Advertisement
ಸವಿರುಚಿ

ಮೋದಕ ಪ್ರಿಯನಿಗೆ .. .. ಸಿಹಿ ಸಿಹಿ..

Share

ಮೋದಕ ಪ್ರಿಯ ಗಣೇಶನಿಗೆ ಸಿಹಿ ಎಂದರೆ ಅಚ್ಚುಮೆಚ್ಚು. ಈ ಸಂದರ್ಭ ಕೆಲವೊಂದು ಸಿಹಿಗಳ ಬಗ್ಗೆ ಇಲ್ಲಿದೆ ಮಾಹಿತಿ…

ಅಮೃತ ಫಲ:

ಬೇಕಾಗುವ ಸಾಮಾನು: 1 ಲೋಟ ತೆಂಗಿನ ಹಾಲು, 1 ಲೋಟ ಹಾಲು, 1 ಲೋಟ ಸಕ್ಕರೆ ಎಲಕ್ಕಿಪುಡಿ ಮತ್ತು ತುಪ್ಪ

ವಿಧಾನ : ತೆಂಗಿನ ಹಾಲು, ಸಕ್ಕರೆ, ಹಾಲು ಒಟ್ಟಿಗೆ ಬಾಣಲೆಯಲ್ಲಿ ಹಾಕಿ ಒಲೆಯ ಮೇಲಿಟ್ಟು ಕಲಕುತ್ತಿರಬೇಕು. ದಪ್ಪ ಆಗುತ್ತಾ ಬರುವಾಗ ತಳ ಬಿಡುತ್ತದೆ ಆಗ ಎಲಕ್ಕಿ ಪುಡಿ ಹಾಕಿ. ಆನಂತರ ತುಪ್ಪ ಸವರಿದ ತಟ್ಟೆಗೆ ಹಾಕಿ ಹರಡಿ. ತಣಿದ ನಂತರ ಬೇಕಾದ ಆಕಾರಕ್ಕೆ ಕತ್ತರಿಸಿ.


—————————–

ಪದರು ಪೇಣಿ:
ಬೇಕಾಗುವ ಸಾಮಾನು: 2 ಲೋಟ ಮೈದಾ ಹಿಟ್ಟು, ಎರಡೂವರೆ ಲೋಟ ಸಕ್ಕರೆ, 1 ಲೋಟ ತುಪ್ಪ, ಕೇಸರಿ ಬಣ್ಣ ಚಿಟಿಕೆ.

ವಿಧಾನ : ಮೈದಾ ಹಿಟ್ಟನ್ನು ಒಂದು ಮುಷ್ಠಿ ತೆಗೆದಿಟ್ಟು, ಉಳಿದ ಹಿಟ್ಟಿಗೆ 2ಚ.ತುಪ್ಪ ಹಾಕಿ ಬೆರೆಸಿ ಆನಂತರ ನೀರು ಸೇರಿಸಿ ಪೂರಿ ಹಿಟ್ಟಿನ ಹಾಗೆ ನಾದಿ ಇಟ್ಟುಕೊಳ್ಳಿ. ತೆಳುವಾಗಿ ಚಪಾತಿಯಂತೆ ಲಟ್ಟಿಸಿಕೊಂಡು ಒಂದರ ಮೇಲೆ ಗಟ್ಟಿ ತುಪ್ಪ ಹಚ್ಚಿ ಅದರ ಮೇಲೆ ಮತ್ತೊಂದು ಲಟ್ಟಿಸಿದ ಚಪಾತಿ ಇಟ್ಟು ತುಪ್ಪ ಹಚ್ಚಿ ಹೀಗೆ 3 ಅಥವಾ 4 ಇಟ್ಟು ಚಾಪೆಯಂತೆ ಸುತ್ತಿ 1 ಇಂಚಿನಂತೆ ಕಟ್ ಮಾಡಿ. ನೇರವಾಗಿಟ್ಟು ಪುನಃ ಲಟ್ಟಿಸಿ ತುಪ್ಪದಲ್ಲಿ ಗರಿ ಗರಿಯಾಗಿ ಕರಿಯಬೇಕು. (ಸಕ್ಕರೆಯನ್ನು ಎಳೆ ಪಾಕ ಮಾಡಿಟ್ಟುಕೊಂಡು ಬಣ್ಣ ಹಾಕಿ ಇಡಿ.) ಸಕ್ಕರೆ ಪಾಕಕ್ಕೆ ಹಾಕಿ 5 ನಿಮಿಷದ ನಂತರ ತೆಗೆದಿಡಿ.

————————-

ಕರ್ಜಿಕಾಯಿ

ಬೇಕಾಗುವ ಸಾಮಾನು :ಅರ್ಧ ಕೆ.ಜಿ ಚಿರೋಟಿ ರವೆ, ಮೈದಾ ಕಾಲು ಕೆ.ಜಿ., ಕೊಬ್ಬರಿ 500 ಗ್ರಾಂ., ಸಕ್ಕರೆ 500 ಗ್ರಾಂ. ಕರಿಯಲು ಎಣ್ಣೆ ಅರ್ಧ ಕೆ.ಜಿ, ಎಲಕ್ಕಿ 5

ವಿಧಾನ : ಕೊಬ್ಬರಿಯನ್ನು ತುರಿದು ಅದನ್ನು ಪುಡಿ ಮಾಡಿಕೊಂಡು ಅದಕ್ಕೆ ಎಲಕ್ಕಿ ಪುಡಿ ಮತ್ತು ಸಕ್ಕರೆ ಪುಡಿ ಸೇರಿಸಿ ಬೆರೆಸಿ ಇಡಿ.
ಮೈದಾ ಮತ್ತು ರವೆಗೆ ಸ್ವಲ್ಪ ತುಪ್ಪ ಹಾಕಿ, ನೀರು ಸೇರಿಸಿ ಕಲಿಸಿದ ಹಿಟ್ಟನ್ನು ನಿಂಬೆಗಾತ್ರಕ್ಕೆ ಉಂಡೆ ಮಾಡಿ ಚಪಾತಿಯಂತೆ ಲಟ್ಟಿಸಿ ಅದರೊಳಗೆ ಕೊಬ್ಬರಿ ಮಿಶ್ರಣವನ್ನು ಇಟ್ಟು ಅಂಚನ್ನು ಮುಚ್ಚಿ ಕಾದ ಎಣ್ಣೆಯಲ್ಲಿ ಚಿನ್ನದ ಬಣ್ಣ ಬರುವಂತೆ ಕರಿಯಿರಿ.

 

ಬರಹ:

ಚಿತ್ರಾ ಮಟ್ಟಿ

ಚಿತ್ರಾ ಮಟ್ಟಿ
ಬಿಡಿಒ ಹಿಂಬದಿ ಸುಳ್ಯ
9448461676

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

9 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago