Advertisement
Categories: Uncategorized

ಮೊಣ್ಣಂಗೇರಿ ಪ್ರದೇಶಗಳಿಗೆ ಆಡಳಿತ ಭೇಟಿ ನೀಡಿತು….!

Share

ಸಂಪಾಜೆ :  ಜೋಡುಪಾಲ, ಮೊಣ್ಣಂಗೇರಿ ಪ್ರದೇಶದಲ್ಲಿ ಕಳೆದ ವರ್ಷ ನಡೆದ ಜಲಪ್ರಳಯದ ನಂತರ ಜನರ ಬದುಕಿನ ಸ್ಥಿತಿ ಹಾಗೂ ಅಲ್ಲಿನ ಸ್ಥಿತಿಗತಿಗಳ ಬಗ್ಗೆ “ಸುಳ್ಯನ್ಯೂಸ್.ಕಾಂ” ತಂಡ ಕಳೆದ ಒಂದು ವಾರದಿಂದ ನಿರಂತರವಾಗಿ ವರದಿ ಮಾಡಿತು. ವಾಸ್ತವ ಸ್ಥಿತಿಯನ್ನು ವಿಡಿಯೋ ಸಹಿತ ತೆರೆದಿಡುವುದು  ನಮ್ಮ ಉದ್ದೇಶವಾಗಿತ್ತು.

ಈಗಲೂ ಮೊಣ್ಣಂಗೇರಿ ಪ್ರದೇಶದಿಂದ ಜನರು ವಲಸೆ ಹೋಗುತ್ತಿದ್ದಾರೆ. ಮಳೆಗಾಲದ ಮುನ್ನ ಭಯ ಮುಕ್ತ ಬದುಕಿಗಾಗಿ ಮಾನಸಿಕವಾಗಿ ಸಿದ್ಧರಾಗುತ್ತಿದ್ದಾರೆ. ವಾಹನಗಳಲ್ಲಿ  ವಸ್ತುಗಳನ್ನು ಕೊಂಡೊಯ್ಯುತ್ತಿದ್ದಾರೆ. ಕೃಷಿ ಭೂಮಿಯನ್ನು ಹಾಗೆಯೇ ಬಿಡುತ್ತಿದ್ದಾರೆ. ಇಲಾಖೆಗಳಿಂದ ಇಲ್ಲಿನ ಮನೆಗಳಿಗೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ, ಮಳೆಗಾಲದ ಮುನ್ನ ಸ್ಥಳಾಂತರವಾಗಿ ಎಂಬ ಮುನ್ಸೂಚನೆ ನೀಡಿದ್ದಾರೆ. ಈ ಬಾರಿಯ ಮಳೆಗಾಲವೂ ಅಪಾಯವಾಗುವ ಸಾಧ್ಯತೆ ಇರುವುದರಿಂದ ಸ್ಥಳಾಂತರ ಆಗಬೇಕು ಎಂದು ಮನವೊಲಿಕೆ ಮಾಡಿದ್ದಾರೆ.

ಖಾಲಿಯಾಗಿರುವ ಮನೆ

 

ಎರಡು ದಿನಗಳ ಹಿಂದೆ ಕೊಡಗು ಜಿಲ್ಲಾಡಳಿತವೇ  ಖುದ್ದಾಗಿ ವೀಕ್ಷಣೆ ಮಾಡಿದೆ. ಜಿಲ್ಲಾಧಿಕಾರಿಗಳ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಪರಿಹಾರ ಧನ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

 

 

 

 

35 ಕೋಟಿ ಪರಿಹಾರ ವಿತರಣೆ – ಸ್ಪಷ್ಟನೆ :

ಮಳೆಹಾನಿ, ಬೆಳೆಹಾನಿ ಹಾಗೂ ಭೂಕುಸಿತದಿಂದ ಹಾನಿಗೊಳಗಾದವರಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದ ಕೊಡಗು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಕಾಫಿ ಹಾಗೂ ಸಾಂಬಾರ ಬೆಳೆಗಳ ಹಾನಿಗೆ ಹೆಕ್ಟೇರ್ ಗೆ 18 ಸಾವಿರದಂತೆ 2 ಹೆಕ್ಟೇರ್ ವರೆಗೆ ಪರಿಹಾರ , ಕೃಷಿ ಭೂಮಿಗೆ 12 ಸಾವಿರದಂತೆ 2 ಹೆಕ್ಟೇರ್ ವರೆಗೆ ಪರಿಹಾರ,  ಭೂಮಿ ಕಳಕೊಂಡವರಿಗೆ ಹೆಕ್ಟೇರ್ ಗೆ  37500 ರಂತೆ 2 ಹೆಕ್ಟೇರ್ ವರೆಗೆ ಪರಿಹಾರ ಧನ ನೀಡಲಾಗಿದೆ. ಇಂದಿನವರೆಗೆ 35 ಕೋಟಿ ರೂಪಾಯಿ ಪರಿಹಾರ ಧನ ವಿತರಣೆ ಆಗಿದೆ. 34000 ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆಯಾಗಿದೆ. ಇನ್ನು 3000 ಮಂದಿಗೆ ಅರ್ಧದಷ್ಟು ವಿತರಣೆಯಾಗಿದ್ದು ಉಳಿದ ಹಣ ರವಾನೆಯಾಗಲಿದೆ. ಪರಿಹಾರ ಸಿಗದೇ ಇರುವವರು  ಜಿಲ್ಲಾಡಳಿತವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

36 minutes ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

43 minutes ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

51 minutes ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

58 minutes ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

11 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

12 hours ago