Advertisement
ಸವಿರುಚಿ

ಮೋದಕ ಪ್ರಿಯನಿಗೆ .. .. ಸಿಹಿ ಸಿಹಿ..

Share

ಮೋದಕ ಪ್ರಿಯ ಗಣೇಶನಿಗೆ ಸಿಹಿ ಎಂದರೆ ಅಚ್ಚುಮೆಚ್ಚು. ಈ ಸಂದರ್ಭ ಕೆಲವೊಂದು ಸಿಹಿಗಳ ಬಗ್ಗೆ ಇಲ್ಲಿದೆ ಮಾಹಿತಿ…

ಅಮೃತ ಫಲ:

ಬೇಕಾಗುವ ಸಾಮಾನು: 1 ಲೋಟ ತೆಂಗಿನ ಹಾಲು, 1 ಲೋಟ ಹಾಲು, 1 ಲೋಟ ಸಕ್ಕರೆ ಎಲಕ್ಕಿಪುಡಿ ಮತ್ತು ತುಪ್ಪ

ವಿಧಾನ : ತೆಂಗಿನ ಹಾಲು, ಸಕ್ಕರೆ, ಹಾಲು ಒಟ್ಟಿಗೆ ಬಾಣಲೆಯಲ್ಲಿ ಹಾಕಿ ಒಲೆಯ ಮೇಲಿಟ್ಟು ಕಲಕುತ್ತಿರಬೇಕು. ದಪ್ಪ ಆಗುತ್ತಾ ಬರುವಾಗ ತಳ ಬಿಡುತ್ತದೆ ಆಗ ಎಲಕ್ಕಿ ಪುಡಿ ಹಾಕಿ. ಆನಂತರ ತುಪ್ಪ ಸವರಿದ ತಟ್ಟೆಗೆ ಹಾಕಿ ಹರಡಿ. ತಣಿದ ನಂತರ ಬೇಕಾದ ಆಕಾರಕ್ಕೆ ಕತ್ತರಿಸಿ.


—————————–

ಪದರು ಪೇಣಿ:
ಬೇಕಾಗುವ ಸಾಮಾನು: 2 ಲೋಟ ಮೈದಾ ಹಿಟ್ಟು, ಎರಡೂವರೆ ಲೋಟ ಸಕ್ಕರೆ, 1 ಲೋಟ ತುಪ್ಪ, ಕೇಸರಿ ಬಣ್ಣ ಚಿಟಿಕೆ.

ವಿಧಾನ : ಮೈದಾ ಹಿಟ್ಟನ್ನು ಒಂದು ಮುಷ್ಠಿ ತೆಗೆದಿಟ್ಟು, ಉಳಿದ ಹಿಟ್ಟಿಗೆ 2ಚ.ತುಪ್ಪ ಹಾಕಿ ಬೆರೆಸಿ ಆನಂತರ ನೀರು ಸೇರಿಸಿ ಪೂರಿ ಹಿಟ್ಟಿನ ಹಾಗೆ ನಾದಿ ಇಟ್ಟುಕೊಳ್ಳಿ. ತೆಳುವಾಗಿ ಚಪಾತಿಯಂತೆ ಲಟ್ಟಿಸಿಕೊಂಡು ಒಂದರ ಮೇಲೆ ಗಟ್ಟಿ ತುಪ್ಪ ಹಚ್ಚಿ ಅದರ ಮೇಲೆ ಮತ್ತೊಂದು ಲಟ್ಟಿಸಿದ ಚಪಾತಿ ಇಟ್ಟು ತುಪ್ಪ ಹಚ್ಚಿ ಹೀಗೆ 3 ಅಥವಾ 4 ಇಟ್ಟು ಚಾಪೆಯಂತೆ ಸುತ್ತಿ 1 ಇಂಚಿನಂತೆ ಕಟ್ ಮಾಡಿ. ನೇರವಾಗಿಟ್ಟು ಪುನಃ ಲಟ್ಟಿಸಿ ತುಪ್ಪದಲ್ಲಿ ಗರಿ ಗರಿಯಾಗಿ ಕರಿಯಬೇಕು. (ಸಕ್ಕರೆಯನ್ನು ಎಳೆ ಪಾಕ ಮಾಡಿಟ್ಟುಕೊಂಡು ಬಣ್ಣ ಹಾಕಿ ಇಡಿ.) ಸಕ್ಕರೆ ಪಾಕಕ್ಕೆ ಹಾಕಿ 5 ನಿಮಿಷದ ನಂತರ ತೆಗೆದಿಡಿ.

————————-

ಕರ್ಜಿಕಾಯಿ

ಬೇಕಾಗುವ ಸಾಮಾನು :ಅರ್ಧ ಕೆ.ಜಿ ಚಿರೋಟಿ ರವೆ, ಮೈದಾ ಕಾಲು ಕೆ.ಜಿ., ಕೊಬ್ಬರಿ 500 ಗ್ರಾಂ., ಸಕ್ಕರೆ 500 ಗ್ರಾಂ. ಕರಿಯಲು ಎಣ್ಣೆ ಅರ್ಧ ಕೆ.ಜಿ, ಎಲಕ್ಕಿ 5

ವಿಧಾನ : ಕೊಬ್ಬರಿಯನ್ನು ತುರಿದು ಅದನ್ನು ಪುಡಿ ಮಾಡಿಕೊಂಡು ಅದಕ್ಕೆ ಎಲಕ್ಕಿ ಪುಡಿ ಮತ್ತು ಸಕ್ಕರೆ ಪುಡಿ ಸೇರಿಸಿ ಬೆರೆಸಿ ಇಡಿ.
ಮೈದಾ ಮತ್ತು ರವೆಗೆ ಸ್ವಲ್ಪ ತುಪ್ಪ ಹಾಕಿ, ನೀರು ಸೇರಿಸಿ ಕಲಿಸಿದ ಹಿಟ್ಟನ್ನು ನಿಂಬೆಗಾತ್ರಕ್ಕೆ ಉಂಡೆ ಮಾಡಿ ಚಪಾತಿಯಂತೆ ಲಟ್ಟಿಸಿ ಅದರೊಳಗೆ ಕೊಬ್ಬರಿ ಮಿಶ್ರಣವನ್ನು ಇಟ್ಟು ಅಂಚನ್ನು ಮುಚ್ಚಿ ಕಾದ ಎಣ್ಣೆಯಲ್ಲಿ ಚಿನ್ನದ ಬಣ್ಣ ಬರುವಂತೆ ಕರಿಯಿರಿ.

 

ಬರಹ:

ಚಿತ್ರಾ ಮಟ್ಟಿ

ಚಿತ್ರಾ ಮಟ್ಟಿ
ಬಿಡಿಒ ಹಿಂಬದಿ ಸುಳ್ಯ
9448461676

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

6 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

15 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

16 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

20 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

21 hours ago