Advertisement
The Rural Mirror ಫಾಲೋಅಪ್

ಮೊಣ್ಣಂಗೇರಿಯಲ್ಲಿ ಬಾಯ್ದೆರೆದು ನಿಂತಿದೆ ಬಂಡೆ ಕಲ್ಲುಗಳು…!

Share

ಸಂಪಾಜೆ : ಮೊಣ್ಣಂಗೇರಿ ಪ್ರದೇಶದಲ್ಲಿ ಬೃಹತ್ ಗಾತ್ರದ  ಬಂಡೆಕಲ್ಲುಗಳು ಬಾಯ್ದೆರೆದು ನಿಂತಿದೆ. ಒಂದೆರಡು ಮಳೆಗೆ ಕುಸಿಯುವ ಭೀತಿ ಇದೆ. ಆ ಪ್ರದೇಶದಲ್ಲಿ ಈಗ ನಡೆಯುವುದೇ ಭಯ…!.

ಕಳೆದ 3 ದಿನಗಳಲ್ಲಿ ಕಳೆದ ಬಾರಿ ಮೊಣ್ಣಂಗೇರಿ, ಜೋಡುಪಾಲದ  ಜಲಪ್ರಳಯದ ನೆನಪುಗಳು ಹಾಗೂ ಇಂದಿನವರೆಗಿನ ಸ್ಥಿತಿಯ ದರ್ಶನವಾಗಿದೆ. ಮನೆಗಳೇ ಇಲ್ಲ, ಕೃಷಿ ನಾಶ, ಮುಚ್ಚಿದ ಶಾಲೆ ಸೇರಿದಂತೆ ಅಲ್ಲಿನ ಜನರ ಇಂದಿನ ಬದುಕು ದರ್ಶನವಾಗಿದೆ. ಈಗ ಮುಂದಿನ ಸ್ಥಿತಿಯ ಬಗ್ಗೆ ಯೋಚಿಸಿದರೆ ಭಯವಾಗುತ್ತಿದೆ. ಆ ಜನರಿಗೆ ನಿತ್ಯವೂ ಭಯವಾದರೆ ಮೊಣ್ಣಂಗೇರಿಯ ಆ ರಸ್ತೆಯಲ್ಲಿ ಓಡಾಡಿದರೆ ಎದೆ ಢವ ಢವ ಎನ್ನುತ್ತದೆ. ಆ ಬಂಡೆಗಳು ಈಗ ಬೀಳುತ್ತೋ ಮತ್ತೆ ಬೀಳುತ್ತೋ ಎನ್ನುವ ಸ್ಥಿತಿ ಇದೆ. ಈ ನಡುವೆ ಸಾಕಷ್ಟು ನೀರು ಹರಿಯುತ್ತಿದೆ ಅಲ್ಲಿ, ಆದರೆ ಆ ನೀರು ಅಲ್ಲಿನ ಜನರಿಗೆ ಈಗ ಉಪಯೋಗಕ್ಕೆ ಬರುತ್ತಿಲ್ಲ. ತೋಟ, ಮನೆ ಎತ್ತರದಲ್ಲಾದರೆ , ನೀರು ಕೆಳಭಾಗದಲ್ಲಿ ಹರಿಯುತ್ತಿದೆ. ಅದರ ದೃಶ್ಯ ಹೀಗಿದೆ….

 

 

ಕಳೆದ ಬಾರಿಯ ಪ್ರಳಯದ ನಂತರ ರಸ್ತೆ ದುರಸ್ತಿಯಾಗಿದೆ. ಇದು ಇಲ್ಲಿನ ಜನರಿಗೆ ಪ್ರಯೋಜನವಾಗಿದೆ. ಆದರೆ ಅದಕ್ಕಿಂತಲೂ ಭಯಾನಕ ಸ್ಥಿತಿ , ಈ ವರ್ಷ ಹೇಗೆ ಎಂದು ? ಒಂದೆರಡು ಮಳೆ ಬಿದ್ದರೆ ಭಯ ಶುರುವಾಗುತ್ತದೆ.  ಗುಡ್ಡದ ಮಣ್ಣು ಕುಸಿಯುತ್ತದೆ, ಕಲ್ಲುಗಳು ಬೀಳುತ್ತದೆ. ಎರಡು ಕಲ್ಲುಗಳು ಉಜ್ಜಿಕೊಂಡು ಬೀಳುವ ವೇಳೆ ದೊಡ್ಡದಾದ ಸದ್ದು ಕೇಳುತ್ತದೆ. ಮಳೆ ಬಂದಾಗ ನೀರು ಹೆಚ್ಚಾಗಿ ಬಂದು  ಸಡಿಲವಾಗಿರುವ ಮಣ್ಣು ಕೊರೆದು ಹೋದಾಗ ಕಲ್ಲುಗಳೂ ಆಧಾರ ಕಳೆದುಕೊಂಡು ಬೀಳುತ್ತವೆ. ಹೀಗಾಗಿ ಭಯ ಎಂದು ಹೇಳುತ್ತಾರೆ ಮೊಣ್ಣಂಗೇರಿಯ ಸತೀಶ್ ನಾಯ್ಕ್.

 

ಈ ಬಾರಿಯ ಮಳೆಗಾಲದ ಮುನ್ನ ಸೂಕ್ತ ಮುಂಜಾಗ್ರತಾ ಕ್ರಮವಾಗಬೇಕು. ಈಗಿರುವ ಜನರಿಗೆ ಸೂಕ್ತ ರಕ್ಷಣೆ ಬೇಕು ಎನ್ನುವುದು ಅಲ್ಲಿಗೆ ಹೋದ ಯಾರು ಬೇಕಾದರೂ ಹೇಳಬಹುದು. ಇದನ್ನು ಅಧಿಕಾರಿಗಳು ಈಗಲೇ ಗಮನಿಸಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

2 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

2 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

19 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago