Advertisement
ಸವಿರುಚಿ

ಮೋದಕ ಪ್ರಿಯನಿಗೆ .. .. ಸಿಹಿ ಸಿಹಿ..

Share

ಮೋದಕ ಪ್ರಿಯ ಗಣೇಶನಿಗೆ ಸಿಹಿ ಎಂದರೆ ಅಚ್ಚುಮೆಚ್ಚು. ಈ ಸಂದರ್ಭ ಕೆಲವೊಂದು ಸಿಹಿಗಳ ಬಗ್ಗೆ ಇಲ್ಲಿದೆ ಮಾಹಿತಿ…

ಅಮೃತ ಫಲ:

ಬೇಕಾಗುವ ಸಾಮಾನು: 1 ಲೋಟ ತೆಂಗಿನ ಹಾಲು, 1 ಲೋಟ ಹಾಲು, 1 ಲೋಟ ಸಕ್ಕರೆ ಎಲಕ್ಕಿಪುಡಿ ಮತ್ತು ತುಪ್ಪ

ವಿಧಾನ : ತೆಂಗಿನ ಹಾಲು, ಸಕ್ಕರೆ, ಹಾಲು ಒಟ್ಟಿಗೆ ಬಾಣಲೆಯಲ್ಲಿ ಹಾಕಿ ಒಲೆಯ ಮೇಲಿಟ್ಟು ಕಲಕುತ್ತಿರಬೇಕು. ದಪ್ಪ ಆಗುತ್ತಾ ಬರುವಾಗ ತಳ ಬಿಡುತ್ತದೆ ಆಗ ಎಲಕ್ಕಿ ಪುಡಿ ಹಾಕಿ. ಆನಂತರ ತುಪ್ಪ ಸವರಿದ ತಟ್ಟೆಗೆ ಹಾಕಿ ಹರಡಿ. ತಣಿದ ನಂತರ ಬೇಕಾದ ಆಕಾರಕ್ಕೆ ಕತ್ತರಿಸಿ.


—————————–

ಪದರು ಪೇಣಿ:
ಬೇಕಾಗುವ ಸಾಮಾನು: 2 ಲೋಟ ಮೈದಾ ಹಿಟ್ಟು, ಎರಡೂವರೆ ಲೋಟ ಸಕ್ಕರೆ, 1 ಲೋಟ ತುಪ್ಪ, ಕೇಸರಿ ಬಣ್ಣ ಚಿಟಿಕೆ.

ವಿಧಾನ : ಮೈದಾ ಹಿಟ್ಟನ್ನು ಒಂದು ಮುಷ್ಠಿ ತೆಗೆದಿಟ್ಟು, ಉಳಿದ ಹಿಟ್ಟಿಗೆ 2ಚ.ತುಪ್ಪ ಹಾಕಿ ಬೆರೆಸಿ ಆನಂತರ ನೀರು ಸೇರಿಸಿ ಪೂರಿ ಹಿಟ್ಟಿನ ಹಾಗೆ ನಾದಿ ಇಟ್ಟುಕೊಳ್ಳಿ. ತೆಳುವಾಗಿ ಚಪಾತಿಯಂತೆ ಲಟ್ಟಿಸಿಕೊಂಡು ಒಂದರ ಮೇಲೆ ಗಟ್ಟಿ ತುಪ್ಪ ಹಚ್ಚಿ ಅದರ ಮೇಲೆ ಮತ್ತೊಂದು ಲಟ್ಟಿಸಿದ ಚಪಾತಿ ಇಟ್ಟು ತುಪ್ಪ ಹಚ್ಚಿ ಹೀಗೆ 3 ಅಥವಾ 4 ಇಟ್ಟು ಚಾಪೆಯಂತೆ ಸುತ್ತಿ 1 ಇಂಚಿನಂತೆ ಕಟ್ ಮಾಡಿ. ನೇರವಾಗಿಟ್ಟು ಪುನಃ ಲಟ್ಟಿಸಿ ತುಪ್ಪದಲ್ಲಿ ಗರಿ ಗರಿಯಾಗಿ ಕರಿಯಬೇಕು. (ಸಕ್ಕರೆಯನ್ನು ಎಳೆ ಪಾಕ ಮಾಡಿಟ್ಟುಕೊಂಡು ಬಣ್ಣ ಹಾಕಿ ಇಡಿ.) ಸಕ್ಕರೆ ಪಾಕಕ್ಕೆ ಹಾಕಿ 5 ನಿಮಿಷದ ನಂತರ ತೆಗೆದಿಡಿ.

————————-

ಕರ್ಜಿಕಾಯಿ

ಬೇಕಾಗುವ ಸಾಮಾನು :ಅರ್ಧ ಕೆ.ಜಿ ಚಿರೋಟಿ ರವೆ, ಮೈದಾ ಕಾಲು ಕೆ.ಜಿ., ಕೊಬ್ಬರಿ 500 ಗ್ರಾಂ., ಸಕ್ಕರೆ 500 ಗ್ರಾಂ. ಕರಿಯಲು ಎಣ್ಣೆ ಅರ್ಧ ಕೆ.ಜಿ, ಎಲಕ್ಕಿ 5

ವಿಧಾನ : ಕೊಬ್ಬರಿಯನ್ನು ತುರಿದು ಅದನ್ನು ಪುಡಿ ಮಾಡಿಕೊಂಡು ಅದಕ್ಕೆ ಎಲಕ್ಕಿ ಪುಡಿ ಮತ್ತು ಸಕ್ಕರೆ ಪುಡಿ ಸೇರಿಸಿ ಬೆರೆಸಿ ಇಡಿ.
ಮೈದಾ ಮತ್ತು ರವೆಗೆ ಸ್ವಲ್ಪ ತುಪ್ಪ ಹಾಕಿ, ನೀರು ಸೇರಿಸಿ ಕಲಿಸಿದ ಹಿಟ್ಟನ್ನು ನಿಂಬೆಗಾತ್ರಕ್ಕೆ ಉಂಡೆ ಮಾಡಿ ಚಪಾತಿಯಂತೆ ಲಟ್ಟಿಸಿ ಅದರೊಳಗೆ ಕೊಬ್ಬರಿ ಮಿಶ್ರಣವನ್ನು ಇಟ್ಟು ಅಂಚನ್ನು ಮುಚ್ಚಿ ಕಾದ ಎಣ್ಣೆಯಲ್ಲಿ ಚಿನ್ನದ ಬಣ್ಣ ಬರುವಂತೆ ಕರಿಯಿರಿ.

 

ಬರಹ:

ಚಿತ್ರಾ ಮಟ್ಟಿ

ಚಿತ್ರಾ ಮಟ್ಟಿ
ಬಿಡಿಒ ಹಿಂಬದಿ ಸುಳ್ಯ
9448461676

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

13 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

19 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago