಂದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಕಮಿಲದ ಮಹೇಶ್ ಅವರು ಮೊಗ್ರ ಶಾಲಾ ಮಕ್ಕಳ ಸ್ಥಿತಿ ಹಾಗೂ ಸೇತುವೆ ಅಥವಾ ಕಾಲು ಸಂಕ ಆಗದೇ ಇರುವ ಬಗ್ಗೆ ಪ್ರತಿಕ್ರಿಯೆ ರೂಪದಲ್ಲಿ ಮಾಹಿತಿ ನೀಡಲಾಗಿತ್ತು. ತಕ್ಷಣವೇ ಈ ಬಗ್ಗೆ ಸಂಪರ್ಕ ಸಂಖ್ಯೆ ಪಡೆದುಕೊಂಡು ಕರೆ ಮಾಡಿ ಮಾಹಿತಿ ಪಡೆದುಕೊಂಡ ಸಚಿವ ಸುರೇಶ್ ಕುಮಾರ್ ಅವರು ಈ ಬಗ್ಗೆ ಗಮನಹರಿಸುವುದಾಗಿ ಭರವಸೆ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಮಳೆಗಾಲ ಹೊಳೆದಾಟುವಂತೆ ಕನಿಷ್ಟ ಕಾಲುಸಂಕ ಮಾಡಿಸುವ ಕಡೆಗೆ ಗಮನಹರಿಸಲು ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೊತೆ ಮಾತುಕತೆ ನಡೆಸುವುದಲ್ಲದೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…