ಮೊಣ್ಣಂಗೇರಿ ಪ್ರದೇಶಗಳಿಗೆ ಆಡಳಿತ ಭೇಟಿ ನೀಡಿತು….!

May 17, 2019
9:03 AM

ಸಂಪಾಜೆ :  ಜೋಡುಪಾಲ, ಮೊಣ್ಣಂಗೇರಿ ಪ್ರದೇಶದಲ್ಲಿ ಕಳೆದ ವರ್ಷ ನಡೆದ ಜಲಪ್ರಳಯದ ನಂತರ ಜನರ ಬದುಕಿನ ಸ್ಥಿತಿ ಹಾಗೂ ಅಲ್ಲಿನ ಸ್ಥಿತಿಗತಿಗಳ ಬಗ್ಗೆ “ಸುಳ್ಯನ್ಯೂಸ್.ಕಾಂ” ತಂಡ ಕಳೆದ ಒಂದು ವಾರದಿಂದ ನಿರಂತರವಾಗಿ ವರದಿ ಮಾಡಿತು. ವಾಸ್ತವ ಸ್ಥಿತಿಯನ್ನು ವಿಡಿಯೋ ಸಹಿತ ತೆರೆದಿಡುವುದು  ನಮ್ಮ ಉದ್ದೇಶವಾಗಿತ್ತು.

Advertisement

ಈಗಲೂ ಮೊಣ್ಣಂಗೇರಿ ಪ್ರದೇಶದಿಂದ ಜನರು ವಲಸೆ ಹೋಗುತ್ತಿದ್ದಾರೆ. ಮಳೆಗಾಲದ ಮುನ್ನ ಭಯ ಮುಕ್ತ ಬದುಕಿಗಾಗಿ ಮಾನಸಿಕವಾಗಿ ಸಿದ್ಧರಾಗುತ್ತಿದ್ದಾರೆ. ವಾಹನಗಳಲ್ಲಿ  ವಸ್ತುಗಳನ್ನು ಕೊಂಡೊಯ್ಯುತ್ತಿದ್ದಾರೆ. ಕೃಷಿ ಭೂಮಿಯನ್ನು ಹಾಗೆಯೇ ಬಿಡುತ್ತಿದ್ದಾರೆ. ಇಲಾಖೆಗಳಿಂದ ಇಲ್ಲಿನ ಮನೆಗಳಿಗೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ, ಮಳೆಗಾಲದ ಮುನ್ನ ಸ್ಥಳಾಂತರವಾಗಿ ಎಂಬ ಮುನ್ಸೂಚನೆ ನೀಡಿದ್ದಾರೆ. ಈ ಬಾರಿಯ ಮಳೆಗಾಲವೂ ಅಪಾಯವಾಗುವ ಸಾಧ್ಯತೆ ಇರುವುದರಿಂದ ಸ್ಥಳಾಂತರ ಆಗಬೇಕು ಎಂದು ಮನವೊಲಿಕೆ ಮಾಡಿದ್ದಾರೆ.

ಖಾಲಿಯಾಗಿರುವ ಮನೆ

 

ಎರಡು ದಿನಗಳ ಹಿಂದೆ ಕೊಡಗು ಜಿಲ್ಲಾಡಳಿತವೇ  ಖುದ್ದಾಗಿ ವೀಕ್ಷಣೆ ಮಾಡಿದೆ. ಜಿಲ್ಲಾಧಿಕಾರಿಗಳ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಪರಿಹಾರ ಧನ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

 

 

 

 

35 ಕೋಟಿ ಪರಿಹಾರ ವಿತರಣೆ – ಸ್ಪಷ್ಟನೆ :

ಮಳೆಹಾನಿ, ಬೆಳೆಹಾನಿ ಹಾಗೂ ಭೂಕುಸಿತದಿಂದ ಹಾನಿಗೊಳಗಾದವರಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದ ಕೊಡಗು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಕಾಫಿ ಹಾಗೂ ಸಾಂಬಾರ ಬೆಳೆಗಳ ಹಾನಿಗೆ ಹೆಕ್ಟೇರ್ ಗೆ 18 ಸಾವಿರದಂತೆ 2 ಹೆಕ್ಟೇರ್ ವರೆಗೆ ಪರಿಹಾರ , ಕೃಷಿ ಭೂಮಿಗೆ 12 ಸಾವಿರದಂತೆ 2 ಹೆಕ್ಟೇರ್ ವರೆಗೆ ಪರಿಹಾರ,  ಭೂಮಿ ಕಳಕೊಂಡವರಿಗೆ ಹೆಕ್ಟೇರ್ ಗೆ  37500 ರಂತೆ 2 ಹೆಕ್ಟೇರ್ ವರೆಗೆ ಪರಿಹಾರ ಧನ ನೀಡಲಾಗಿದೆ. ಇಂದಿನವರೆಗೆ 35 ಕೋಟಿ ರೂಪಾಯಿ ಪರಿಹಾರ ಧನ ವಿತರಣೆ ಆಗಿದೆ. 34000 ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆಯಾಗಿದೆ. ಇನ್ನು 3000 ಮಂದಿಗೆ ಅರ್ಧದಷ್ಟು ವಿತರಣೆಯಾಗಿದ್ದು ಉಳಿದ ಹಣ ರವಾನೆಯಾಗಲಿದೆ. ಪರಿಹಾರ ಸಿಗದೇ ಇರುವವರು  ಜಿಲ್ಲಾಡಳಿತವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

6,100 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಚಾಲನೆ | ದೇಶದಲ್ಲಿ ಅಭಿವೃದ್ಧಿ ಪರಿಕಲ್ಪನೆಗೆ ಹೊಸ ವೇಗ
October 21, 2024
7:26 PM
by: ದ ರೂರಲ್ ಮಿರರ್.ಕಾಂ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ
ಕೊಟ್ಟಿಗೆಯಲಿ ತುಂಬಿ ತುಳುಕುವ ಹಸು ಕರುಗಳು : ವೃದ್ಧಾಪ್ಯದಲ್ಲೂ ಮಲೆನಾಡು ಗಿಡ್ಡ ತಳಿ ಹಸು ಸಾಕುತ್ತಿರುವ ಅಜ್ಜಿ : ಬತ್ತದ ಜೀವನ ಉತ್ಸಾಹ
May 5, 2024
8:45 PM
by: The Rural Mirror ಸುದ್ದಿಜಾಲ
ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group