Advertisement
The Rural Mirror ಫಾಲೋಅಪ್

ಮೊಣ್ಣಂಗೇರಿಯಲ್ಲಿ ಬಾಯ್ದೆರೆದು ನಿಂತಿದೆ ಬಂಡೆ ಕಲ್ಲುಗಳು…!

Share

ಸಂಪಾಜೆ : ಮೊಣ್ಣಂಗೇರಿ ಪ್ರದೇಶದಲ್ಲಿ ಬೃಹತ್ ಗಾತ್ರದ  ಬಂಡೆಕಲ್ಲುಗಳು ಬಾಯ್ದೆರೆದು ನಿಂತಿದೆ. ಒಂದೆರಡು ಮಳೆಗೆ ಕುಸಿಯುವ ಭೀತಿ ಇದೆ. ಆ ಪ್ರದೇಶದಲ್ಲಿ ಈಗ ನಡೆಯುವುದೇ ಭಯ…!.

Advertisement

ಕಳೆದ 3 ದಿನಗಳಲ್ಲಿ ಕಳೆದ ಬಾರಿ ಮೊಣ್ಣಂಗೇರಿ, ಜೋಡುಪಾಲದ  ಜಲಪ್ರಳಯದ ನೆನಪುಗಳು ಹಾಗೂ ಇಂದಿನವರೆಗಿನ ಸ್ಥಿತಿಯ ದರ್ಶನವಾಗಿದೆ. ಮನೆಗಳೇ ಇಲ್ಲ, ಕೃಷಿ ನಾಶ, ಮುಚ್ಚಿದ ಶಾಲೆ ಸೇರಿದಂತೆ ಅಲ್ಲಿನ ಜನರ ಇಂದಿನ ಬದುಕು ದರ್ಶನವಾಗಿದೆ. ಈಗ ಮುಂದಿನ ಸ್ಥಿತಿಯ ಬಗ್ಗೆ ಯೋಚಿಸಿದರೆ ಭಯವಾಗುತ್ತಿದೆ. ಆ ಜನರಿಗೆ ನಿತ್ಯವೂ ಭಯವಾದರೆ ಮೊಣ್ಣಂಗೇರಿಯ ಆ ರಸ್ತೆಯಲ್ಲಿ ಓಡಾಡಿದರೆ ಎದೆ ಢವ ಢವ ಎನ್ನುತ್ತದೆ. ಆ ಬಂಡೆಗಳು ಈಗ ಬೀಳುತ್ತೋ ಮತ್ತೆ ಬೀಳುತ್ತೋ ಎನ್ನುವ ಸ್ಥಿತಿ ಇದೆ. ಈ ನಡುವೆ ಸಾಕಷ್ಟು ನೀರು ಹರಿಯುತ್ತಿದೆ ಅಲ್ಲಿ, ಆದರೆ ಆ ನೀರು ಅಲ್ಲಿನ ಜನರಿಗೆ ಈಗ ಉಪಯೋಗಕ್ಕೆ ಬರುತ್ತಿಲ್ಲ. ತೋಟ, ಮನೆ ಎತ್ತರದಲ್ಲಾದರೆ , ನೀರು ಕೆಳಭಾಗದಲ್ಲಿ ಹರಿಯುತ್ತಿದೆ. ಅದರ ದೃಶ್ಯ ಹೀಗಿದೆ….

 

 

ಕಳೆದ ಬಾರಿಯ ಪ್ರಳಯದ ನಂತರ ರಸ್ತೆ ದುರಸ್ತಿಯಾಗಿದೆ. ಇದು ಇಲ್ಲಿನ ಜನರಿಗೆ ಪ್ರಯೋಜನವಾಗಿದೆ. ಆದರೆ ಅದಕ್ಕಿಂತಲೂ ಭಯಾನಕ ಸ್ಥಿತಿ , ಈ ವರ್ಷ ಹೇಗೆ ಎಂದು ? ಒಂದೆರಡು ಮಳೆ ಬಿದ್ದರೆ ಭಯ ಶುರುವಾಗುತ್ತದೆ.  ಗುಡ್ಡದ ಮಣ್ಣು ಕುಸಿಯುತ್ತದೆ, ಕಲ್ಲುಗಳು ಬೀಳುತ್ತದೆ. ಎರಡು ಕಲ್ಲುಗಳು ಉಜ್ಜಿಕೊಂಡು ಬೀಳುವ ವೇಳೆ ದೊಡ್ಡದಾದ ಸದ್ದು ಕೇಳುತ್ತದೆ. ಮಳೆ ಬಂದಾಗ ನೀರು ಹೆಚ್ಚಾಗಿ ಬಂದು  ಸಡಿಲವಾಗಿರುವ ಮಣ್ಣು ಕೊರೆದು ಹೋದಾಗ ಕಲ್ಲುಗಳೂ ಆಧಾರ ಕಳೆದುಕೊಂಡು ಬೀಳುತ್ತವೆ. ಹೀಗಾಗಿ ಭಯ ಎಂದು ಹೇಳುತ್ತಾರೆ ಮೊಣ್ಣಂಗೇರಿಯ ಸತೀಶ್ ನಾಯ್ಕ್.

 

ಈ ಬಾರಿಯ ಮಳೆಗಾಲದ ಮುನ್ನ ಸೂಕ್ತ ಮುಂಜಾಗ್ರತಾ ಕ್ರಮವಾಗಬೇಕು. ಈಗಿರುವ ಜನರಿಗೆ ಸೂಕ್ತ ರಕ್ಷಣೆ ಬೇಕು ಎನ್ನುವುದು ಅಲ್ಲಿಗೆ ಹೋದ ಯಾರು ಬೇಕಾದರೂ ಹೇಳಬಹುದು. ಇದನ್ನು ಅಧಿಕಾರಿಗಳು ಈಗಲೇ ಗಮನಿಸಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

13 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

21 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

21 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

21 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

21 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago