Advertisement
ಸವಿರುಚಿ

ಮೋದಕ ಪ್ರಿಯನಿಗೆ .. .. ಸಿಹಿ ಸಿಹಿ..

Share

ಮೋದಕ ಪ್ರಿಯ ಗಣೇಶನಿಗೆ ಸಿಹಿ ಎಂದರೆ ಅಚ್ಚುಮೆಚ್ಚು. ಈ ಸಂದರ್ಭ ಕೆಲವೊಂದು ಸಿಹಿಗಳ ಬಗ್ಗೆ ಇಲ್ಲಿದೆ ಮಾಹಿತಿ…

ಅಮೃತ ಫಲ:

ಬೇಕಾಗುವ ಸಾಮಾನು: 1 ಲೋಟ ತೆಂಗಿನ ಹಾಲು, 1 ಲೋಟ ಹಾಲು, 1 ಲೋಟ ಸಕ್ಕರೆ ಎಲಕ್ಕಿಪುಡಿ ಮತ್ತು ತುಪ್ಪ

ವಿಧಾನ : ತೆಂಗಿನ ಹಾಲು, ಸಕ್ಕರೆ, ಹಾಲು ಒಟ್ಟಿಗೆ ಬಾಣಲೆಯಲ್ಲಿ ಹಾಕಿ ಒಲೆಯ ಮೇಲಿಟ್ಟು ಕಲಕುತ್ತಿರಬೇಕು. ದಪ್ಪ ಆಗುತ್ತಾ ಬರುವಾಗ ತಳ ಬಿಡುತ್ತದೆ ಆಗ ಎಲಕ್ಕಿ ಪುಡಿ ಹಾಕಿ. ಆನಂತರ ತುಪ್ಪ ಸವರಿದ ತಟ್ಟೆಗೆ ಹಾಕಿ ಹರಡಿ. ತಣಿದ ನಂತರ ಬೇಕಾದ ಆಕಾರಕ್ಕೆ ಕತ್ತರಿಸಿ.


—————————–

ಪದರು ಪೇಣಿ:
ಬೇಕಾಗುವ ಸಾಮಾನು: 2 ಲೋಟ ಮೈದಾ ಹಿಟ್ಟು, ಎರಡೂವರೆ ಲೋಟ ಸಕ್ಕರೆ, 1 ಲೋಟ ತುಪ್ಪ, ಕೇಸರಿ ಬಣ್ಣ ಚಿಟಿಕೆ.

ವಿಧಾನ : ಮೈದಾ ಹಿಟ್ಟನ್ನು ಒಂದು ಮುಷ್ಠಿ ತೆಗೆದಿಟ್ಟು, ಉಳಿದ ಹಿಟ್ಟಿಗೆ 2ಚ.ತುಪ್ಪ ಹಾಕಿ ಬೆರೆಸಿ ಆನಂತರ ನೀರು ಸೇರಿಸಿ ಪೂರಿ ಹಿಟ್ಟಿನ ಹಾಗೆ ನಾದಿ ಇಟ್ಟುಕೊಳ್ಳಿ. ತೆಳುವಾಗಿ ಚಪಾತಿಯಂತೆ ಲಟ್ಟಿಸಿಕೊಂಡು ಒಂದರ ಮೇಲೆ ಗಟ್ಟಿ ತುಪ್ಪ ಹಚ್ಚಿ ಅದರ ಮೇಲೆ ಮತ್ತೊಂದು ಲಟ್ಟಿಸಿದ ಚಪಾತಿ ಇಟ್ಟು ತುಪ್ಪ ಹಚ್ಚಿ ಹೀಗೆ 3 ಅಥವಾ 4 ಇಟ್ಟು ಚಾಪೆಯಂತೆ ಸುತ್ತಿ 1 ಇಂಚಿನಂತೆ ಕಟ್ ಮಾಡಿ. ನೇರವಾಗಿಟ್ಟು ಪುನಃ ಲಟ್ಟಿಸಿ ತುಪ್ಪದಲ್ಲಿ ಗರಿ ಗರಿಯಾಗಿ ಕರಿಯಬೇಕು. (ಸಕ್ಕರೆಯನ್ನು ಎಳೆ ಪಾಕ ಮಾಡಿಟ್ಟುಕೊಂಡು ಬಣ್ಣ ಹಾಕಿ ಇಡಿ.) ಸಕ್ಕರೆ ಪಾಕಕ್ಕೆ ಹಾಕಿ 5 ನಿಮಿಷದ ನಂತರ ತೆಗೆದಿಡಿ.

————————-

ಕರ್ಜಿಕಾಯಿ

ಬೇಕಾಗುವ ಸಾಮಾನು :ಅರ್ಧ ಕೆ.ಜಿ ಚಿರೋಟಿ ರವೆ, ಮೈದಾ ಕಾಲು ಕೆ.ಜಿ., ಕೊಬ್ಬರಿ 500 ಗ್ರಾಂ., ಸಕ್ಕರೆ 500 ಗ್ರಾಂ. ಕರಿಯಲು ಎಣ್ಣೆ ಅರ್ಧ ಕೆ.ಜಿ, ಎಲಕ್ಕಿ 5

ವಿಧಾನ : ಕೊಬ್ಬರಿಯನ್ನು ತುರಿದು ಅದನ್ನು ಪುಡಿ ಮಾಡಿಕೊಂಡು ಅದಕ್ಕೆ ಎಲಕ್ಕಿ ಪುಡಿ ಮತ್ತು ಸಕ್ಕರೆ ಪುಡಿ ಸೇರಿಸಿ ಬೆರೆಸಿ ಇಡಿ.
ಮೈದಾ ಮತ್ತು ರವೆಗೆ ಸ್ವಲ್ಪ ತುಪ್ಪ ಹಾಕಿ, ನೀರು ಸೇರಿಸಿ ಕಲಿಸಿದ ಹಿಟ್ಟನ್ನು ನಿಂಬೆಗಾತ್ರಕ್ಕೆ ಉಂಡೆ ಮಾಡಿ ಚಪಾತಿಯಂತೆ ಲಟ್ಟಿಸಿ ಅದರೊಳಗೆ ಕೊಬ್ಬರಿ ಮಿಶ್ರಣವನ್ನು ಇಟ್ಟು ಅಂಚನ್ನು ಮುಚ್ಚಿ ಕಾದ ಎಣ್ಣೆಯಲ್ಲಿ ಚಿನ್ನದ ಬಣ್ಣ ಬರುವಂತೆ ಕರಿಯಿರಿ.

 

ಬರಹ:

ಚಿತ್ರಾ ಮಟ್ಟಿ

ಚಿತ್ರಾ ಮಟ್ಟಿ
ಬಿಡಿಒ ಹಿಂಬದಿ ಸುಳ್ಯ
9448461676

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

6 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

9 hours ago

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

13 hours ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

23 hours ago