Advertisement
Categories: Uncategorized

ಮೊಣ್ಣಂಗೇರಿ ಪ್ರದೇಶಗಳಿಗೆ ಆಡಳಿತ ಭೇಟಿ ನೀಡಿತು….!

Share

ಸಂಪಾಜೆ :  ಜೋಡುಪಾಲ, ಮೊಣ್ಣಂಗೇರಿ ಪ್ರದೇಶದಲ್ಲಿ ಕಳೆದ ವರ್ಷ ನಡೆದ ಜಲಪ್ರಳಯದ ನಂತರ ಜನರ ಬದುಕಿನ ಸ್ಥಿತಿ ಹಾಗೂ ಅಲ್ಲಿನ ಸ್ಥಿತಿಗತಿಗಳ ಬಗ್ಗೆ “ಸುಳ್ಯನ್ಯೂಸ್.ಕಾಂ” ತಂಡ ಕಳೆದ ಒಂದು ವಾರದಿಂದ ನಿರಂತರವಾಗಿ ವರದಿ ಮಾಡಿತು. ವಾಸ್ತವ ಸ್ಥಿತಿಯನ್ನು ವಿಡಿಯೋ ಸಹಿತ ತೆರೆದಿಡುವುದು  ನಮ್ಮ ಉದ್ದೇಶವಾಗಿತ್ತು.

ಈಗಲೂ ಮೊಣ್ಣಂಗೇರಿ ಪ್ರದೇಶದಿಂದ ಜನರು ವಲಸೆ ಹೋಗುತ್ತಿದ್ದಾರೆ. ಮಳೆಗಾಲದ ಮುನ್ನ ಭಯ ಮುಕ್ತ ಬದುಕಿಗಾಗಿ ಮಾನಸಿಕವಾಗಿ ಸಿದ್ಧರಾಗುತ್ತಿದ್ದಾರೆ. ವಾಹನಗಳಲ್ಲಿ  ವಸ್ತುಗಳನ್ನು ಕೊಂಡೊಯ್ಯುತ್ತಿದ್ದಾರೆ. ಕೃಷಿ ಭೂಮಿಯನ್ನು ಹಾಗೆಯೇ ಬಿಡುತ್ತಿದ್ದಾರೆ. ಇಲಾಖೆಗಳಿಂದ ಇಲ್ಲಿನ ಮನೆಗಳಿಗೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ, ಮಳೆಗಾಲದ ಮುನ್ನ ಸ್ಥಳಾಂತರವಾಗಿ ಎಂಬ ಮುನ್ಸೂಚನೆ ನೀಡಿದ್ದಾರೆ. ಈ ಬಾರಿಯ ಮಳೆಗಾಲವೂ ಅಪಾಯವಾಗುವ ಸಾಧ್ಯತೆ ಇರುವುದರಿಂದ ಸ್ಥಳಾಂತರ ಆಗಬೇಕು ಎಂದು ಮನವೊಲಿಕೆ ಮಾಡಿದ್ದಾರೆ.

ಖಾಲಿಯಾಗಿರುವ ಮನೆ

 

ಎರಡು ದಿನಗಳ ಹಿಂದೆ ಕೊಡಗು ಜಿಲ್ಲಾಡಳಿತವೇ  ಖುದ್ದಾಗಿ ವೀಕ್ಷಣೆ ಮಾಡಿದೆ. ಜಿಲ್ಲಾಧಿಕಾರಿಗಳ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಪರಿಹಾರ ಧನ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

 

 

 

 

35 ಕೋಟಿ ಪರಿಹಾರ ವಿತರಣೆ – ಸ್ಪಷ್ಟನೆ :

ಮಳೆಹಾನಿ, ಬೆಳೆಹಾನಿ ಹಾಗೂ ಭೂಕುಸಿತದಿಂದ ಹಾನಿಗೊಳಗಾದವರಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದ ಕೊಡಗು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಕಾಫಿ ಹಾಗೂ ಸಾಂಬಾರ ಬೆಳೆಗಳ ಹಾನಿಗೆ ಹೆಕ್ಟೇರ್ ಗೆ 18 ಸಾವಿರದಂತೆ 2 ಹೆಕ್ಟೇರ್ ವರೆಗೆ ಪರಿಹಾರ , ಕೃಷಿ ಭೂಮಿಗೆ 12 ಸಾವಿರದಂತೆ 2 ಹೆಕ್ಟೇರ್ ವರೆಗೆ ಪರಿಹಾರ,  ಭೂಮಿ ಕಳಕೊಂಡವರಿಗೆ ಹೆಕ್ಟೇರ್ ಗೆ  37500 ರಂತೆ 2 ಹೆಕ್ಟೇರ್ ವರೆಗೆ ಪರಿಹಾರ ಧನ ನೀಡಲಾಗಿದೆ. ಇಂದಿನವರೆಗೆ 35 ಕೋಟಿ ರೂಪಾಯಿ ಪರಿಹಾರ ಧನ ವಿತರಣೆ ಆಗಿದೆ. 34000 ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆಯಾಗಿದೆ. ಇನ್ನು 3000 ಮಂದಿಗೆ ಅರ್ಧದಷ್ಟು ವಿತರಣೆಯಾಗಿದ್ದು ಉಳಿದ ಹಣ ರವಾನೆಯಾಗಲಿದೆ. ಪರಿಹಾರ ಸಿಗದೇ ಇರುವವರು  ಜಿಲ್ಲಾಡಳಿತವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

16 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

16 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago