Advertisement
ಸುದ್ದಿಗಳು

ಮೋಟಾರು ವಾಹನ ಕಾಯಿದೆ ಮಸೂದೆ ಹಣ ವಸೂಲಿ ತಂತ್ರ – ವೆಂಕಪ್ಪ ಗೌಡ ಆರೋಪ

Share

ಸುಳ್ಯ: ಕೇಂದ್ರ ಸರಕಾರದ ಮೋಟಾರು ವಾಹನ ತಿದ್ದುಪಡಿ ಮಸೂದೆಯು ಹಣ ವಸೂಲಾತಿಗಿರುವ ಸರಕಾರದ ಹೊಸ ತಂತ್ರ‌. ಮಸೂದೆಯಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನ ಇಲ್ಲ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇತರ ಉದ್ಯಮಗಳಂತೆ ಮೋಟಾರು ಉದ್ಯಮಕ್ಕೂ ಮುಂದೆ ಸಂಕಷ್ಟದ ದಿನಗಳು ಬರಲಿವೆ. ಬಿ.ಎಸ್.ಎನ್.ಎಲ್, ವಿಮಾನಯಾನ ಎಲ್ಲವೂ ಸಂಕಷ್ಟದಲ್ಲಿದೆ. ಕೇಂದ್ರ ಸರಕಾರದ ಹೊಸ ಕಾಯಿದೆಯಿಂದ ವಾಹನ ಉದ್ಯಮಕ್ಕೂ ಸಮಸ್ಯೆ ಎದುರಾಗಲಿದೆ. 5 ವರ್ಷ ಮೋದಿಯ ಆಳ್ವಿಕೆಯಲ್ಲಿ ದೇಶ 15  ವರ್ಷ ಹಿಂದಕ್ಕೆ ಹೋಗಿದೆ. ಇನ್ನೂ 5 ವರ್ಷ ಕಳೆದರೆ 30 ವರ್ಷದಷ್ಟು ಹಿಂದಕ್ಕೆ ಹೋಗುತ್ತದೆ ಎಂದು ಹೇಳಿದರು.

Advertisement

ಸಿದ್ದಾರ್ಥ ಸಾವಿಗೆ ದೇಶದ ಆರ್ಥಿಕ ಸಂಕಷ್ಟ ಕಾರಣ:

ಕೆಫೆ ಕಾಫಿಡೇ ಮಾಲಕ ಸಿದ್ದಾರ್ಥ ಸಾವಿಗೆ ದೇಶದ ಆಡಳಿತ ಉಂಟುಮಾಡಿರುವ ಆರ್ಥಿಕ ಸಂಕಷ್ಟವೇ ಕಾರಣ ಎಂದು ವೆಂಕಪ್ಪ ಗೌಡ ಆರೋಪಿಸಿದ್ದಾರೆ. ಸಿದ್ದಾರ್ಥ ಸಾವು ಅತ್ಯಂತ ನೋವಿನ ಸಂಗತಿ. ಆದರೆ ರಾಜಕೀಯ ಮತ್ತು ವ್ಯವಹಾರ ವಲಯವನ್ನು ವಿಶ್ಲೇಷಿಸಿದರೆ ಈ ದೇಶ ಇಂದು ಎದುರಿಸುತ್ತಿರುವ ಆರ್ಥಿಕ ಪರಿಸ್ಥಿತಿಯೇ ಇದಕ್ಕೆ ಕಾರಣ ಎಂದು ತಿಳಿದು ಬರುತ್ತದೆ. ಹಲವು ಉದ್ಯಮಿಗಳು ದೇಶ ಬಿಟ್ಟು ಪರಾರಿಯಾಗಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ಹಲವು ಕಂಪೆನಿಗಳಲ್ಲಿನ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಇದಕ್ಕೆಲ್ಲಾ ಕಾರಣ ಆಡಳಿತ ತಂದಿಟ್ಟ ಆರ್ಥಿಕ ಸಂಕಷ್ಟ. ಸಿದ್ದಾರ್ಥರಂತವರು ಪ್ರಾಣವನ್ನೇ ಕಳೆದುಕೊಳ್ಳಬೇಕಾಗಿ ಬಂತು ಎಂದು ಹೇಳಿದರು.

Advertisement

ಸಿದ್ದಾರ್ಥ ಸಾವಿನಿಂದ ಇಡೀ ಕಾಫಿ ಉದ್ಯಮ ಮತ್ತು ಕಾಫಿ ಬೆಳೆಗಾರರಿಗೆ ನಷ್ಟವಾಗಿದೆ. ಕಾಫಿ ಬೆಳೆಗಾರರ ರಕ್ಷಣೆಗೆ ವಿಶೇಷ ಯೋಜನೆಯನ್ನು ಕೇಂದ್ರ ಸರಕಾರ ರೂಪಿಸಬೇಕು ಎಂದು ಒತ್ತಾಯಿಸಿದರು.

ಟಿಪ್ಪು ಜಯಂತಿ ರದ್ದು ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಟಿಪ್ಪು ಒಬ್ಬ ಹೋರಾಟಗಾರ ಎನ್ನುವ ನೆಲೆಯಲ್ಲಿ ಹಿಂದಿನ ಸರಕಾರ ಈ ಜಯಂತಿಯನ್ನು ಜಾರಿಗೆ ತಂದಿತು. ಈಗಿನ ಸರಕಾರಕ್ಕೆ ಆ ಭಾವನೆ ಇಲ್ಲದ ಕಾರಣ ಅದನ್ನು ರದ್ದುಪಡಿಸಿದೆ. ಈ ವಿಚಾರದಲ್ಲಿ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

Advertisement

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಧರ್ಮಪಾಲ ಕೊಯಿಂಗಾಜೆ, ನಂದರಜ ಸಂಕೇಶ, ಲಕ್ಷ್ಮಣ ಶೆಣೈ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

23 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago