ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಸರಕಾರಿ ಶಾಲೆಯ ಮಕ್ಕಳಿಗೆ ಹೊಳೆ ದಾಟಲು ಸೇತುವೆ ಮಾಡಿಕೊಡಿ ಎಂಬ ಬೇಡಿಕೆ ಇನ್ನೂ ಈಡೇರಿಲ್ಲ. ದೊಡ್ಡ ಬಜೆಟ್ ಸೇತುವೆ ಮುಂದೆ ಯಾವಾಗಲಾದರೂ ಮಾಡಿ ಸದ್ಯಕ್ಕೆ ಮಳೆಗಾಲದಲ್ಲಿ ದಾಟಲು ಕಾಲು ಸಂಕ ಅಥವಾ ತೂಗುಸೇತುವೆ ಮಾಡಿಕೊಡಿ ಎಂಬ ಬೇಡಿಕೆಯನ್ನೂ ಜನನಾಯಕರು ಪರಿಗಣಿಸಲೇ ಇಲ್ಲ. ಇದೀಗ ಇನ್ನೊಂದು ಭರವಸೆ ಮೂಡಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೆ ಈ ಶಾಲೆಯ ಸ್ಥಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗಮನಹರಿಸುವುದಾಗಿ ಹೇಳಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದ ಶಾಲೆಯೊಂದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಕಮಿಲದ ಮಹೇಶ್ ಅವರು ಮೊಗ್ರ ಶಾಲಾ ಮಕ್ಕಳ ಸ್ಥಿತಿ ಹಾಗೂ ಸೇತುವೆ ಅಥವಾ ಕಾಲು ಸಂಕ ಆಗದೇ ಇರುವ ಬಗ್ಗೆ ಪ್ರತಿಕ್ರಿಯೆ ರೂಪದಲ್ಲಿ ಮಾಹಿತಿ ನೀಡಲಾಗಿತ್ತು. ತಕ್ಷಣವೇ ಈ ಬಗ್ಗೆ ಸಂಪರ್ಕ ಸಂಖ್ಯೆ ಪಡೆದುಕೊಂಡು ಕರೆ ಮಾಡಿ ಮಾಹಿತಿ ಪಡೆದುಕೊಂಡ ಸಚಿವ ಸುರೇಶ್ ಕುಮಾರ್ ಅವರು ಈ ಬಗ್ಗೆ ಗಮನಹರಿಸುವುದಾಗಿ ಭರವಸೆ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಮಳೆಗಾಲ ಹೊಳೆದಾಟುವಂತೆ ಕನಿಷ್ಟ ಕಾಲುಸಂಕ ಮಾಡಿಸುವ ಕಡೆಗೆ ಗಮನಹರಿಸಲು ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೊತೆ ಮಾತುಕತೆ ನಡೆಸುವುದಲ್ಲದೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…