Advertisement
ಸವಿರುಚಿ

ಮೋದಕ ಪ್ರಿಯನಿಗೆ .. .. ಸಿಹಿ ಸಿಹಿ..

Share

ಮೋದಕ ಪ್ರಿಯ ಗಣೇಶನಿಗೆ ಸಿಹಿ ಎಂದರೆ ಅಚ್ಚುಮೆಚ್ಚು. ಈ ಸಂದರ್ಭ ಕೆಲವೊಂದು ಸಿಹಿಗಳ ಬಗ್ಗೆ ಇಲ್ಲಿದೆ ಮಾಹಿತಿ…

ಅಮೃತ ಫಲ:

ಬೇಕಾಗುವ ಸಾಮಾನು: 1 ಲೋಟ ತೆಂಗಿನ ಹಾಲು, 1 ಲೋಟ ಹಾಲು, 1 ಲೋಟ ಸಕ್ಕರೆ ಎಲಕ್ಕಿಪುಡಿ ಮತ್ತು ತುಪ್ಪ

ವಿಧಾನ : ತೆಂಗಿನ ಹಾಲು, ಸಕ್ಕರೆ, ಹಾಲು ಒಟ್ಟಿಗೆ ಬಾಣಲೆಯಲ್ಲಿ ಹಾಕಿ ಒಲೆಯ ಮೇಲಿಟ್ಟು ಕಲಕುತ್ತಿರಬೇಕು. ದಪ್ಪ ಆಗುತ್ತಾ ಬರುವಾಗ ತಳ ಬಿಡುತ್ತದೆ ಆಗ ಎಲಕ್ಕಿ ಪುಡಿ ಹಾಕಿ. ಆನಂತರ ತುಪ್ಪ ಸವರಿದ ತಟ್ಟೆಗೆ ಹಾಕಿ ಹರಡಿ. ತಣಿದ ನಂತರ ಬೇಕಾದ ಆಕಾರಕ್ಕೆ ಕತ್ತರಿಸಿ.


—————————–

ಪದರು ಪೇಣಿ:
ಬೇಕಾಗುವ ಸಾಮಾನು: 2 ಲೋಟ ಮೈದಾ ಹಿಟ್ಟು, ಎರಡೂವರೆ ಲೋಟ ಸಕ್ಕರೆ, 1 ಲೋಟ ತುಪ್ಪ, ಕೇಸರಿ ಬಣ್ಣ ಚಿಟಿಕೆ.

ವಿಧಾನ : ಮೈದಾ ಹಿಟ್ಟನ್ನು ಒಂದು ಮುಷ್ಠಿ ತೆಗೆದಿಟ್ಟು, ಉಳಿದ ಹಿಟ್ಟಿಗೆ 2ಚ.ತುಪ್ಪ ಹಾಕಿ ಬೆರೆಸಿ ಆನಂತರ ನೀರು ಸೇರಿಸಿ ಪೂರಿ ಹಿಟ್ಟಿನ ಹಾಗೆ ನಾದಿ ಇಟ್ಟುಕೊಳ್ಳಿ. ತೆಳುವಾಗಿ ಚಪಾತಿಯಂತೆ ಲಟ್ಟಿಸಿಕೊಂಡು ಒಂದರ ಮೇಲೆ ಗಟ್ಟಿ ತುಪ್ಪ ಹಚ್ಚಿ ಅದರ ಮೇಲೆ ಮತ್ತೊಂದು ಲಟ್ಟಿಸಿದ ಚಪಾತಿ ಇಟ್ಟು ತುಪ್ಪ ಹಚ್ಚಿ ಹೀಗೆ 3 ಅಥವಾ 4 ಇಟ್ಟು ಚಾಪೆಯಂತೆ ಸುತ್ತಿ 1 ಇಂಚಿನಂತೆ ಕಟ್ ಮಾಡಿ. ನೇರವಾಗಿಟ್ಟು ಪುನಃ ಲಟ್ಟಿಸಿ ತುಪ್ಪದಲ್ಲಿ ಗರಿ ಗರಿಯಾಗಿ ಕರಿಯಬೇಕು. (ಸಕ್ಕರೆಯನ್ನು ಎಳೆ ಪಾಕ ಮಾಡಿಟ್ಟುಕೊಂಡು ಬಣ್ಣ ಹಾಕಿ ಇಡಿ.) ಸಕ್ಕರೆ ಪಾಕಕ್ಕೆ ಹಾಕಿ 5 ನಿಮಿಷದ ನಂತರ ತೆಗೆದಿಡಿ.

————————-

ಕರ್ಜಿಕಾಯಿ

ಬೇಕಾಗುವ ಸಾಮಾನು :ಅರ್ಧ ಕೆ.ಜಿ ಚಿರೋಟಿ ರವೆ, ಮೈದಾ ಕಾಲು ಕೆ.ಜಿ., ಕೊಬ್ಬರಿ 500 ಗ್ರಾಂ., ಸಕ್ಕರೆ 500 ಗ್ರಾಂ. ಕರಿಯಲು ಎಣ್ಣೆ ಅರ್ಧ ಕೆ.ಜಿ, ಎಲಕ್ಕಿ 5

ವಿಧಾನ : ಕೊಬ್ಬರಿಯನ್ನು ತುರಿದು ಅದನ್ನು ಪುಡಿ ಮಾಡಿಕೊಂಡು ಅದಕ್ಕೆ ಎಲಕ್ಕಿ ಪುಡಿ ಮತ್ತು ಸಕ್ಕರೆ ಪುಡಿ ಸೇರಿಸಿ ಬೆರೆಸಿ ಇಡಿ.
ಮೈದಾ ಮತ್ತು ರವೆಗೆ ಸ್ವಲ್ಪ ತುಪ್ಪ ಹಾಕಿ, ನೀರು ಸೇರಿಸಿ ಕಲಿಸಿದ ಹಿಟ್ಟನ್ನು ನಿಂಬೆಗಾತ್ರಕ್ಕೆ ಉಂಡೆ ಮಾಡಿ ಚಪಾತಿಯಂತೆ ಲಟ್ಟಿಸಿ ಅದರೊಳಗೆ ಕೊಬ್ಬರಿ ಮಿಶ್ರಣವನ್ನು ಇಟ್ಟು ಅಂಚನ್ನು ಮುಚ್ಚಿ ಕಾದ ಎಣ್ಣೆಯಲ್ಲಿ ಚಿನ್ನದ ಬಣ್ಣ ಬರುವಂತೆ ಕರಿಯಿರಿ.

 

ಬರಹ:

ಚಿತ್ರಾ ಮಟ್ಟಿ

ಚಿತ್ರಾ ಮಟ್ಟಿ
ಬಿಡಿಒ ಹಿಂಬದಿ ಸುಳ್ಯ
9448461676

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

1 hour ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

2 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

8 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

9 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

9 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

11 hours ago