ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಸರಕಾರಿ ಶಾಲೆಯ ಮಕ್ಕಳಿಗೆ ಹೊಳೆ ದಾಟಲು ಸೇತುವೆ ಮಾಡಿಕೊಡಿ ಎಂಬ ಬೇಡಿಕೆ ಇನ್ನೂ ಈಡೇರಿಲ್ಲ. ದೊಡ್ಡ ಬಜೆಟ್ ಸೇತುವೆ ಮುಂದೆ ಯಾವಾಗಲಾದರೂ ಮಾಡಿ ಸದ್ಯಕ್ಕೆ ಮಳೆಗಾಲದಲ್ಲಿ ದಾಟಲು ಕಾಲು ಸಂಕ ಅಥವಾ ತೂಗುಸೇತುವೆ ಮಾಡಿಕೊಡಿ ಎಂಬ ಬೇಡಿಕೆಯನ್ನೂ ಜನನಾಯಕರು ಪರಿಗಣಿಸಲೇ ಇಲ್ಲ. ಇದೀಗ ಇನ್ನೊಂದು ಭರವಸೆ ಮೂಡಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೆ ಈ ಶಾಲೆಯ ಸ್ಥಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗಮನಹರಿಸುವುದಾಗಿ ಹೇಳಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದ ಶಾಲೆಯೊಂದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಕಮಿಲದ ಮಹೇಶ್ ಅವರು ಮೊಗ್ರ ಶಾಲಾ ಮಕ್ಕಳ ಸ್ಥಿತಿ ಹಾಗೂ ಸೇತುವೆ ಅಥವಾ ಕಾಲು ಸಂಕ ಆಗದೇ ಇರುವ ಬಗ್ಗೆ ಪ್ರತಿಕ್ರಿಯೆ ರೂಪದಲ್ಲಿ ಮಾಹಿತಿ ನೀಡಲಾಗಿತ್ತು. ತಕ್ಷಣವೇ ಈ ಬಗ್ಗೆ ಸಂಪರ್ಕ ಸಂಖ್ಯೆ ಪಡೆದುಕೊಂಡು ಕರೆ ಮಾಡಿ ಮಾಹಿತಿ ಪಡೆದುಕೊಂಡ ಸಚಿವ ಸುರೇಶ್ ಕುಮಾರ್ ಅವರು ಈ ಬಗ್ಗೆ ಗಮನಹರಿಸುವುದಾಗಿ ಭರವಸೆ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಮಳೆಗಾಲ ಹೊಳೆದಾಟುವಂತೆ ಕನಿಷ್ಟ ಕಾಲುಸಂಕ ಮಾಡಿಸುವ ಕಡೆಗೆ ಗಮನಹರಿಸಲು ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೊತೆ ಮಾತುಕತೆ ನಡೆಸುವುದಲ್ಲದೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…