ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಸರಕಾರಿ ಶಾಲೆಯ ಮಕ್ಕಳಿಗೆ ಹೊಳೆ ದಾಟಲು ಸೇತುವೆ ಮಾಡಿಕೊಡಿ ಎಂಬ ಬೇಡಿಕೆ ಇನ್ನೂ ಈಡೇರಿಲ್ಲ. ದೊಡ್ಡ ಬಜೆಟ್ ಸೇತುವೆ ಮುಂದೆ ಯಾವಾಗಲಾದರೂ ಮಾಡಿ ಸದ್ಯಕ್ಕೆ ಮಳೆಗಾಲದಲ್ಲಿ ದಾಟಲು ಕಾಲು ಸಂಕ ಅಥವಾ ತೂಗುಸೇತುವೆ ಮಾಡಿಕೊಡಿ ಎಂಬ ಬೇಡಿಕೆಯನ್ನೂ ಜನನಾಯಕರು ಪರಿಗಣಿಸಲೇ ಇಲ್ಲ. ಇದೀಗ ಇನ್ನೊಂದು ಭರವಸೆ ಮೂಡಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೆ ಈ ಶಾಲೆಯ ಸ್ಥಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗಮನಹರಿಸುವುದಾಗಿ ಹೇಳಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದ ಶಾಲೆಯೊಂದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಕಮಿಲದ ಮಹೇಶ್ ಅವರು ಮೊಗ್ರ ಶಾಲಾ ಮಕ್ಕಳ ಸ್ಥಿತಿ ಹಾಗೂ ಸೇತುವೆ ಅಥವಾ ಕಾಲು ಸಂಕ ಆಗದೇ ಇರುವ ಬಗ್ಗೆ ಪ್ರತಿಕ್ರಿಯೆ ರೂಪದಲ್ಲಿ ಮಾಹಿತಿ ನೀಡಲಾಗಿತ್ತು. ತಕ್ಷಣವೇ ಈ ಬಗ್ಗೆ ಸಂಪರ್ಕ ಸಂಖ್ಯೆ ಪಡೆದುಕೊಂಡು ಕರೆ ಮಾಡಿ ಮಾಹಿತಿ ಪಡೆದುಕೊಂಡ ಸಚಿವ ಸುರೇಶ್ ಕುಮಾರ್ ಅವರು ಈ ಬಗ್ಗೆ ಗಮನಹರಿಸುವುದಾಗಿ ಭರವಸೆ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಮಳೆಗಾಲ ಹೊಳೆದಾಟುವಂತೆ ಕನಿಷ್ಟ ಕಾಲುಸಂಕ ಮಾಡಿಸುವ ಕಡೆಗೆ ಗಮನಹರಿಸಲು ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೊತೆ ಮಾತುಕತೆ ನಡೆಸುವುದಲ್ಲದೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…