ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಸರಕಾರಿ ಶಾಲೆಯ ಮಕ್ಕಳಿಗೆ ಹೊಳೆ ದಾಟಲು ಸೇತುವೆ ಮಾಡಿಕೊಡಿ ಎಂಬ ಬೇಡಿಕೆ ಇನ್ನೂ ಈಡೇರಿಲ್ಲ. ದೊಡ್ಡ ಬಜೆಟ್ ಸೇತುವೆ ಮುಂದೆ ಯಾವಾಗಲಾದರೂ ಮಾಡಿ ಸದ್ಯಕ್ಕೆ ಮಳೆಗಾಲದಲ್ಲಿ ದಾಟಲು ಕಾಲು ಸಂಕ ಅಥವಾ ತೂಗುಸೇತುವೆ ಮಾಡಿಕೊಡಿ ಎಂಬ ಬೇಡಿಕೆಯನ್ನೂ ಜನನಾಯಕರು ಪರಿಗಣಿಸಲೇ ಇಲ್ಲ. ಇದೀಗ ಇನ್ನೊಂದು ಭರವಸೆ ಮೂಡಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೆ ಈ ಶಾಲೆಯ ಸ್ಥಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗಮನಹರಿಸುವುದಾಗಿ ಹೇಳಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದ ಶಾಲೆಯೊಂದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಕಮಿಲದ ಮಹೇಶ್ ಅವರು ಮೊಗ್ರ ಶಾಲಾ ಮಕ್ಕಳ ಸ್ಥಿತಿ ಹಾಗೂ ಸೇತುವೆ ಅಥವಾ ಕಾಲು ಸಂಕ ಆಗದೇ ಇರುವ ಬಗ್ಗೆ ಪ್ರತಿಕ್ರಿಯೆ ರೂಪದಲ್ಲಿ ಮಾಹಿತಿ ನೀಡಲಾಗಿತ್ತು. ತಕ್ಷಣವೇ ಈ ಬಗ್ಗೆ ಸಂಪರ್ಕ ಸಂಖ್ಯೆ ಪಡೆದುಕೊಂಡು ಕರೆ ಮಾಡಿ ಮಾಹಿತಿ ಪಡೆದುಕೊಂಡ ಸಚಿವ ಸುರೇಶ್ ಕುಮಾರ್ ಅವರು ಈ ಬಗ್ಗೆ ಗಮನಹರಿಸುವುದಾಗಿ ಭರವಸೆ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಮಳೆಗಾಲ ಹೊಳೆದಾಟುವಂತೆ ಕನಿಷ್ಟ ಕಾಲುಸಂಕ ಮಾಡಿಸುವ ಕಡೆಗೆ ಗಮನಹರಿಸಲು ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೊತೆ ಮಾತುಕತೆ ನಡೆಸುವುದಲ್ಲದೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…