ಸವಿರುಚಿ

ಮೋದಕ ಪ್ರಿಯನಿಗೆ .. .. ಸಿಹಿ ಸಿಹಿ..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೋದಕ ಪ್ರಿಯ ಗಣೇಶನಿಗೆ ಸಿಹಿ ಎಂದರೆ ಅಚ್ಚುಮೆಚ್ಚು. ಈ ಸಂದರ್ಭ ಕೆಲವೊಂದು ಸಿಹಿಗಳ ಬಗ್ಗೆ ಇಲ್ಲಿದೆ ಮಾಹಿತಿ…

Advertisement

ಅಮೃತ ಫಲ:

ಬೇಕಾಗುವ ಸಾಮಾನು: 1 ಲೋಟ ತೆಂಗಿನ ಹಾಲು, 1 ಲೋಟ ಹಾಲು, 1 ಲೋಟ ಸಕ್ಕರೆ ಎಲಕ್ಕಿಪುಡಿ ಮತ್ತು ತುಪ್ಪ

ವಿಧಾನ : ತೆಂಗಿನ ಹಾಲು, ಸಕ್ಕರೆ, ಹಾಲು ಒಟ್ಟಿಗೆ ಬಾಣಲೆಯಲ್ಲಿ ಹಾಕಿ ಒಲೆಯ ಮೇಲಿಟ್ಟು ಕಲಕುತ್ತಿರಬೇಕು. ದಪ್ಪ ಆಗುತ್ತಾ ಬರುವಾಗ ತಳ ಬಿಡುತ್ತದೆ ಆಗ ಎಲಕ್ಕಿ ಪುಡಿ ಹಾಕಿ. ಆನಂತರ ತುಪ್ಪ ಸವರಿದ ತಟ್ಟೆಗೆ ಹಾಕಿ ಹರಡಿ. ತಣಿದ ನಂತರ ಬೇಕಾದ ಆಕಾರಕ್ಕೆ ಕತ್ತರಿಸಿ.


—————————–

ಪದರು ಪೇಣಿ:
ಬೇಕಾಗುವ ಸಾಮಾನು: 2 ಲೋಟ ಮೈದಾ ಹಿಟ್ಟು, ಎರಡೂವರೆ ಲೋಟ ಸಕ್ಕರೆ, 1 ಲೋಟ ತುಪ್ಪ, ಕೇಸರಿ ಬಣ್ಣ ಚಿಟಿಕೆ.

ವಿಧಾನ : ಮೈದಾ ಹಿಟ್ಟನ್ನು ಒಂದು ಮುಷ್ಠಿ ತೆಗೆದಿಟ್ಟು, ಉಳಿದ ಹಿಟ್ಟಿಗೆ 2ಚ.ತುಪ್ಪ ಹಾಕಿ ಬೆರೆಸಿ ಆನಂತರ ನೀರು ಸೇರಿಸಿ ಪೂರಿ ಹಿಟ್ಟಿನ ಹಾಗೆ ನಾದಿ ಇಟ್ಟುಕೊಳ್ಳಿ. ತೆಳುವಾಗಿ ಚಪಾತಿಯಂತೆ ಲಟ್ಟಿಸಿಕೊಂಡು ಒಂದರ ಮೇಲೆ ಗಟ್ಟಿ ತುಪ್ಪ ಹಚ್ಚಿ ಅದರ ಮೇಲೆ ಮತ್ತೊಂದು ಲಟ್ಟಿಸಿದ ಚಪಾತಿ ಇಟ್ಟು ತುಪ್ಪ ಹಚ್ಚಿ ಹೀಗೆ 3 ಅಥವಾ 4 ಇಟ್ಟು ಚಾಪೆಯಂತೆ ಸುತ್ತಿ 1 ಇಂಚಿನಂತೆ ಕಟ್ ಮಾಡಿ. ನೇರವಾಗಿಟ್ಟು ಪುನಃ ಲಟ್ಟಿಸಿ ತುಪ್ಪದಲ್ಲಿ ಗರಿ ಗರಿಯಾಗಿ ಕರಿಯಬೇಕು. (ಸಕ್ಕರೆಯನ್ನು ಎಳೆ ಪಾಕ ಮಾಡಿಟ್ಟುಕೊಂಡು ಬಣ್ಣ ಹಾಕಿ ಇಡಿ.) ಸಕ್ಕರೆ ಪಾಕಕ್ಕೆ ಹಾಕಿ 5 ನಿಮಿಷದ ನಂತರ ತೆಗೆದಿಡಿ.

————————-

ಕರ್ಜಿಕಾಯಿ

ಬೇಕಾಗುವ ಸಾಮಾನು :ಅರ್ಧ ಕೆ.ಜಿ ಚಿರೋಟಿ ರವೆ, ಮೈದಾ ಕಾಲು ಕೆ.ಜಿ., ಕೊಬ್ಬರಿ 500 ಗ್ರಾಂ., ಸಕ್ಕರೆ 500 ಗ್ರಾಂ. ಕರಿಯಲು ಎಣ್ಣೆ ಅರ್ಧ ಕೆ.ಜಿ, ಎಲಕ್ಕಿ 5

ವಿಧಾನ : ಕೊಬ್ಬರಿಯನ್ನು ತುರಿದು ಅದನ್ನು ಪುಡಿ ಮಾಡಿಕೊಂಡು ಅದಕ್ಕೆ ಎಲಕ್ಕಿ ಪುಡಿ ಮತ್ತು ಸಕ್ಕರೆ ಪುಡಿ ಸೇರಿಸಿ ಬೆರೆಸಿ ಇಡಿ.
ಮೈದಾ ಮತ್ತು ರವೆಗೆ ಸ್ವಲ್ಪ ತುಪ್ಪ ಹಾಕಿ, ನೀರು ಸೇರಿಸಿ ಕಲಿಸಿದ ಹಿಟ್ಟನ್ನು ನಿಂಬೆಗಾತ್ರಕ್ಕೆ ಉಂಡೆ ಮಾಡಿ ಚಪಾತಿಯಂತೆ ಲಟ್ಟಿಸಿ ಅದರೊಳಗೆ ಕೊಬ್ಬರಿ ಮಿಶ್ರಣವನ್ನು ಇಟ್ಟು ಅಂಚನ್ನು ಮುಚ್ಚಿ ಕಾದ ಎಣ್ಣೆಯಲ್ಲಿ ಚಿನ್ನದ ಬಣ್ಣ ಬರುವಂತೆ ಕರಿಯಿರಿ.

 

ಬರಹ:

ಚಿತ್ರಾ ಮಟ್ಟಿ

ಚಿತ್ರಾ ಮಟ್ಟಿ
ಬಿಡಿಒ ಹಿಂಬದಿ ಸುಳ್ಯ
9448461676

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈ ಪಾತ್ರೆಗೆ ಕ್ಷಯವಿಲ್ಲ!

ಬರಿದಾಗದು, ಜ್ಞಾನದ ಅಕ್ಷಯ ಪಾತ್ರೆ. ಬದುಕಿನ ಕೊನೆಯ ವರೆಗೂ ಜತೆಯಲ್ಲಿರುವುದು ಜ್ಞಾನ ಮಾತ್ರ.…

3 hours ago

ಕ್ಯಾಂಪ್ಕೊ ಬ್ರ್ಯಾಂಡ್ ಅಡಿಕೆ ಅಂತರಾಷ್ಟ್ರೀಯ ಮಟ್ಟಕ್ಕೆ

ಅಡಿಕೆಯ ಗುಣಮಟ್ಟದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲೂ "ಕ್ಯಾಂಪ್ಕೋ ಬ್ರಾಂಡ್‌ ಅಡಿಕೆ" ಗೆ ಪ್ರತ್ಯೇಕವಾದ…

12 hours ago

ಬಂಡಿಪುರ ಅರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ಚರ್ಚಿಸಿ ನಿರ್ಧಾರ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ರಕ್ಷಿತಾರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವು ಕುರಿತು ಮುಖ್ಯಮಂತ್ರಿ ಹಾಗೂ…

1 day ago

ಬೇಸಿಗೆ ಹಿನ್ನೆಲೆ | ರಾಜ್ಯದ ಜಲಾಶಯಗಳಿಂದ ಕುಡಿಯುವ ನೀರು ಬಿಡುಗಡೆ ಕುರಿತು ಚರ್ಚೆ

ರಾಜ್ಯದಲ್ಲಿ ಬಿರು ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ರಾಜ್ಯದ ಜಲಾಶಯಗಳಿಂದ ನೀರು…

1 day ago

ವಿಶೇಷ ಕಾಫಿ ಉತ್ಪನ್ನಗಳ ಬಿಡುಗಡೆ | ಡಿಪ್ ಕಾಫಿ ಬ್ಯಾಗ್ ಗಳನ್ನು ಪರಿಚಯಿಸಿದ ಕಾಫಿ ಬೋರ್ಡ್

ಭಾರತೀಯ ಕಾಫಿ ಮಂಡಳಿ ತಯಾರಿಸಿದ ಜಿಐ-ಟ್ಯಾಗ್ ಮಾಡಿದ  ವಿಶೇಷ ಡಿಪ್ ಕಾಫಿ ಬ್ಯಾಗ್…

1 day ago

ರಸಗೊಬ್ಬರಗಳ ಬೆಲೆ ಸ್ಥಿರವಾಗಿರಿಸಲು ಕ್ರಮ | 45 ಕೆ.ಜಿ. ಯೂರಿಯಾ ಬೆಲೆ 242 ರೂ.ಗೆ ನಿಗದಿ

ದೇಶದಲ್ಲಿ  ರಸಗೊಬ್ಬರಗಳ ಬೆಲೆ ಇಳಿಕೆ   ಕುರಿತಂತೆ  ಸದಸ್ಯರು ಕೇಳಿದ ಪ್ರಶ್ನೆಗೆ  ಉತ್ತರಿಸಿದ ಕೇಂದ್ರ…

1 day ago