Advertisement
ಸವಿರುಚಿ

ಮೋದಕ ಪ್ರಿಯನಿಗೆ .. .. ಸಿಹಿ ಸಿಹಿ..

Share

ಮೋದಕ ಪ್ರಿಯ ಗಣೇಶನಿಗೆ ಸಿಹಿ ಎಂದರೆ ಅಚ್ಚುಮೆಚ್ಚು. ಈ ಸಂದರ್ಭ ಕೆಲವೊಂದು ಸಿಹಿಗಳ ಬಗ್ಗೆ ಇಲ್ಲಿದೆ ಮಾಹಿತಿ…

Advertisement
Advertisement

ಅಮೃತ ಫಲ:

ಬೇಕಾಗುವ ಸಾಮಾನು: 1 ಲೋಟ ತೆಂಗಿನ ಹಾಲು, 1 ಲೋಟ ಹಾಲು, 1 ಲೋಟ ಸಕ್ಕರೆ ಎಲಕ್ಕಿಪುಡಿ ಮತ್ತು ತುಪ್ಪ

ವಿಧಾನ : ತೆಂಗಿನ ಹಾಲು, ಸಕ್ಕರೆ, ಹಾಲು ಒಟ್ಟಿಗೆ ಬಾಣಲೆಯಲ್ಲಿ ಹಾಕಿ ಒಲೆಯ ಮೇಲಿಟ್ಟು ಕಲಕುತ್ತಿರಬೇಕು. ದಪ್ಪ ಆಗುತ್ತಾ ಬರುವಾಗ ತಳ ಬಿಡುತ್ತದೆ ಆಗ ಎಲಕ್ಕಿ ಪುಡಿ ಹಾಕಿ. ಆನಂತರ ತುಪ್ಪ ಸವರಿದ ತಟ್ಟೆಗೆ ಹಾಕಿ ಹರಡಿ. ತಣಿದ ನಂತರ ಬೇಕಾದ ಆಕಾರಕ್ಕೆ ಕತ್ತರಿಸಿ.


—————————–

ಪದರು ಪೇಣಿ:
ಬೇಕಾಗುವ ಸಾಮಾನು: 2 ಲೋಟ ಮೈದಾ ಹಿಟ್ಟು, ಎರಡೂವರೆ ಲೋಟ ಸಕ್ಕರೆ, 1 ಲೋಟ ತುಪ್ಪ, ಕೇಸರಿ ಬಣ್ಣ ಚಿಟಿಕೆ.

ವಿಧಾನ : ಮೈದಾ ಹಿಟ್ಟನ್ನು ಒಂದು ಮುಷ್ಠಿ ತೆಗೆದಿಟ್ಟು, ಉಳಿದ ಹಿಟ್ಟಿಗೆ 2ಚ.ತುಪ್ಪ ಹಾಕಿ ಬೆರೆಸಿ ಆನಂತರ ನೀರು ಸೇರಿಸಿ ಪೂರಿ ಹಿಟ್ಟಿನ ಹಾಗೆ ನಾದಿ ಇಟ್ಟುಕೊಳ್ಳಿ. ತೆಳುವಾಗಿ ಚಪಾತಿಯಂತೆ ಲಟ್ಟಿಸಿಕೊಂಡು ಒಂದರ ಮೇಲೆ ಗಟ್ಟಿ ತುಪ್ಪ ಹಚ್ಚಿ ಅದರ ಮೇಲೆ ಮತ್ತೊಂದು ಲಟ್ಟಿಸಿದ ಚಪಾತಿ ಇಟ್ಟು ತುಪ್ಪ ಹಚ್ಚಿ ಹೀಗೆ 3 ಅಥವಾ 4 ಇಟ್ಟು ಚಾಪೆಯಂತೆ ಸುತ್ತಿ 1 ಇಂಚಿನಂತೆ ಕಟ್ ಮಾಡಿ. ನೇರವಾಗಿಟ್ಟು ಪುನಃ ಲಟ್ಟಿಸಿ ತುಪ್ಪದಲ್ಲಿ ಗರಿ ಗರಿಯಾಗಿ ಕರಿಯಬೇಕು. (ಸಕ್ಕರೆಯನ್ನು ಎಳೆ ಪಾಕ ಮಾಡಿಟ್ಟುಕೊಂಡು ಬಣ್ಣ ಹಾಕಿ ಇಡಿ.) ಸಕ್ಕರೆ ಪಾಕಕ್ಕೆ ಹಾಕಿ 5 ನಿಮಿಷದ ನಂತರ ತೆಗೆದಿಡಿ.

————————-

ಕರ್ಜಿಕಾಯಿ

ಬೇಕಾಗುವ ಸಾಮಾನು :ಅರ್ಧ ಕೆ.ಜಿ ಚಿರೋಟಿ ರವೆ, ಮೈದಾ ಕಾಲು ಕೆ.ಜಿ., ಕೊಬ್ಬರಿ 500 ಗ್ರಾಂ., ಸಕ್ಕರೆ 500 ಗ್ರಾಂ. ಕರಿಯಲು ಎಣ್ಣೆ ಅರ್ಧ ಕೆ.ಜಿ, ಎಲಕ್ಕಿ 5

ವಿಧಾನ : ಕೊಬ್ಬರಿಯನ್ನು ತುರಿದು ಅದನ್ನು ಪುಡಿ ಮಾಡಿಕೊಂಡು ಅದಕ್ಕೆ ಎಲಕ್ಕಿ ಪುಡಿ ಮತ್ತು ಸಕ್ಕರೆ ಪುಡಿ ಸೇರಿಸಿ ಬೆರೆಸಿ ಇಡಿ.
ಮೈದಾ ಮತ್ತು ರವೆಗೆ ಸ್ವಲ್ಪ ತುಪ್ಪ ಹಾಕಿ, ನೀರು ಸೇರಿಸಿ ಕಲಿಸಿದ ಹಿಟ್ಟನ್ನು ನಿಂಬೆಗಾತ್ರಕ್ಕೆ ಉಂಡೆ ಮಾಡಿ ಚಪಾತಿಯಂತೆ ಲಟ್ಟಿಸಿ ಅದರೊಳಗೆ ಕೊಬ್ಬರಿ ಮಿಶ್ರಣವನ್ನು ಇಟ್ಟು ಅಂಚನ್ನು ಮುಚ್ಚಿ ಕಾದ ಎಣ್ಣೆಯಲ್ಲಿ ಚಿನ್ನದ ಬಣ್ಣ ಬರುವಂತೆ ಕರಿಯಿರಿ.

 

ಬರಹ:

ಚಿತ್ರಾ ಮಟ್ಟಿ

ಚಿತ್ರಾ ಮಟ್ಟಿ
ಬಿಡಿಒ ಹಿಂಬದಿ ಸುಳ್ಯ
9448461676

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

14 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

14 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago