Advertisement
Categories: Uncategorized

ಮೊಣ್ಣಂಗೇರಿ ಪ್ರದೇಶಗಳಿಗೆ ಆಡಳಿತ ಭೇಟಿ ನೀಡಿತು….!

Share

ಸಂಪಾಜೆ :  ಜೋಡುಪಾಲ, ಮೊಣ್ಣಂಗೇರಿ ಪ್ರದೇಶದಲ್ಲಿ ಕಳೆದ ವರ್ಷ ನಡೆದ ಜಲಪ್ರಳಯದ ನಂತರ ಜನರ ಬದುಕಿನ ಸ್ಥಿತಿ ಹಾಗೂ ಅಲ್ಲಿನ ಸ್ಥಿತಿಗತಿಗಳ ಬಗ್ಗೆ “ಸುಳ್ಯನ್ಯೂಸ್.ಕಾಂ” ತಂಡ ಕಳೆದ ಒಂದು ವಾರದಿಂದ ನಿರಂತರವಾಗಿ ವರದಿ ಮಾಡಿತು. ವಾಸ್ತವ ಸ್ಥಿತಿಯನ್ನು ವಿಡಿಯೋ ಸಹಿತ ತೆರೆದಿಡುವುದು  ನಮ್ಮ ಉದ್ದೇಶವಾಗಿತ್ತು.

Advertisement
Advertisement

ಈಗಲೂ ಮೊಣ್ಣಂಗೇರಿ ಪ್ರದೇಶದಿಂದ ಜನರು ವಲಸೆ ಹೋಗುತ್ತಿದ್ದಾರೆ. ಮಳೆಗಾಲದ ಮುನ್ನ ಭಯ ಮುಕ್ತ ಬದುಕಿಗಾಗಿ ಮಾನಸಿಕವಾಗಿ ಸಿದ್ಧರಾಗುತ್ತಿದ್ದಾರೆ. ವಾಹನಗಳಲ್ಲಿ  ವಸ್ತುಗಳನ್ನು ಕೊಂಡೊಯ್ಯುತ್ತಿದ್ದಾರೆ. ಕೃಷಿ ಭೂಮಿಯನ್ನು ಹಾಗೆಯೇ ಬಿಡುತ್ತಿದ್ದಾರೆ. ಇಲಾಖೆಗಳಿಂದ ಇಲ್ಲಿನ ಮನೆಗಳಿಗೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ, ಮಳೆಗಾಲದ ಮುನ್ನ ಸ್ಥಳಾಂತರವಾಗಿ ಎಂಬ ಮುನ್ಸೂಚನೆ ನೀಡಿದ್ದಾರೆ. ಈ ಬಾರಿಯ ಮಳೆಗಾಲವೂ ಅಪಾಯವಾಗುವ ಸಾಧ್ಯತೆ ಇರುವುದರಿಂದ ಸ್ಥಳಾಂತರ ಆಗಬೇಕು ಎಂದು ಮನವೊಲಿಕೆ ಮಾಡಿದ್ದಾರೆ.

ಖಾಲಿಯಾಗಿರುವ ಮನೆ

 

ಎರಡು ದಿನಗಳ ಹಿಂದೆ ಕೊಡಗು ಜಿಲ್ಲಾಡಳಿತವೇ  ಖುದ್ದಾಗಿ ವೀಕ್ಷಣೆ ಮಾಡಿದೆ. ಜಿಲ್ಲಾಧಿಕಾರಿಗಳ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಪರಿಹಾರ ಧನ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

 

 

 

 

35 ಕೋಟಿ ಪರಿಹಾರ ವಿತರಣೆ – ಸ್ಪಷ್ಟನೆ :

ಮಳೆಹಾನಿ, ಬೆಳೆಹಾನಿ ಹಾಗೂ ಭೂಕುಸಿತದಿಂದ ಹಾನಿಗೊಳಗಾದವರಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದ ಕೊಡಗು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಕಾಫಿ ಹಾಗೂ ಸಾಂಬಾರ ಬೆಳೆಗಳ ಹಾನಿಗೆ ಹೆಕ್ಟೇರ್ ಗೆ 18 ಸಾವಿರದಂತೆ 2 ಹೆಕ್ಟೇರ್ ವರೆಗೆ ಪರಿಹಾರ , ಕೃಷಿ ಭೂಮಿಗೆ 12 ಸಾವಿರದಂತೆ 2 ಹೆಕ್ಟೇರ್ ವರೆಗೆ ಪರಿಹಾರ,  ಭೂಮಿ ಕಳಕೊಂಡವರಿಗೆ ಹೆಕ್ಟೇರ್ ಗೆ  37500 ರಂತೆ 2 ಹೆಕ್ಟೇರ್ ವರೆಗೆ ಪರಿಹಾರ ಧನ ನೀಡಲಾಗಿದೆ. ಇಂದಿನವರೆಗೆ 35 ಕೋಟಿ ರೂಪಾಯಿ ಪರಿಹಾರ ಧನ ವಿತರಣೆ ಆಗಿದೆ. 34000 ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆಯಾಗಿದೆ. ಇನ್ನು 3000 ಮಂದಿಗೆ ಅರ್ಧದಷ್ಟು ವಿತರಣೆಯಾಗಿದ್ದು ಉಳಿದ ಹಣ ರವಾನೆಯಾಗಲಿದೆ. ಪರಿಹಾರ ಸಿಗದೇ ಇರುವವರು  ಜಿಲ್ಲಾಡಳಿತವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

35 minutes ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

46 minutes ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

54 minutes ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

1 hour ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

1 hour ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

1 hour ago