Advertisement
Categories: Uncategorized

ಮೊಣ್ಣಂಗೇರಿ ಪ್ರದೇಶಗಳಿಗೆ ಆಡಳಿತ ಭೇಟಿ ನೀಡಿತು….!

Share

ಸಂಪಾಜೆ :  ಜೋಡುಪಾಲ, ಮೊಣ್ಣಂಗೇರಿ ಪ್ರದೇಶದಲ್ಲಿ ಕಳೆದ ವರ್ಷ ನಡೆದ ಜಲಪ್ರಳಯದ ನಂತರ ಜನರ ಬದುಕಿನ ಸ್ಥಿತಿ ಹಾಗೂ ಅಲ್ಲಿನ ಸ್ಥಿತಿಗತಿಗಳ ಬಗ್ಗೆ “ಸುಳ್ಯನ್ಯೂಸ್.ಕಾಂ” ತಂಡ ಕಳೆದ ಒಂದು ವಾರದಿಂದ ನಿರಂತರವಾಗಿ ವರದಿ ಮಾಡಿತು. ವಾಸ್ತವ ಸ್ಥಿತಿಯನ್ನು ವಿಡಿಯೋ ಸಹಿತ ತೆರೆದಿಡುವುದು  ನಮ್ಮ ಉದ್ದೇಶವಾಗಿತ್ತು.

ಈಗಲೂ ಮೊಣ್ಣಂಗೇರಿ ಪ್ರದೇಶದಿಂದ ಜನರು ವಲಸೆ ಹೋಗುತ್ತಿದ್ದಾರೆ. ಮಳೆಗಾಲದ ಮುನ್ನ ಭಯ ಮುಕ್ತ ಬದುಕಿಗಾಗಿ ಮಾನಸಿಕವಾಗಿ ಸಿದ್ಧರಾಗುತ್ತಿದ್ದಾರೆ. ವಾಹನಗಳಲ್ಲಿ  ವಸ್ತುಗಳನ್ನು ಕೊಂಡೊಯ್ಯುತ್ತಿದ್ದಾರೆ. ಕೃಷಿ ಭೂಮಿಯನ್ನು ಹಾಗೆಯೇ ಬಿಡುತ್ತಿದ್ದಾರೆ. ಇಲಾಖೆಗಳಿಂದ ಇಲ್ಲಿನ ಮನೆಗಳಿಗೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ, ಮಳೆಗಾಲದ ಮುನ್ನ ಸ್ಥಳಾಂತರವಾಗಿ ಎಂಬ ಮುನ್ಸೂಚನೆ ನೀಡಿದ್ದಾರೆ. ಈ ಬಾರಿಯ ಮಳೆಗಾಲವೂ ಅಪಾಯವಾಗುವ ಸಾಧ್ಯತೆ ಇರುವುದರಿಂದ ಸ್ಥಳಾಂತರ ಆಗಬೇಕು ಎಂದು ಮನವೊಲಿಕೆ ಮಾಡಿದ್ದಾರೆ.

ಖಾಲಿಯಾಗಿರುವ ಮನೆ

 

ಎರಡು ದಿನಗಳ ಹಿಂದೆ ಕೊಡಗು ಜಿಲ್ಲಾಡಳಿತವೇ  ಖುದ್ದಾಗಿ ವೀಕ್ಷಣೆ ಮಾಡಿದೆ. ಜಿಲ್ಲಾಧಿಕಾರಿಗಳ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಪರಿಹಾರ ಧನ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

 

 

 

 

35 ಕೋಟಿ ಪರಿಹಾರ ವಿತರಣೆ – ಸ್ಪಷ್ಟನೆ :

ಮಳೆಹಾನಿ, ಬೆಳೆಹಾನಿ ಹಾಗೂ ಭೂಕುಸಿತದಿಂದ ಹಾನಿಗೊಳಗಾದವರಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದ ಕೊಡಗು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಕಾಫಿ ಹಾಗೂ ಸಾಂಬಾರ ಬೆಳೆಗಳ ಹಾನಿಗೆ ಹೆಕ್ಟೇರ್ ಗೆ 18 ಸಾವಿರದಂತೆ 2 ಹೆಕ್ಟೇರ್ ವರೆಗೆ ಪರಿಹಾರ , ಕೃಷಿ ಭೂಮಿಗೆ 12 ಸಾವಿರದಂತೆ 2 ಹೆಕ್ಟೇರ್ ವರೆಗೆ ಪರಿಹಾರ,  ಭೂಮಿ ಕಳಕೊಂಡವರಿಗೆ ಹೆಕ್ಟೇರ್ ಗೆ  37500 ರಂತೆ 2 ಹೆಕ್ಟೇರ್ ವರೆಗೆ ಪರಿಹಾರ ಧನ ನೀಡಲಾಗಿದೆ. ಇಂದಿನವರೆಗೆ 35 ಕೋಟಿ ರೂಪಾಯಿ ಪರಿಹಾರ ಧನ ವಿತರಣೆ ಆಗಿದೆ. 34000 ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆಯಾಗಿದೆ. ಇನ್ನು 3000 ಮಂದಿಗೆ ಅರ್ಧದಷ್ಟು ವಿತರಣೆಯಾಗಿದ್ದು ಉಳಿದ ಹಣ ರವಾನೆಯಾಗಲಿದೆ. ಪರಿಹಾರ ಸಿಗದೇ ಇರುವವರು  ಜಿಲ್ಲಾಡಳಿತವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

3 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

4 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

16 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

17 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

17 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

23 hours ago