Advertisement
Categories: Uncategorized

ಮೊಣ್ಣಂಗೇರಿ ಪ್ರದೇಶಗಳಿಗೆ ಆಡಳಿತ ಭೇಟಿ ನೀಡಿತು….!

Share

ಸಂಪಾಜೆ :  ಜೋಡುಪಾಲ, ಮೊಣ್ಣಂಗೇರಿ ಪ್ರದೇಶದಲ್ಲಿ ಕಳೆದ ವರ್ಷ ನಡೆದ ಜಲಪ್ರಳಯದ ನಂತರ ಜನರ ಬದುಕಿನ ಸ್ಥಿತಿ ಹಾಗೂ ಅಲ್ಲಿನ ಸ್ಥಿತಿಗತಿಗಳ ಬಗ್ಗೆ “ಸುಳ್ಯನ್ಯೂಸ್.ಕಾಂ” ತಂಡ ಕಳೆದ ಒಂದು ವಾರದಿಂದ ನಿರಂತರವಾಗಿ ವರದಿ ಮಾಡಿತು. ವಾಸ್ತವ ಸ್ಥಿತಿಯನ್ನು ವಿಡಿಯೋ ಸಹಿತ ತೆರೆದಿಡುವುದು  ನಮ್ಮ ಉದ್ದೇಶವಾಗಿತ್ತು.

Advertisement
Advertisement

ಈಗಲೂ ಮೊಣ್ಣಂಗೇರಿ ಪ್ರದೇಶದಿಂದ ಜನರು ವಲಸೆ ಹೋಗುತ್ತಿದ್ದಾರೆ. ಮಳೆಗಾಲದ ಮುನ್ನ ಭಯ ಮುಕ್ತ ಬದುಕಿಗಾಗಿ ಮಾನಸಿಕವಾಗಿ ಸಿದ್ಧರಾಗುತ್ತಿದ್ದಾರೆ. ವಾಹನಗಳಲ್ಲಿ  ವಸ್ತುಗಳನ್ನು ಕೊಂಡೊಯ್ಯುತ್ತಿದ್ದಾರೆ. ಕೃಷಿ ಭೂಮಿಯನ್ನು ಹಾಗೆಯೇ ಬಿಡುತ್ತಿದ್ದಾರೆ. ಇಲಾಖೆಗಳಿಂದ ಇಲ್ಲಿನ ಮನೆಗಳಿಗೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ, ಮಳೆಗಾಲದ ಮುನ್ನ ಸ್ಥಳಾಂತರವಾಗಿ ಎಂಬ ಮುನ್ಸೂಚನೆ ನೀಡಿದ್ದಾರೆ. ಈ ಬಾರಿಯ ಮಳೆಗಾಲವೂ ಅಪಾಯವಾಗುವ ಸಾಧ್ಯತೆ ಇರುವುದರಿಂದ ಸ್ಥಳಾಂತರ ಆಗಬೇಕು ಎಂದು ಮನವೊಲಿಕೆ ಮಾಡಿದ್ದಾರೆ.

Advertisement
ಖಾಲಿಯಾಗಿರುವ ಮನೆ

 

ಎರಡು ದಿನಗಳ ಹಿಂದೆ ಕೊಡಗು ಜಿಲ್ಲಾಡಳಿತವೇ  ಖುದ್ದಾಗಿ ವೀಕ್ಷಣೆ ಮಾಡಿದೆ. ಜಿಲ್ಲಾಧಿಕಾರಿಗಳ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಪರಿಹಾರ ಧನ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

Advertisement

 

Advertisement

 

Advertisement

 

Advertisement

 

35 ಕೋಟಿ ಪರಿಹಾರ ವಿತರಣೆ – ಸ್ಪಷ್ಟನೆ :

Advertisement

ಮಳೆಹಾನಿ, ಬೆಳೆಹಾನಿ ಹಾಗೂ ಭೂಕುಸಿತದಿಂದ ಹಾನಿಗೊಳಗಾದವರಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದ ಕೊಡಗು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಕಾಫಿ ಹಾಗೂ ಸಾಂಬಾರ ಬೆಳೆಗಳ ಹಾನಿಗೆ ಹೆಕ್ಟೇರ್ ಗೆ 18 ಸಾವಿರದಂತೆ 2 ಹೆಕ್ಟೇರ್ ವರೆಗೆ ಪರಿಹಾರ , ಕೃಷಿ ಭೂಮಿಗೆ 12 ಸಾವಿರದಂತೆ 2 ಹೆಕ್ಟೇರ್ ವರೆಗೆ ಪರಿಹಾರ,  ಭೂಮಿ ಕಳಕೊಂಡವರಿಗೆ ಹೆಕ್ಟೇರ್ ಗೆ  37500 ರಂತೆ 2 ಹೆಕ್ಟೇರ್ ವರೆಗೆ ಪರಿಹಾರ ಧನ ನೀಡಲಾಗಿದೆ. ಇಂದಿನವರೆಗೆ 35 ಕೋಟಿ ರೂಪಾಯಿ ಪರಿಹಾರ ಧನ ವಿತರಣೆ ಆಗಿದೆ. 34000 ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆಯಾಗಿದೆ. ಇನ್ನು 3000 ಮಂದಿಗೆ ಅರ್ಧದಷ್ಟು ವಿತರಣೆಯಾಗಿದ್ದು ಉಳಿದ ಹಣ ರವಾನೆಯಾಗಲಿದೆ. ಪರಿಹಾರ ಸಿಗದೇ ಇರುವವರು  ಜಿಲ್ಲಾಡಳಿತವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

3 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago