Advertisement

ಮೋದಿ ದುರಾಡಳಿತದ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ : ಭರತ್ ಮುಂಡೋಡಿ

Share

ಸುಳ್ಯ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮನೆ-ಮನೆ ಭೇಟಿ ನೀಡುವ ವೇಳೆ ಮೋದಿ ಸರಕಾರದ ದುರಾಡಳಿತ ಬಗ್ಗೆ ಸ್ವತಃ ಜನರೇ ಮಾತನಾಡುತ್ತಿದ್ದಾರೆ. ಇಂತಹ ಜನವಿರೋಧಿ ಆಡಳಿತವನ್ನು ಕಿತ್ತೊಗೆಯಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಈ ಬಾರಿ ಮೋದಿ ಸರಕಾರ ಪತನಗೊಳ್ಳುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯದರ್ಶಿ ಭರತ್ ಮುಂಡೋಡಿ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನೋಟು ಬ್ಯಾನ್, ಜಿಎಸ್‍ಟಿ ಜಾರಿಯಿಂದ ಬಡವರು ಬೀದಿಗೆ ಬೀಳುವ ಸ್ಥಿತಿ ಉಂಟಾಗಿದೆ. ಇದೇ ವಿಚಾರವಾಗಿ ಜನರು ಅಸಹನೆ ವ್ಯಕ್ತಪಡಿಸಿದ್ದಾರೆ. ಪ್ರಚಾರದ ಸಂದರ್ಭ ಕಾಂಗ್ರೆಸ್ ಪರ ಸ್ಪಂದನೆ ದೊರೆತಿದೆ. ಹೀಗಾಗಿ ದ.ಕ.ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಭರ್ಜರಿ ಗೆಲುವು ದಾಖಲಿಸಲಿದ್ದಾರೆ ಎಂದು ಅವರು ಹೇಳಿದರು.
ನಳಿನ್ ಕುಮಾರ್ ಕಟೀಲು ಜಿಲ್ಲೆಗೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಬಿಎಸ್‍ಎನ್‍ಎಲ್ ದುಸ್ಥಿತಿ ಅದಕ್ಕೆ ಒಂದು ಉದಾಹರಣೆ. ಈ ಬಾರಿ ಲೋಕಸಭೆಯಲ್ಲಿ ಧ್ವನಿ ಎತ್ತಬಲ್ಲ ಸಮರ್ಥ ಅಭ್ಯರ್ಥಿ ಮಿಥುನ್ ರೈ ಅವರನ್ನು ಗೆಲ್ಲಿಸಲು ಜನರು ತೀರ್ಮಾನಿಸಿದ್ದಾರೆ ಎಂದರು ಅವರು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಮಾತನಾಡಿ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರು ಯಾರೆಂದು ಗೊತ್ತಿದ್ದರೂ, ಬಿಜೆಪಿ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ, ಈ ಪಕ್ಷದ ಧೋರಣೆ, ಭ್ರಷ್ಟಚಾರವನ್ನು ಸಮರ್ಥಿಸುವ ಮನೋಭಾವನೆಗೆ ಉದಾಹರಣೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಕೆಪಿಸಿಸಿ ಸದಸ್ಯ ಡಾ.ರಘು, ಎಸ್.ಸಂಶುದ್ದೀನ್, ಗೋಕುಲ್‍ದಾಸ್ ಕೆ, ಜೆಡಿಎಸ್ ಮುಖಂಡ ಜಾಕೆ ಮಾಧವ ಗೌಡ, ಜೂಲಿಯಾನ ಕ್ರಾಸ್ತ, ಓವಿನ್ ಪಿಂಟೋ, ಬೀರಾ ಮೊೈದೀನ್, ವಿನೂಪ್ ಮಲ್ಲಾರ, ಸತೀಶ್ ಕೆ, ಭವಾನಿಶಂಕರ ಕಲ್ಮಡ್ಕ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

1 hour ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago