Advertisement
The Rural Mirror ಫಾಲೋಅಪ್

ಮೊಣ್ಣಂಗೇರಿಯಲ್ಲಿ ಬಾಯ್ದೆರೆದು ನಿಂತಿದೆ ಬಂಡೆ ಕಲ್ಲುಗಳು…!

Share

ಸಂಪಾಜೆ : ಮೊಣ್ಣಂಗೇರಿ ಪ್ರದೇಶದಲ್ಲಿ ಬೃಹತ್ ಗಾತ್ರದ  ಬಂಡೆಕಲ್ಲುಗಳು ಬಾಯ್ದೆರೆದು ನಿಂತಿದೆ. ಒಂದೆರಡು ಮಳೆಗೆ ಕುಸಿಯುವ ಭೀತಿ ಇದೆ. ಆ ಪ್ರದೇಶದಲ್ಲಿ ಈಗ ನಡೆಯುವುದೇ ಭಯ…!.

ಕಳೆದ 3 ದಿನಗಳಲ್ಲಿ ಕಳೆದ ಬಾರಿ ಮೊಣ್ಣಂಗೇರಿ, ಜೋಡುಪಾಲದ  ಜಲಪ್ರಳಯದ ನೆನಪುಗಳು ಹಾಗೂ ಇಂದಿನವರೆಗಿನ ಸ್ಥಿತಿಯ ದರ್ಶನವಾಗಿದೆ. ಮನೆಗಳೇ ಇಲ್ಲ, ಕೃಷಿ ನಾಶ, ಮುಚ್ಚಿದ ಶಾಲೆ ಸೇರಿದಂತೆ ಅಲ್ಲಿನ ಜನರ ಇಂದಿನ ಬದುಕು ದರ್ಶನವಾಗಿದೆ. ಈಗ ಮುಂದಿನ ಸ್ಥಿತಿಯ ಬಗ್ಗೆ ಯೋಚಿಸಿದರೆ ಭಯವಾಗುತ್ತಿದೆ. ಆ ಜನರಿಗೆ ನಿತ್ಯವೂ ಭಯವಾದರೆ ಮೊಣ್ಣಂಗೇರಿಯ ಆ ರಸ್ತೆಯಲ್ಲಿ ಓಡಾಡಿದರೆ ಎದೆ ಢವ ಢವ ಎನ್ನುತ್ತದೆ. ಆ ಬಂಡೆಗಳು ಈಗ ಬೀಳುತ್ತೋ ಮತ್ತೆ ಬೀಳುತ್ತೋ ಎನ್ನುವ ಸ್ಥಿತಿ ಇದೆ. ಈ ನಡುವೆ ಸಾಕಷ್ಟು ನೀರು ಹರಿಯುತ್ತಿದೆ ಅಲ್ಲಿ, ಆದರೆ ಆ ನೀರು ಅಲ್ಲಿನ ಜನರಿಗೆ ಈಗ ಉಪಯೋಗಕ್ಕೆ ಬರುತ್ತಿಲ್ಲ. ತೋಟ, ಮನೆ ಎತ್ತರದಲ್ಲಾದರೆ , ನೀರು ಕೆಳಭಾಗದಲ್ಲಿ ಹರಿಯುತ್ತಿದೆ. ಅದರ ದೃಶ್ಯ ಹೀಗಿದೆ….

 

 

ಕಳೆದ ಬಾರಿಯ ಪ್ರಳಯದ ನಂತರ ರಸ್ತೆ ದುರಸ್ತಿಯಾಗಿದೆ. ಇದು ಇಲ್ಲಿನ ಜನರಿಗೆ ಪ್ರಯೋಜನವಾಗಿದೆ. ಆದರೆ ಅದಕ್ಕಿಂತಲೂ ಭಯಾನಕ ಸ್ಥಿತಿ , ಈ ವರ್ಷ ಹೇಗೆ ಎಂದು ? ಒಂದೆರಡು ಮಳೆ ಬಿದ್ದರೆ ಭಯ ಶುರುವಾಗುತ್ತದೆ.  ಗುಡ್ಡದ ಮಣ್ಣು ಕುಸಿಯುತ್ತದೆ, ಕಲ್ಲುಗಳು ಬೀಳುತ್ತದೆ. ಎರಡು ಕಲ್ಲುಗಳು ಉಜ್ಜಿಕೊಂಡು ಬೀಳುವ ವೇಳೆ ದೊಡ್ಡದಾದ ಸದ್ದು ಕೇಳುತ್ತದೆ. ಮಳೆ ಬಂದಾಗ ನೀರು ಹೆಚ್ಚಾಗಿ ಬಂದು  ಸಡಿಲವಾಗಿರುವ ಮಣ್ಣು ಕೊರೆದು ಹೋದಾಗ ಕಲ್ಲುಗಳೂ ಆಧಾರ ಕಳೆದುಕೊಂಡು ಬೀಳುತ್ತವೆ. ಹೀಗಾಗಿ ಭಯ ಎಂದು ಹೇಳುತ್ತಾರೆ ಮೊಣ್ಣಂಗೇರಿಯ ಸತೀಶ್ ನಾಯ್ಕ್.

 

ಈ ಬಾರಿಯ ಮಳೆಗಾಲದ ಮುನ್ನ ಸೂಕ್ತ ಮುಂಜಾಗ್ರತಾ ಕ್ರಮವಾಗಬೇಕು. ಈಗಿರುವ ಜನರಿಗೆ ಸೂಕ್ತ ರಕ್ಷಣೆ ಬೇಕು ಎನ್ನುವುದು ಅಲ್ಲಿಗೆ ಹೋದ ಯಾರು ಬೇಕಾದರೂ ಹೇಳಬಹುದು. ಇದನ್ನು ಅಧಿಕಾರಿಗಳು ಈಗಲೇ ಗಮನಿಸಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

5 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

7 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

7 hours ago

ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ

ಇಥೆನಾಲ್‌ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…

7 hours ago

ಅಮೆರಿಕ-ಇರಾನ್ ಯುದ್ಧ ಮತ್ತೆ ಭುಗಿಲೇ..? ಕದನ ವಿರಾಮ ಅಂತ್ಯ ಎಂದ ಟ್ರಂಪ್ – ಹೊಸ ದಾಳಿಗಳಿಂದ ಜಾಗತಿಕ ಆತಂಕ

ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…

8 hours ago

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

21 hours ago