Advertisement
MIRROR FOCUS

ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮ ದಿನ ಇಂದು : ಈ ದಿನ “ಇಂಜಿನಿಯರ್ ದಿನ”

Share

ಸೆ.15 ರಂದು ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮ ದಿನ. ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಅಪಾರ ಸೇವೆಯ ನೆನಪಿಗಾಗಿ ಇವರ ಜನ್ಮ ದಿನವನ್ನು ಇಂಜಿನಿಯರ್ ದಿನವಾಗಿ ಆಚರಿಸಲಾಗುತ್ತದೆ. ಇಂಜಿನಿಯರ್ ಎಂದರೆ  ‘ವಿಶ್ವೇಶ್ವರಯ್ಯನವರ ಹಾಗೆ ಇರಬೇಕು’ ಎಂದು ಪ್ರಪಂಚವೇ ಕೊಂಡಾಡಿದ ಭಾರತದ ಅದ್ವಿತೀಯ ಮೇಧಾವಿ ‘ಭಾರತರತ್ನ  ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ’ನವರು. ಇವರು ನಮ್ಮವರು. ನಮ್ಮ ಇಂಜಿನಿಯರ್ ಗಳಿಗೆ ಪ್ರೇರಣೆ. ಹೀಗಾಗಿಯೇ ರಸ್ತೆಯಿಂದ ತೊಡಗಿ ಸೇತುವೆಯವರೆಗೆ ಅವಿರತ ಶ್ರಮದಿಂದ ಸಾಧನೆ ಮಾಡಿದವರು ಇದ್ದಾರೆ. ಈ ಸಾಧನೆಯ ನೆನಪು  ನಮಗೂ ಪ್ರೇರಣೆಯಾಗಲಿ…

Advertisement
Advertisement

ಸೆ.15ರಂದು ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮ ದಿನ. ಅವರ ಜನ್ಮದಿನ 15 ಸೆಪ್ಟೆಂಬರ್ 1860.  ತಮ್ಮ ಬಾಲ್ಯದಲ್ಲಿ ಈಗಿನ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿದ್ದರು. ದೇಶದ ವಿವಿದೆಡೆ ಮತ್ತು ಮೈಸೂರು ಸಂಸ್ಥಾನದ ದಿವಾನರಾಗಿದ್ದ ಕಾಲದಲ್ಲಿ ಕರ್ನಾಟಕಕ್ಕೆ ಸರ್. ಎಮ್. ವಿ ಕೊಡುಗೆ ಅಪಾರವಾಗಿತ್ತು. ಅವರ ಶಿಸ್ತಿನ ಜೀವನ, ಸಮಯ ಪರಿಪಾಲನೆ, ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಇವೆಲ್ಲಾ ಪ್ರಶ್ನಾತೀತ.  ಇದೆಲ್ಲಾ ಇಂದು ಎಲ್ಲರಿಗೂ ಮಾದರಿಯೂ ಹೌದು.

ಎಳವೆಯಲ್ಲಿಯೇ ತಮ್ಮ ತಂದೆಯನ್ನು ಕಳೆದುಕೊಂಡ ಬಾಲಕ ವಿಶ್ವೇಶ್ವರಯ್ಯ ಅವರು ಕಡು ಬಡತನದ ನಡುವೆ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿ ಮುಂಬೈ ರಾಜ್ಯದ ಪೂನಾದಲ್ಲಿ 1884 ರಲ್ಲಿ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂಬೈ ಸರಕಾರದಲ್ಲಿ ಸೇವೆಯನ್ನು ಆರಂಭಿಸಿದರು. ವಿಶ್ವೇಶ್ವರಯ್ಯ ಅವರಿಗೆ ಅಂದಿನ ಸರಕಾರವು  ಪೂನಾ, ನಾಸಿಕ್, ಹೈದರಾಬಾದ್ ಮೊದಲಾದ ಕಡೆ ಪ್ರಮುಖ ನೀರಾವರಿ  ಯೋಜನೆಗಳ ಉಸ್ತುವಾರಿಯನ್ನು ವಹಿಸಿತು.

ಮೈಸೂರು ಸಂಸ್ಥಾನದ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಇವರು ವಿಶ್ವೇಶ್ವರಯ್ಯನವರ ಖ್ಯಾತಿಯನ್ನು ಮನಗಂಡು ಅವರ ಸೇವೆಯನ್ನು ಮೈಸೂರಿಗೆ ಬಳಸಿಕೊಳ್ಳಲು ಇಚ್ಛಿಸಿದಾಗ ವಿಶ್ವೇಶ್ವರಯ್ಯನವರು, ಮೈಸೂರು ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಮತ್ತು ರಾಜ್ಯದ ಸರ್ವಾಂಗೀಣ ಪ್ರಗತಿಗಾಗಿ ನನ್ನ ಸೇವೆ ಮೀಸಲಿರುವುದಾಗಿ ತಿಳಿಸಿ, ಇದಕ್ಕೆ ಒಪ್ಪುವುದಾದರೆ ನನ್ನ ಸೇವೆ ಮೈಸೂರು ರಾಜ್ಯಕ್ಕೆ ಲಭ್ಯವೆಂದು ತಿಳಿಸಿದರು.ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಹ ಸಂಸ್ಥಾನದ ಅಭಿವೃದ್ಧಿ ಕುರಿತು ದೂರದೃಷ್ಟಿ ಹೊಂದಿದ್ದರಿಂದ ವಿಶ್ವೇಶ್ವರಯ್ಯನವರ ಬೇಡಿಕೆಗೆ ಒಪ್ಪಿದರು. ವಿಶ್ವೇಶ್ವರಯ್ಯನವರು 1909ರಲ್ಲಿ ಮೈಸೂರು ಸಂಸ್ಥಾನದ ಮುಖ್ಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರೂ, ಇವರು ತಮ್ಮ ವ್ಯಾಪ್ತಿಯನ್ನು ಮುಖ್ಯ ಇಂಜಿನಿಯರ್ ಹುದ್ದೆಗೆ ಸೀಮಿತಗೊಳಿಸದೇ ಮೈಸೂರು ಸಂಸ್ಥಾನದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ರೂಪಿಸುವಲ್ಲಿ ಕಾರಣೀಭೂತರಾದರು.ತಮ್ಮ ಅಪಾರವಾದ ತಂತ್ರಜ್ಞಾನ, ಪ್ರಾಮಾಣಿಕತೆ ಹಾಗೂ ನಿಸ್ವಾರ್ಥ ಕಾರ್ಯತತ್ಪರತೆಯಿಂದಾಗಿ, 1924 ರಲ್ಲಿ  ಅಂದಿನ ಮೈಸೂರು ಸಂಸ್ಥಾನದ ದಿವಾನ್  ಆಗಿ ನಿಯೋಜಿತರಾದರು. ನೀರಾವರಿ ಯೋಜನೆಗಳಲ್ಲಿ  ಸರ್. ಎಂ.ವಿ ಅವರು ಅವಿಷ್ಕರಿಸಿದ  ‘ಜಲಾಶಯಗಳಿಗೆ ಸ್ವಯಂ ಚಾಲಿತ ಗೇಟ್ ಗಳನ್ನು ಅಳವಡಿಸುವ ಪದ್ಧತಿ‘ಯು ವಿಶ್ವಮಾನ್ಯಗೊಂಡು ಅವರಿಗೆ ಈ ಸಾಧನೆಗಾಗಿ   ಪೇಟೆಂಟ್ ಲಭಿಸಿತು. ಪ್ರಸಿದ್ಧ ಕೃಷ್ಣರಾಜಸಾಗರ ಅಣೆಕಟ್ಟಿನ ವಾಸ್ತುಶಿಲ್ಪಿ ಸರ್. ಎಂ.ವಿ.   ಮೈಸೂರಿನ ದಿವಾನರಾಗಿದ್ದ ಕಾಲಾವಧಿಯಲ್ಲಿ.

ತಮ್ಮ ಸಾಧನೆಗಾಗಿ ಬ್ರಿಟಿಷ್ ಸರಕಾರವು ಕೊಡುವ ‘ನೈಟ್ ಹುಡ್ ‘ ಪದವಿಯನ್ನು 1915 ರಲ್ಲಿಯೂ , ಭಾರತ ಸರಕಾರದ ಅತ್ಯುನ್ನತ ಪದವಿಯಾದ ‘ಭಾರತ ರತ್ನ’ವನ್ನು 1955 ರಲ್ಲಿಯೂ ಪಡೆದುಕೊಂಡರು.  ಈಗ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಸರ್. ಎಂ.ವಿ ಅವರು ವಾಸವಿದ್ದ ಮನೆಯು ನವೀಕರಣಗೊಂಡು  ಮ್ಯೂಸಿಯಂ ಆಗಿದೆ. ಅದೇ ಆವರಣದಲ್ಲಿ ಅವರು ಹಿಂದೆ ವಾಸಿಸುತ್ತಿದ್ದ ಹೆಂಚಿನ ಮನೆ ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

10 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

10 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago