Advertisement
ಸುದ್ದಿಗಳು

ಮೋಟಾರು ವಾಹನ ಕಾಯಿದೆ ಮಸೂದೆ ಹಣ ವಸೂಲಿ ತಂತ್ರ – ವೆಂಕಪ್ಪ ಗೌಡ ಆರೋಪ

Share

ಸುಳ್ಯ: ಕೇಂದ್ರ ಸರಕಾರದ ಮೋಟಾರು ವಾಹನ ತಿದ್ದುಪಡಿ ಮಸೂದೆಯು ಹಣ ವಸೂಲಾತಿಗಿರುವ ಸರಕಾರದ ಹೊಸ ತಂತ್ರ‌. ಮಸೂದೆಯಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನ ಇಲ್ಲ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇತರ ಉದ್ಯಮಗಳಂತೆ ಮೋಟಾರು ಉದ್ಯಮಕ್ಕೂ ಮುಂದೆ ಸಂಕಷ್ಟದ ದಿನಗಳು ಬರಲಿವೆ. ಬಿ.ಎಸ್.ಎನ್.ಎಲ್, ವಿಮಾನಯಾನ ಎಲ್ಲವೂ ಸಂಕಷ್ಟದಲ್ಲಿದೆ. ಕೇಂದ್ರ ಸರಕಾರದ ಹೊಸ ಕಾಯಿದೆಯಿಂದ ವಾಹನ ಉದ್ಯಮಕ್ಕೂ ಸಮಸ್ಯೆ ಎದುರಾಗಲಿದೆ. 5 ವರ್ಷ ಮೋದಿಯ ಆಳ್ವಿಕೆಯಲ್ಲಿ ದೇಶ 15  ವರ್ಷ ಹಿಂದಕ್ಕೆ ಹೋಗಿದೆ. ಇನ್ನೂ 5 ವರ್ಷ ಕಳೆದರೆ 30 ವರ್ಷದಷ್ಟು ಹಿಂದಕ್ಕೆ ಹೋಗುತ್ತದೆ ಎಂದು ಹೇಳಿದರು.

ಸಿದ್ದಾರ್ಥ ಸಾವಿಗೆ ದೇಶದ ಆರ್ಥಿಕ ಸಂಕಷ್ಟ ಕಾರಣ:

ಕೆಫೆ ಕಾಫಿಡೇ ಮಾಲಕ ಸಿದ್ದಾರ್ಥ ಸಾವಿಗೆ ದೇಶದ ಆಡಳಿತ ಉಂಟುಮಾಡಿರುವ ಆರ್ಥಿಕ ಸಂಕಷ್ಟವೇ ಕಾರಣ ಎಂದು ವೆಂಕಪ್ಪ ಗೌಡ ಆರೋಪಿಸಿದ್ದಾರೆ. ಸಿದ್ದಾರ್ಥ ಸಾವು ಅತ್ಯಂತ ನೋವಿನ ಸಂಗತಿ. ಆದರೆ ರಾಜಕೀಯ ಮತ್ತು ವ್ಯವಹಾರ ವಲಯವನ್ನು ವಿಶ್ಲೇಷಿಸಿದರೆ ಈ ದೇಶ ಇಂದು ಎದುರಿಸುತ್ತಿರುವ ಆರ್ಥಿಕ ಪರಿಸ್ಥಿತಿಯೇ ಇದಕ್ಕೆ ಕಾರಣ ಎಂದು ತಿಳಿದು ಬರುತ್ತದೆ. ಹಲವು ಉದ್ಯಮಿಗಳು ದೇಶ ಬಿಟ್ಟು ಪರಾರಿಯಾಗಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ಹಲವು ಕಂಪೆನಿಗಳಲ್ಲಿನ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಇದಕ್ಕೆಲ್ಲಾ ಕಾರಣ ಆಡಳಿತ ತಂದಿಟ್ಟ ಆರ್ಥಿಕ ಸಂಕಷ್ಟ. ಸಿದ್ದಾರ್ಥರಂತವರು ಪ್ರಾಣವನ್ನೇ ಕಳೆದುಕೊಳ್ಳಬೇಕಾಗಿ ಬಂತು ಎಂದು ಹೇಳಿದರು.

ಸಿದ್ದಾರ್ಥ ಸಾವಿನಿಂದ ಇಡೀ ಕಾಫಿ ಉದ್ಯಮ ಮತ್ತು ಕಾಫಿ ಬೆಳೆಗಾರರಿಗೆ ನಷ್ಟವಾಗಿದೆ. ಕಾಫಿ ಬೆಳೆಗಾರರ ರಕ್ಷಣೆಗೆ ವಿಶೇಷ ಯೋಜನೆಯನ್ನು ಕೇಂದ್ರ ಸರಕಾರ ರೂಪಿಸಬೇಕು ಎಂದು ಒತ್ತಾಯಿಸಿದರು.

ಟಿಪ್ಪು ಜಯಂತಿ ರದ್ದು ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಟಿಪ್ಪು ಒಬ್ಬ ಹೋರಾಟಗಾರ ಎನ್ನುವ ನೆಲೆಯಲ್ಲಿ ಹಿಂದಿನ ಸರಕಾರ ಈ ಜಯಂತಿಯನ್ನು ಜಾರಿಗೆ ತಂದಿತು. ಈಗಿನ ಸರಕಾರಕ್ಕೆ ಆ ಭಾವನೆ ಇಲ್ಲದ ಕಾರಣ ಅದನ್ನು ರದ್ದುಪಡಿಸಿದೆ. ಈ ವಿಚಾರದಲ್ಲಿ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಧರ್ಮಪಾಲ ಕೊಯಿಂಗಾಜೆ, ನಂದರಜ ಸಂಕೇಶ, ಲಕ್ಷ್ಮಣ ಶೆಣೈ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

8 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

20 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 day ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago