Advertisement
The Rural Mirror ಫಾಲೋಅಪ್

ಮೊಣ್ಣಂಗೇರಿಯಲ್ಲಿ ಬಾಯ್ದೆರೆದು ನಿಂತಿದೆ ಬಂಡೆ ಕಲ್ಲುಗಳು…!

Share

ಸಂಪಾಜೆ : ಮೊಣ್ಣಂಗೇರಿ ಪ್ರದೇಶದಲ್ಲಿ ಬೃಹತ್ ಗಾತ್ರದ  ಬಂಡೆಕಲ್ಲುಗಳು ಬಾಯ್ದೆರೆದು ನಿಂತಿದೆ. ಒಂದೆರಡು ಮಳೆಗೆ ಕುಸಿಯುವ ಭೀತಿ ಇದೆ. ಆ ಪ್ರದೇಶದಲ್ಲಿ ಈಗ ನಡೆಯುವುದೇ ಭಯ…!.

ಕಳೆದ 3 ದಿನಗಳಲ್ಲಿ ಕಳೆದ ಬಾರಿ ಮೊಣ್ಣಂಗೇರಿ, ಜೋಡುಪಾಲದ  ಜಲಪ್ರಳಯದ ನೆನಪುಗಳು ಹಾಗೂ ಇಂದಿನವರೆಗಿನ ಸ್ಥಿತಿಯ ದರ್ಶನವಾಗಿದೆ. ಮನೆಗಳೇ ಇಲ್ಲ, ಕೃಷಿ ನಾಶ, ಮುಚ್ಚಿದ ಶಾಲೆ ಸೇರಿದಂತೆ ಅಲ್ಲಿನ ಜನರ ಇಂದಿನ ಬದುಕು ದರ್ಶನವಾಗಿದೆ. ಈಗ ಮುಂದಿನ ಸ್ಥಿತಿಯ ಬಗ್ಗೆ ಯೋಚಿಸಿದರೆ ಭಯವಾಗುತ್ತಿದೆ. ಆ ಜನರಿಗೆ ನಿತ್ಯವೂ ಭಯವಾದರೆ ಮೊಣ್ಣಂಗೇರಿಯ ಆ ರಸ್ತೆಯಲ್ಲಿ ಓಡಾಡಿದರೆ ಎದೆ ಢವ ಢವ ಎನ್ನುತ್ತದೆ. ಆ ಬಂಡೆಗಳು ಈಗ ಬೀಳುತ್ತೋ ಮತ್ತೆ ಬೀಳುತ್ತೋ ಎನ್ನುವ ಸ್ಥಿತಿ ಇದೆ. ಈ ನಡುವೆ ಸಾಕಷ್ಟು ನೀರು ಹರಿಯುತ್ತಿದೆ ಅಲ್ಲಿ, ಆದರೆ ಆ ನೀರು ಅಲ್ಲಿನ ಜನರಿಗೆ ಈಗ ಉಪಯೋಗಕ್ಕೆ ಬರುತ್ತಿಲ್ಲ. ತೋಟ, ಮನೆ ಎತ್ತರದಲ್ಲಾದರೆ , ನೀರು ಕೆಳಭಾಗದಲ್ಲಿ ಹರಿಯುತ್ತಿದೆ. ಅದರ ದೃಶ್ಯ ಹೀಗಿದೆ….

 

 

ಕಳೆದ ಬಾರಿಯ ಪ್ರಳಯದ ನಂತರ ರಸ್ತೆ ದುರಸ್ತಿಯಾಗಿದೆ. ಇದು ಇಲ್ಲಿನ ಜನರಿಗೆ ಪ್ರಯೋಜನವಾಗಿದೆ. ಆದರೆ ಅದಕ್ಕಿಂತಲೂ ಭಯಾನಕ ಸ್ಥಿತಿ , ಈ ವರ್ಷ ಹೇಗೆ ಎಂದು ? ಒಂದೆರಡು ಮಳೆ ಬಿದ್ದರೆ ಭಯ ಶುರುವಾಗುತ್ತದೆ.  ಗುಡ್ಡದ ಮಣ್ಣು ಕುಸಿಯುತ್ತದೆ, ಕಲ್ಲುಗಳು ಬೀಳುತ್ತದೆ. ಎರಡು ಕಲ್ಲುಗಳು ಉಜ್ಜಿಕೊಂಡು ಬೀಳುವ ವೇಳೆ ದೊಡ್ಡದಾದ ಸದ್ದು ಕೇಳುತ್ತದೆ. ಮಳೆ ಬಂದಾಗ ನೀರು ಹೆಚ್ಚಾಗಿ ಬಂದು  ಸಡಿಲವಾಗಿರುವ ಮಣ್ಣು ಕೊರೆದು ಹೋದಾಗ ಕಲ್ಲುಗಳೂ ಆಧಾರ ಕಳೆದುಕೊಂಡು ಬೀಳುತ್ತವೆ. ಹೀಗಾಗಿ ಭಯ ಎಂದು ಹೇಳುತ್ತಾರೆ ಮೊಣ್ಣಂಗೇರಿಯ ಸತೀಶ್ ನಾಯ್ಕ್.

 

ಈ ಬಾರಿಯ ಮಳೆಗಾಲದ ಮುನ್ನ ಸೂಕ್ತ ಮುಂಜಾಗ್ರತಾ ಕ್ರಮವಾಗಬೇಕು. ಈಗಿರುವ ಜನರಿಗೆ ಸೂಕ್ತ ರಕ್ಷಣೆ ಬೇಕು ಎನ್ನುವುದು ಅಲ್ಲಿಗೆ ಹೋದ ಯಾರು ಬೇಕಾದರೂ ಹೇಳಬಹುದು. ಇದನ್ನು ಅಧಿಕಾರಿಗಳು ಈಗಲೇ ಗಮನಿಸಬೇಕು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 minute ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 hour ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

3 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

4 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

17 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago