Advertisement
ಸುದ್ದಿಗಳು

ಮೋಟಾರು ವಾಹನ ಕಾಯಿದೆ ಮಸೂದೆ ಹಣ ವಸೂಲಿ ತಂತ್ರ – ವೆಂಕಪ್ಪ ಗೌಡ ಆರೋಪ

Share

ಸುಳ್ಯ: ಕೇಂದ್ರ ಸರಕಾರದ ಮೋಟಾರು ವಾಹನ ತಿದ್ದುಪಡಿ ಮಸೂದೆಯು ಹಣ ವಸೂಲಾತಿಗಿರುವ ಸರಕಾರದ ಹೊಸ ತಂತ್ರ‌. ಮಸೂದೆಯಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನ ಇಲ್ಲ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇತರ ಉದ್ಯಮಗಳಂತೆ ಮೋಟಾರು ಉದ್ಯಮಕ್ಕೂ ಮುಂದೆ ಸಂಕಷ್ಟದ ದಿನಗಳು ಬರಲಿವೆ. ಬಿ.ಎಸ್.ಎನ್.ಎಲ್, ವಿಮಾನಯಾನ ಎಲ್ಲವೂ ಸಂಕಷ್ಟದಲ್ಲಿದೆ. ಕೇಂದ್ರ ಸರಕಾರದ ಹೊಸ ಕಾಯಿದೆಯಿಂದ ವಾಹನ ಉದ್ಯಮಕ್ಕೂ ಸಮಸ್ಯೆ ಎದುರಾಗಲಿದೆ. 5 ವರ್ಷ ಮೋದಿಯ ಆಳ್ವಿಕೆಯಲ್ಲಿ ದೇಶ 15  ವರ್ಷ ಹಿಂದಕ್ಕೆ ಹೋಗಿದೆ. ಇನ್ನೂ 5 ವರ್ಷ ಕಳೆದರೆ 30 ವರ್ಷದಷ್ಟು ಹಿಂದಕ್ಕೆ ಹೋಗುತ್ತದೆ ಎಂದು ಹೇಳಿದರು.

ಸಿದ್ದಾರ್ಥ ಸಾವಿಗೆ ದೇಶದ ಆರ್ಥಿಕ ಸಂಕಷ್ಟ ಕಾರಣ:

ಕೆಫೆ ಕಾಫಿಡೇ ಮಾಲಕ ಸಿದ್ದಾರ್ಥ ಸಾವಿಗೆ ದೇಶದ ಆಡಳಿತ ಉಂಟುಮಾಡಿರುವ ಆರ್ಥಿಕ ಸಂಕಷ್ಟವೇ ಕಾರಣ ಎಂದು ವೆಂಕಪ್ಪ ಗೌಡ ಆರೋಪಿಸಿದ್ದಾರೆ. ಸಿದ್ದಾರ್ಥ ಸಾವು ಅತ್ಯಂತ ನೋವಿನ ಸಂಗತಿ. ಆದರೆ ರಾಜಕೀಯ ಮತ್ತು ವ್ಯವಹಾರ ವಲಯವನ್ನು ವಿಶ್ಲೇಷಿಸಿದರೆ ಈ ದೇಶ ಇಂದು ಎದುರಿಸುತ್ತಿರುವ ಆರ್ಥಿಕ ಪರಿಸ್ಥಿತಿಯೇ ಇದಕ್ಕೆ ಕಾರಣ ಎಂದು ತಿಳಿದು ಬರುತ್ತದೆ. ಹಲವು ಉದ್ಯಮಿಗಳು ದೇಶ ಬಿಟ್ಟು ಪರಾರಿಯಾಗಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ಹಲವು ಕಂಪೆನಿಗಳಲ್ಲಿನ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಇದಕ್ಕೆಲ್ಲಾ ಕಾರಣ ಆಡಳಿತ ತಂದಿಟ್ಟ ಆರ್ಥಿಕ ಸಂಕಷ್ಟ. ಸಿದ್ದಾರ್ಥರಂತವರು ಪ್ರಾಣವನ್ನೇ ಕಳೆದುಕೊಳ್ಳಬೇಕಾಗಿ ಬಂತು ಎಂದು ಹೇಳಿದರು.

ಸಿದ್ದಾರ್ಥ ಸಾವಿನಿಂದ ಇಡೀ ಕಾಫಿ ಉದ್ಯಮ ಮತ್ತು ಕಾಫಿ ಬೆಳೆಗಾರರಿಗೆ ನಷ್ಟವಾಗಿದೆ. ಕಾಫಿ ಬೆಳೆಗಾರರ ರಕ್ಷಣೆಗೆ ವಿಶೇಷ ಯೋಜನೆಯನ್ನು ಕೇಂದ್ರ ಸರಕಾರ ರೂಪಿಸಬೇಕು ಎಂದು ಒತ್ತಾಯಿಸಿದರು.

ಟಿಪ್ಪು ಜಯಂತಿ ರದ್ದು ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಟಿಪ್ಪು ಒಬ್ಬ ಹೋರಾಟಗಾರ ಎನ್ನುವ ನೆಲೆಯಲ್ಲಿ ಹಿಂದಿನ ಸರಕಾರ ಈ ಜಯಂತಿಯನ್ನು ಜಾರಿಗೆ ತಂದಿತು. ಈಗಿನ ಸರಕಾರಕ್ಕೆ ಆ ಭಾವನೆ ಇಲ್ಲದ ಕಾರಣ ಅದನ್ನು ರದ್ದುಪಡಿಸಿದೆ. ಈ ವಿಚಾರದಲ್ಲಿ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಧರ್ಮಪಾಲ ಕೊಯಿಂಗಾಜೆ, ನಂದರಜ ಸಂಕೇಶ, ಲಕ್ಷ್ಮಣ ಶೆಣೈ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

7 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

13 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago